Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...