Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...