Homeಕರ್ನಾಟಕಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

- Advertisement -
- Advertisement -

“ಅಲೆಮಾರಿಗಳು ಒಂದೆಡೆ ನೆಲೆಸಬಾರದು, ಅವರು ಯಾವಾಗಲೂ ಊರೂರು ಸುತ್ತುತ್ತಾ ಯಥಾಸ್ಥಿತಿಯಲ್ಲಿ ಬದುಕಬೇಕು, ಅವರ ಜೀವನ ಸದಾ ಅತಂತ್ರವಾಗಿರಬೇಕು ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಭಾವಿಸಿದ್ದಾರೆ” ಎಂದು ಮೈಸೂರು ತಾಲ್ಲೂಕಿನಲ್ಲಿ ವಾಸವಿರುವ ಅಲೆಮಾರಿ ಸಮುದಾಯಗಳು ಬೇಸರ ವ್ಯಕ್ತಪಡಿಸುತ್ತಿವೆ. ದಶಕಗಳಿಂದ ಮೈಸೂರು ತಾಲ್ಲೂಕಿನಲ್ಲಿ ಒಂದೆಡೆ ನೆಲೆಸಿರುವ ಅಲೆಮಾರಿಗಳನ್ನು ಕಾಲ್ಚಂಡಿನಂತೆ ಅಧಿಕಾರಿಗಳು ಆಟವಾಡಿಸತೊಡಗಿದ್ದಾರೆ ಎಂಬ ಆರೋಪಗಳು ಬಂದಿವೆ.

ಕಳೆದ ಹದಿನೈದು ದಿನಗಳಿಂದ (ಸೆ.15ರಿಂದ) ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಅಲೆಮಾರಿಗಳು ಹೋರಾಟಕ್ಕೆ ಕುಳಿತ್ತಿದ್ದಾರೆ. ಇವರ ಕೂಗನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಆಲಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲೆಮಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿ ಹೇಳುವುದೇನು?

ಹಕ್ಕಿಪಿಕ್ಕಿ, ದೊಂಬಿದಾಸ, ಶಿಳ್ಳೆಕ್ಯಾತ, ಬುಡುಬುಡುಕೆ ಇತರೆ ಅಲೆಮಾರಿ- ಅರೆ ಅಲೆಮಾರಿ ಸಮುದಾಯದ ಜನರು ಶತಶತಮಾನಗಳಿಂದಲೂ ಒಂದೆಡೆ ನೆಲೆ ನಿಲ್ಲಲಾಗದೆ ಪರದಾಡುತ್ತಿದ್ದಾರೆ. ಇಂತಹ ಸಮುದಾಯಗಳ ಕೆಲವು ಜನರು ಮೈಸೂರಿನ ಹೆಬ್ಬಾಳ ಕೆರೆಯ ಅಂಗಳದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಳ್ಳಲು ಯತ್ನಿಸಿದರು. ಕೆರೆ ಅಭಿವೃದ್ಧಿಪಡಿಸುವ ನೆಪದಲ್ಲಿ ಜಿಲ್ಲಾಡಳಿತ ಅಲೆಮಾರಿಗಳನ್ನು ಒಕ್ಕಲೆಬ್ಬಿಸಿತು. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಯಿತು. ಇದರ ಫಲವಾಗಿ ಜಿಲ್ಲಾಡಳಿತವು ಮೈಸೂರು ತಾಲ್ಲೂಕಿನ ಶ್ಯಾದನಹಳ್ಳಿ ಗ್ರಾಮದ ಸರ್ವೇ ನಂಬರ್‌ 53ರ ಸರ್ಕಾರಿ ಭೂಮಿಯನ್ನು ಗುರುತಿಸಿ, ಈ ಜನರು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸಲು ಮೌಖಿಕ ಆದೇಶದೊಂದಿಗೆ ಅವಕಾಶ ಕಲ್ಪಿಸಿತು.

12 ವರ್ಷಗಳ ಹಿಂದೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯವರು ಈ ಅಲೆಮಾರಿಗಳು ವಾಸವಿರುವ ಪ್ರದೇಶವನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಎಲ್ಲರಿಗೂ ಪ್ರತ್ಯೇಕವಾಗಿ ನೆಲ ಮಳಿಗೆಗಳನ್ನು ನಿರ್ಮಿಸಿಕೊಡುವುದಾಗಿ ವಾಗ್ದಾನ ನೀಡಿ ಈ ಜನರನ್ನು ಶ್ಯಾದನಹಳ್ಳಿ ಸರ್ವೇ ನಂ. 37ರ ಸರ್ಕಾರಿ ಗೋಮಾಳದ ಖಾಲಿ ಜಾಗಕ್ಕೆ ಸ್ಥಳಾಂತರಿಸಿದ್ದರು. ತದನಂತರ ಜಿಲ್ಲಾಡಳಿತವು ಈ ಜಾಗಕ್ಕೆ ‘ಏಕಲವ್ಯನಗರ’ ಎಂದು ಘೋಷಿಸಿ ಈ ಜನರಿಗೆ ಕುಡಿಯುವ ನೀರು, ವಿದ್ಯುತ್‌, ರಸ್ತೆ ಸೌಕರ್ಯಗಳನ್ನು ಕಲ್ಪಿಸಿಕೊಟ್ಟು, ಇವರಿಗೆ ಆಧಾರ್‌ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಹಾಗೂ ಜಾತಿ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ಎಲ್ಲಾ ರೀತಿಯ ದಾಖಲಾತಿಗಳನ್ನು ನೀಡಿತು. ನಾಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡಿಸಿ ಏಕಲವ್ಯ ನಗರದಿಂದಲೇ ಐದು ಜನರು ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡಲಾಗಿದೆ.

ಶ್ಯಾದನಹಳ್ಳಿ ಸರ್ವೇ ನಂ. 37ರ 83.08 (51 ಬಿ.ಖರಾಬು) ಎಕರೆ ವಿಸ್ತೀರ್ಣವುಳ್ಳ ಸರ್ಕಾರಿ ಗೋಮಾಳದ ಪೈಕಿ ನಾಗನಹಳ್ಳಿ ಗ್ರಾಮ ಪಂಚಾಯಿತಿ ಆಶ್ರಯ ನಿವೇಶನಕ್ಕಾಗಿ 5 ಎಕರೆ, ಚರ್ಮ ಕೈಗಾರಿಕಾ ಸಂಸ್ಥೆಗೆ 2 ಎಕರೆ, ವರುಣ ನಾಲೆಗೆ ಸೇರಿದಂತೆ ಒಟ್ಟು 16.06 ಎಕರೆ ಭೂಮಿಯನ್ನು ವಿಲೇವಾರಿ ಮಾಡಿರುವುದಾಗಿ ಉಳಿಕೆ 59.02 ಎಕರೆ ಭೂಮಿಯು ಖಾಲಿಯಿದ್ದು, ಈ ಭೂಮಿಯು ಮೈಸೂರು ನಗರದ 10 ಕಿ.ಮೀ. ವ್ಯಾಪ್ತಿಗೆ ಒಳಪಡುವುದರಿಂದ ಸದರಿ ಭೂಮಿಯು ಸಾರ್ವಜನಿಕ ಉದ್ದೇಶಕ್ಕೆ ಹೊರತುಪಡಿಸಿ ವೈಯಕ್ತಿಕವಾಗಿ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲವೆಂದು ತಹಸೀಲ್ದಾರ್‌ರವರು ಜಿಲ್ಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸ್ಥಳೀಯ ಕಂದಾಯ ಇಲಾಖಾಧಿಕಾರಿಗಳು ಭೂ ಮಾಫಿಯಾದವರ ಪ್ರಭಾವ ಮತ್ತು ಆಮಿಷಕ್ಕೊಳಗಾಗಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ 2014ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಗೋಮಾಳದ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಕುರಿ, ಕೋಳಿ, ಮೇಕೆ, ಕೋಲೆ ಬಸವ ಇತರೆ ಜಾನುವಾರುಗಳೊಂದಿಗೆ ಏಕಲವ್ಯನಗರದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿಗಳನ್ನು ಜೆ-ನರ್ಮ್ ಯೋಜನೆಯಡಿ ನಿರ್ಮಿಸಿರುವ ಕಳಪೆ ಗುಣಮಟ್ಟದ ಬಹುಮಹಡಿ ಕಟ್ಟಡಕ್ಕೆ (ಇಂದಿರಾ ಗಾಂಧಿ ಬಡಾವಣೆ) ಸ್ಥಳಾಂತರಿಸಲು ಪಿತೂರಿ ನಡೆಸಿದ್ದಾರೆ. ಅಲ್ಲದೆ ಕಂದಾಯ ಇಲಾಖಾಧಿಕಾರಿಗಳ ಜೊತೆ ಸೇರಿಕೊಂಡು ಮೇಲಧಿಕಾರಿಗಳಿಗೆ ಸುಳ್ಳು ವರದಿಗಳನ್ನು ನೀಡಿದ್ದಾರೆ.

ಮಳೆಗಾಳಿಗೆ ಬಿದ್ದ ಗುಡಿಸಲುಗಳನ್ನು ಪುನರ್‌ ನಿರ್ಮಾಣ ಮಾಡಿಕೊಳ್ಳುತ್ತಿದ್ದ ಈ ಜನರ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸುತ್ತಿದ್ದಾರೆಂದು ಗ್ರಾಮ ಲೆಕ್ಕಾಧಿಕಾರಿಗಳ ಮುಖಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಬಳಸಿಕೊಂಡು ಈ ಜನರನ್ನು ಹೆದರಿಸಲಾಗಿದೆ. ಗುಡಿಸಲುಗಳಿಗೆ ಬೆಂಕಿ ಹಚ್ಚುವಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವವರು ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಇತ್ತೀಚೆಗೆ ಸರ್ಕಾರವು ಅವಕಾಶ ನೀಡಿತ್ತು. ಅದರಂತೆ ಏಕಲವ್ಯನಗರದ ನಿವಾಸಿಗಳು 94 ಸಿ, ಯೋಜನೆಯಡಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ವಾಸದ ಮನೆಗಳಿಗೆ ಹಕ್ಕು ಪತ್ರ ವಿತರಿಸಬೇಕಿದ್ದ ಮೈಸೂರು ತಾಲ್ಲೂಕು ತಹಸೀಲ್ದಾರ್‌, ಭೂ ಮಾಫಿಯಾದವರ ಆಮಿಷಕ್ಕೊಳಗಾಗಿ ಏಕಲವ್ಯನಗರ ನಿವಾಸಿಗಳ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಈ ಜನರನ್ನು ಒಕ್ಕಲೆಬ್ಬಿಸಿ ಅಕ್ರಮ ಖಾತೆದಾರರಿಗೆ ಈ ಜಾಗವನ್ನು ಬಿಟ್ಟುಕೊಡಲು ತುದಿಗಾಲಲ್ಲಿ ನಿಂತಿದ್ದಾರೆ ತಹಸೀಲ್ದಾರ್‌ ನಿಂತಿದ್ದಾರೆ ಎಂದು ಅಲೆಮಾರಿಗಳು ಹಾಗೂ ದಸಂಸ ಮುಖಂಡರು ದೂರಿದ್ದಾರೆ.

ಮಕ್ಕಳು ಭಿಕ್ಷೆ ಬೇಡಬೇಕಾ?

ಅಲೆಮಾರಿ ಸಮುದಾಯದ ಮಹಿಳೆ ಲಕ್ಷ್ಮಮ್ಮ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಕ್ಕುಪತ್ರವನ್ನು ಕೇಳುತ್ತಿದ್ದೇವೆ. ಅಕ್ಕಪಕ್ಕದವರು ಹೊಡೆಯಲು ಬರುತ್ತಿದ್ದಾರೆ. ಜೆಸಿಬಿ ತಂದು ಒಕ್ಕಲೆಬ್ಬಿಸುತ್ತೇವೆ ಎನ್ನುತ್ತಿದ್ದಾರೆ. ನಮ್ಮ ಮಕ್ಕಳು ಶಾಲಾ- ಕಾಲೇಜು ಮೆಟ್ಟಿಲೇರಿದ್ದಾರೆ. ಸಮುದಾಯವನ್ನು ಒಕ್ಕಲೆಬ್ಬಿಸಿದರೆ ನಮ್ಮ ಮಕ್ಕಳು ನಮ್ಮಂತೆಯೇ ಭಿಕ್ಷೆ ಬೇಡಬೇಕಾ?” ಎಂದು ಪ್ರಶ್ನಿಸಿದರು.

“ಅಧಿಕಾರಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಎಂಎಲ್‌ಎ, ಎಂಪಿ ಆಗಬಹುದು; ನಮ್ಮ ಮಕ್ಕಳು ಮಾತ್ರ ಭಿಕ್ಷೆ ಬೇಡಬೇಕಾ? ನಾವೇನು ಅವರ ಆಸ್ತಿ ಕೇಳುತ್ತಿದ್ದೇವೆಯೇ? ಸರ್ಕಾರಿ ಜಾಗದ ಹಕ್ಕು ಪತ್ರವನ್ನಷ್ಟೇ ಕೇಳುತ್ತಿದ್ದೇವೆ. ಹದಿನೈದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಇವರಿಗೆ ಕಣ್ಣು ಕಾಣಿಸುವುದಿಲ್ಲವೇ? ಮಕ್ಕಳು ಅನ್ನ ನೀರಿಲ್ಲದೇ ಸಾಯುತ್ತಿವೆ. ಇವರಿಗೆ ಕರುಣೆ ಇಲ್ಲವೇ?” ಎಂದು ನೊಂದು ನುಡಿದರು.

“ವೋಟು ಕೇಳಲು ಬರುತ್ತೀರಿ. ನಾವು ವೋಟು ಹಾಕಿದರೆ ಮಾತ್ರ ನೀವು ಎಂಎಲ್‌ಎ, ಎಂಪಿ ಆಗುತ್ತೀರಿ. ವೋಟು ಕೇಳಲು ಬಂದಾಗ ಶಾಸಕ ಜಿ.ಟಿ.ದೇವೇಗೌಡರು, ನಿಮಗೆ ಸುಂದರವಾದ ಮನೆಗಳನ್ನು ಕಟ್ಟಿಸುತ್ತೇವೆ ಎಂದಿದ್ದರು. ಎಲ್ಲಿ ಕಟ್ಟಿಸಿಕೊಟ್ಟಿದ್ದಾರೆ? ನಾವು ಗುಡಿಸಲಿಗೆ ಹಕ್ಕುಪತ್ರ ಕೇಳುತ್ತಿದ್ದೇವೆ ಅಷ್ಟೇ” ಎಂದರು.

ಮೈಸೂರು ಜಿಲ್ಲಾಧಿಕಾರಿ ಹೇಳುವುದೇನು?

ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್‌, “ಏಕಲವ್ಯನಗರದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿದ್ದಾರೆ. ಹಕ್ಕುಪತ್ರ ಕೊಡಲು ಸಾಧ್ಯವೇ? ಕಳೆದ ಇಪ್ಪತ್ತು ವರ್ಷಗಳಿಂದ ಅಲ್ಲಿ ವಾಸವಿದ್ದರೂ ಖಾಸಗಿ ಜಾಗವನ್ನು ನೀಡಲು ಸಾಧ್ಯವಿಲ್ಲ. ಇದು ಗೋಮಾಳ ಎಂದು ಹೇಳಿದ ತಕ್ಷಣ ಗೋಮಾಳ ಆಗುವುದಿಲ್ಲ” ಎಂದರು.

ಇದನ್ನೂ ಓದಿರಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾವು ಅಲೆಮಾರಿಗಳೊಂದಿಗೆ ಮಾತನಾಡಿದ್ದೇವೆ. ಅವರ ಮನವಿ ಪತ್ರವನ್ನು ಅಧಿಕಾರಿಗಳು ಸ್ವೀಕರಿಸಿದ್ದಾರೆ. ಆದರೆ ಖಾಸಗಿ ಜಾಗಕ್ಕೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

“ಇಷ್ಟು ವರ್ಷಗಳಿಂದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿರಲು ಅವಕಾಶ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆಯೂ ಬರುತ್ತದೆ” ಎಂದಾಗ, “ಇದನ್ನು ತನಿಖೆ ಮಾಡಲು ನೀವು ಪೊಲೀಸರಲ್ಲ. ಇಷ್ಟು ವರ್ಷಗಳಿಂದ ನಾನು ಇಲ್ಲಿರಲಿಲ್ಲ, ನೀವು ಇರಲಿಲ್ಲ. ಖಾಸಗಿ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡಿರುವವರನ್ನು ನೀವು ಕೇಳಬೇಕು. ನನ್ನನ್ನು ಕೇಳಿದರೆ ಏನು ಮಾಡಲು ಸಾಧ್ಯ?” ಎಂದು ಪ್ರಶ್ನಿಸಿದರು.

“ಮೊದಲು ಸರ್ಕಾರಿ ಜಮೀನಾಗಿತ್ತು. ಈಗ ಖಾಸಗಿಯವರ ಪರ ನ್ಯಾಯಾಲಯದಲ್ಲಿ ತೀರ್ಪು ಬಂದಿದೆ. ಕೋರ್ಟ್ ಆದೇಶಗಳನ್ನು ನಾವು ಉಲ್ಲಂಘಿಸಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...