Homeಕರ್ನಾಟಕಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

- Advertisement -
- Advertisement -

“ಅಲೆಮಾರಿಗಳು ಒಂದೆಡೆ ನೆಲೆಸಬಾರದು, ಅವರು ಯಾವಾಗಲೂ ಊರೂರು ಸುತ್ತುತ್ತಾ ಯಥಾಸ್ಥಿತಿಯಲ್ಲಿ ಬದುಕಬೇಕು, ಅವರ ಜೀವನ ಸದಾ ಅತಂತ್ರವಾಗಿರಬೇಕು ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಭಾವಿಸಿದ್ದಾರೆ” ಎಂದು ಮೈಸೂರು ತಾಲ್ಲೂಕಿನಲ್ಲಿ ವಾಸವಿರುವ ಅಲೆಮಾರಿ ಸಮುದಾಯಗಳು ಬೇಸರ ವ್ಯಕ್ತಪಡಿಸುತ್ತಿವೆ. ದಶಕಗಳಿಂದ ಮೈಸೂರು ತಾಲ್ಲೂಕಿನಲ್ಲಿ ಒಂದೆಡೆ ನೆಲೆಸಿರುವ ಅಲೆಮಾರಿಗಳನ್ನು ಕಾಲ್ಚಂಡಿನಂತೆ ಅಧಿಕಾರಿಗಳು ಆಟವಾಡಿಸತೊಡಗಿದ್ದಾರೆ ಎಂಬ ಆರೋಪಗಳು ಬಂದಿವೆ.

ಕಳೆದ ಹದಿನೈದು ದಿನಗಳಿಂದ (ಸೆ.15ರಿಂದ) ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಅಲೆಮಾರಿಗಳು ಹೋರಾಟಕ್ಕೆ ಕುಳಿತ್ತಿದ್ದಾರೆ. ಇವರ ಕೂಗನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಆಲಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲೆಮಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿ ಹೇಳುವುದೇನು?

ಹಕ್ಕಿಪಿಕ್ಕಿ, ದೊಂಬಿದಾಸ, ಶಿಳ್ಳೆಕ್ಯಾತ, ಬುಡುಬುಡುಕೆ ಇತರೆ ಅಲೆಮಾರಿ- ಅರೆ ಅಲೆಮಾರಿ ಸಮುದಾಯದ ಜನರು ಶತಶತಮಾನಗಳಿಂದಲೂ ಒಂದೆಡೆ ನೆಲೆ ನಿಲ್ಲಲಾಗದೆ ಪರದಾಡುತ್ತಿದ್ದಾರೆ. ಇಂತಹ ಸಮುದಾಯಗಳ ಕೆಲವು ಜನರು ಮೈಸೂರಿನ ಹೆಬ್ಬಾಳ ಕೆರೆಯ ಅಂಗಳದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಳ್ಳಲು ಯತ್ನಿಸಿದರು. ಕೆರೆ ಅಭಿವೃದ್ಧಿಪಡಿಸುವ ನೆಪದಲ್ಲಿ ಜಿಲ್ಲಾಡಳಿತ ಅಲೆಮಾರಿಗಳನ್ನು ಒಕ್ಕಲೆಬ್ಬಿಸಿತು. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಯಿತು. ಇದರ ಫಲವಾಗಿ ಜಿಲ್ಲಾಡಳಿತವು ಮೈಸೂರು ತಾಲ್ಲೂಕಿನ ಶ್ಯಾದನಹಳ್ಳಿ ಗ್ರಾಮದ ಸರ್ವೇ ನಂಬರ್‌ 53ರ ಸರ್ಕಾರಿ ಭೂಮಿಯನ್ನು ಗುರುತಿಸಿ, ಈ ಜನರು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸಲು ಮೌಖಿಕ ಆದೇಶದೊಂದಿಗೆ ಅವಕಾಶ ಕಲ್ಪಿಸಿತು.

12 ವರ್ಷಗಳ ಹಿಂದೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯವರು ಈ ಅಲೆಮಾರಿಗಳು ವಾಸವಿರುವ ಪ್ರದೇಶವನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಎಲ್ಲರಿಗೂ ಪ್ರತ್ಯೇಕವಾಗಿ ನೆಲ ಮಳಿಗೆಗಳನ್ನು ನಿರ್ಮಿಸಿಕೊಡುವುದಾಗಿ ವಾಗ್ದಾನ ನೀಡಿ ಈ ಜನರನ್ನು ಶ್ಯಾದನಹಳ್ಳಿ ಸರ್ವೇ ನಂ. 37ರ ಸರ್ಕಾರಿ ಗೋಮಾಳದ ಖಾಲಿ ಜಾಗಕ್ಕೆ ಸ್ಥಳಾಂತರಿಸಿದ್ದರು. ತದನಂತರ ಜಿಲ್ಲಾಡಳಿತವು ಈ ಜಾಗಕ್ಕೆ ‘ಏಕಲವ್ಯನಗರ’ ಎಂದು ಘೋಷಿಸಿ ಈ ಜನರಿಗೆ ಕುಡಿಯುವ ನೀರು, ವಿದ್ಯುತ್‌, ರಸ್ತೆ ಸೌಕರ್ಯಗಳನ್ನು ಕಲ್ಪಿಸಿಕೊಟ್ಟು, ಇವರಿಗೆ ಆಧಾರ್‌ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಹಾಗೂ ಜಾತಿ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ಎಲ್ಲಾ ರೀತಿಯ ದಾಖಲಾತಿಗಳನ್ನು ನೀಡಿತು. ನಾಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡಿಸಿ ಏಕಲವ್ಯ ನಗರದಿಂದಲೇ ಐದು ಜನರು ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡಲಾಗಿದೆ.

ಶ್ಯಾದನಹಳ್ಳಿ ಸರ್ವೇ ನಂ. 37ರ 83.08 (51 ಬಿ.ಖರಾಬು) ಎಕರೆ ವಿಸ್ತೀರ್ಣವುಳ್ಳ ಸರ್ಕಾರಿ ಗೋಮಾಳದ ಪೈಕಿ ನಾಗನಹಳ್ಳಿ ಗ್ರಾಮ ಪಂಚಾಯಿತಿ ಆಶ್ರಯ ನಿವೇಶನಕ್ಕಾಗಿ 5 ಎಕರೆ, ಚರ್ಮ ಕೈಗಾರಿಕಾ ಸಂಸ್ಥೆಗೆ 2 ಎಕರೆ, ವರುಣ ನಾಲೆಗೆ ಸೇರಿದಂತೆ ಒಟ್ಟು 16.06 ಎಕರೆ ಭೂಮಿಯನ್ನು ವಿಲೇವಾರಿ ಮಾಡಿರುವುದಾಗಿ ಉಳಿಕೆ 59.02 ಎಕರೆ ಭೂಮಿಯು ಖಾಲಿಯಿದ್ದು, ಈ ಭೂಮಿಯು ಮೈಸೂರು ನಗರದ 10 ಕಿ.ಮೀ. ವ್ಯಾಪ್ತಿಗೆ ಒಳಪಡುವುದರಿಂದ ಸದರಿ ಭೂಮಿಯು ಸಾರ್ವಜನಿಕ ಉದ್ದೇಶಕ್ಕೆ ಹೊರತುಪಡಿಸಿ ವೈಯಕ್ತಿಕವಾಗಿ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲವೆಂದು ತಹಸೀಲ್ದಾರ್‌ರವರು ಜಿಲ್ಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸ್ಥಳೀಯ ಕಂದಾಯ ಇಲಾಖಾಧಿಕಾರಿಗಳು ಭೂ ಮಾಫಿಯಾದವರ ಪ್ರಭಾವ ಮತ್ತು ಆಮಿಷಕ್ಕೊಳಗಾಗಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ 2014ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಗೋಮಾಳದ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಕುರಿ, ಕೋಳಿ, ಮೇಕೆ, ಕೋಲೆ ಬಸವ ಇತರೆ ಜಾನುವಾರುಗಳೊಂದಿಗೆ ಏಕಲವ್ಯನಗರದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿಗಳನ್ನು ಜೆ-ನರ್ಮ್ ಯೋಜನೆಯಡಿ ನಿರ್ಮಿಸಿರುವ ಕಳಪೆ ಗುಣಮಟ್ಟದ ಬಹುಮಹಡಿ ಕಟ್ಟಡಕ್ಕೆ (ಇಂದಿರಾ ಗಾಂಧಿ ಬಡಾವಣೆ) ಸ್ಥಳಾಂತರಿಸಲು ಪಿತೂರಿ ನಡೆಸಿದ್ದಾರೆ. ಅಲ್ಲದೆ ಕಂದಾಯ ಇಲಾಖಾಧಿಕಾರಿಗಳ ಜೊತೆ ಸೇರಿಕೊಂಡು ಮೇಲಧಿಕಾರಿಗಳಿಗೆ ಸುಳ್ಳು ವರದಿಗಳನ್ನು ನೀಡಿದ್ದಾರೆ.

ಮಳೆಗಾಳಿಗೆ ಬಿದ್ದ ಗುಡಿಸಲುಗಳನ್ನು ಪುನರ್‌ ನಿರ್ಮಾಣ ಮಾಡಿಕೊಳ್ಳುತ್ತಿದ್ದ ಈ ಜನರ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸುತ್ತಿದ್ದಾರೆಂದು ಗ್ರಾಮ ಲೆಕ್ಕಾಧಿಕಾರಿಗಳ ಮುಖಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಬಳಸಿಕೊಂಡು ಈ ಜನರನ್ನು ಹೆದರಿಸಲಾಗಿದೆ. ಗುಡಿಸಲುಗಳಿಗೆ ಬೆಂಕಿ ಹಚ್ಚುವಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವವರು ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಇತ್ತೀಚೆಗೆ ಸರ್ಕಾರವು ಅವಕಾಶ ನೀಡಿತ್ತು. ಅದರಂತೆ ಏಕಲವ್ಯನಗರದ ನಿವಾಸಿಗಳು 94 ಸಿ, ಯೋಜನೆಯಡಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ವಾಸದ ಮನೆಗಳಿಗೆ ಹಕ್ಕು ಪತ್ರ ವಿತರಿಸಬೇಕಿದ್ದ ಮೈಸೂರು ತಾಲ್ಲೂಕು ತಹಸೀಲ್ದಾರ್‌, ಭೂ ಮಾಫಿಯಾದವರ ಆಮಿಷಕ್ಕೊಳಗಾಗಿ ಏಕಲವ್ಯನಗರ ನಿವಾಸಿಗಳ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಈ ಜನರನ್ನು ಒಕ್ಕಲೆಬ್ಬಿಸಿ ಅಕ್ರಮ ಖಾತೆದಾರರಿಗೆ ಈ ಜಾಗವನ್ನು ಬಿಟ್ಟುಕೊಡಲು ತುದಿಗಾಲಲ್ಲಿ ನಿಂತಿದ್ದಾರೆ ತಹಸೀಲ್ದಾರ್‌ ನಿಂತಿದ್ದಾರೆ ಎಂದು ಅಲೆಮಾರಿಗಳು ಹಾಗೂ ದಸಂಸ ಮುಖಂಡರು ದೂರಿದ್ದಾರೆ.

ಮಕ್ಕಳು ಭಿಕ್ಷೆ ಬೇಡಬೇಕಾ?

ಅಲೆಮಾರಿ ಸಮುದಾಯದ ಮಹಿಳೆ ಲಕ್ಷ್ಮಮ್ಮ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಕ್ಕುಪತ್ರವನ್ನು ಕೇಳುತ್ತಿದ್ದೇವೆ. ಅಕ್ಕಪಕ್ಕದವರು ಹೊಡೆಯಲು ಬರುತ್ತಿದ್ದಾರೆ. ಜೆಸಿಬಿ ತಂದು ಒಕ್ಕಲೆಬ್ಬಿಸುತ್ತೇವೆ ಎನ್ನುತ್ತಿದ್ದಾರೆ. ನಮ್ಮ ಮಕ್ಕಳು ಶಾಲಾ- ಕಾಲೇಜು ಮೆಟ್ಟಿಲೇರಿದ್ದಾರೆ. ಸಮುದಾಯವನ್ನು ಒಕ್ಕಲೆಬ್ಬಿಸಿದರೆ ನಮ್ಮ ಮಕ್ಕಳು ನಮ್ಮಂತೆಯೇ ಭಿಕ್ಷೆ ಬೇಡಬೇಕಾ?” ಎಂದು ಪ್ರಶ್ನಿಸಿದರು.

“ಅಧಿಕಾರಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಎಂಎಲ್‌ಎ, ಎಂಪಿ ಆಗಬಹುದು; ನಮ್ಮ ಮಕ್ಕಳು ಮಾತ್ರ ಭಿಕ್ಷೆ ಬೇಡಬೇಕಾ? ನಾವೇನು ಅವರ ಆಸ್ತಿ ಕೇಳುತ್ತಿದ್ದೇವೆಯೇ? ಸರ್ಕಾರಿ ಜಾಗದ ಹಕ್ಕು ಪತ್ರವನ್ನಷ್ಟೇ ಕೇಳುತ್ತಿದ್ದೇವೆ. ಹದಿನೈದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಇವರಿಗೆ ಕಣ್ಣು ಕಾಣಿಸುವುದಿಲ್ಲವೇ? ಮಕ್ಕಳು ಅನ್ನ ನೀರಿಲ್ಲದೇ ಸಾಯುತ್ತಿವೆ. ಇವರಿಗೆ ಕರುಣೆ ಇಲ್ಲವೇ?” ಎಂದು ನೊಂದು ನುಡಿದರು.

“ವೋಟು ಕೇಳಲು ಬರುತ್ತೀರಿ. ನಾವು ವೋಟು ಹಾಕಿದರೆ ಮಾತ್ರ ನೀವು ಎಂಎಲ್‌ಎ, ಎಂಪಿ ಆಗುತ್ತೀರಿ. ವೋಟು ಕೇಳಲು ಬಂದಾಗ ಶಾಸಕ ಜಿ.ಟಿ.ದೇವೇಗೌಡರು, ನಿಮಗೆ ಸುಂದರವಾದ ಮನೆಗಳನ್ನು ಕಟ್ಟಿಸುತ್ತೇವೆ ಎಂದಿದ್ದರು. ಎಲ್ಲಿ ಕಟ್ಟಿಸಿಕೊಟ್ಟಿದ್ದಾರೆ? ನಾವು ಗುಡಿಸಲಿಗೆ ಹಕ್ಕುಪತ್ರ ಕೇಳುತ್ತಿದ್ದೇವೆ ಅಷ್ಟೇ” ಎಂದರು.

ಮೈಸೂರು ಜಿಲ್ಲಾಧಿಕಾರಿ ಹೇಳುವುದೇನು?

ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್‌, “ಏಕಲವ್ಯನಗರದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿದ್ದಾರೆ. ಹಕ್ಕುಪತ್ರ ಕೊಡಲು ಸಾಧ್ಯವೇ? ಕಳೆದ ಇಪ್ಪತ್ತು ವರ್ಷಗಳಿಂದ ಅಲ್ಲಿ ವಾಸವಿದ್ದರೂ ಖಾಸಗಿ ಜಾಗವನ್ನು ನೀಡಲು ಸಾಧ್ಯವಿಲ್ಲ. ಇದು ಗೋಮಾಳ ಎಂದು ಹೇಳಿದ ತಕ್ಷಣ ಗೋಮಾಳ ಆಗುವುದಿಲ್ಲ” ಎಂದರು.

ಇದನ್ನೂ ಓದಿರಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾವು ಅಲೆಮಾರಿಗಳೊಂದಿಗೆ ಮಾತನಾಡಿದ್ದೇವೆ. ಅವರ ಮನವಿ ಪತ್ರವನ್ನು ಅಧಿಕಾರಿಗಳು ಸ್ವೀಕರಿಸಿದ್ದಾರೆ. ಆದರೆ ಖಾಸಗಿ ಜಾಗಕ್ಕೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

“ಇಷ್ಟು ವರ್ಷಗಳಿಂದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿರಲು ಅವಕಾಶ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆಯೂ ಬರುತ್ತದೆ” ಎಂದಾಗ, “ಇದನ್ನು ತನಿಖೆ ಮಾಡಲು ನೀವು ಪೊಲೀಸರಲ್ಲ. ಇಷ್ಟು ವರ್ಷಗಳಿಂದ ನಾನು ಇಲ್ಲಿರಲಿಲ್ಲ, ನೀವು ಇರಲಿಲ್ಲ. ಖಾಸಗಿ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡಿರುವವರನ್ನು ನೀವು ಕೇಳಬೇಕು. ನನ್ನನ್ನು ಕೇಳಿದರೆ ಏನು ಮಾಡಲು ಸಾಧ್ಯ?” ಎಂದು ಪ್ರಶ್ನಿಸಿದರು.

“ಮೊದಲು ಸರ್ಕಾರಿ ಜಮೀನಾಗಿತ್ತು. ಈಗ ಖಾಸಗಿಯವರ ಪರ ನ್ಯಾಯಾಲಯದಲ್ಲಿ ತೀರ್ಪು ಬಂದಿದೆ. ಕೋರ್ಟ್ ಆದೇಶಗಳನ್ನು ನಾವು ಉಲ್ಲಂಘಿಸಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...