Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...