Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...