Homeಕರ್ನಾಟಕಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

- Advertisement -
- Advertisement -

“ಅಲೆಮಾರಿಗಳು ಒಂದೆಡೆ ನೆಲೆಸಬಾರದು, ಅವರು ಯಾವಾಗಲೂ ಊರೂರು ಸುತ್ತುತ್ತಾ ಯಥಾಸ್ಥಿತಿಯಲ್ಲಿ ಬದುಕಬೇಕು, ಅವರ ಜೀವನ ಸದಾ ಅತಂತ್ರವಾಗಿರಬೇಕು ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಭಾವಿಸಿದ್ದಾರೆ” ಎಂದು ಮೈಸೂರು ತಾಲ್ಲೂಕಿನಲ್ಲಿ ವಾಸವಿರುವ ಅಲೆಮಾರಿ ಸಮುದಾಯಗಳು ಬೇಸರ ವ್ಯಕ್ತಪಡಿಸುತ್ತಿವೆ. ದಶಕಗಳಿಂದ ಮೈಸೂರು ತಾಲ್ಲೂಕಿನಲ್ಲಿ ಒಂದೆಡೆ ನೆಲೆಸಿರುವ ಅಲೆಮಾರಿಗಳನ್ನು ಕಾಲ್ಚಂಡಿನಂತೆ ಅಧಿಕಾರಿಗಳು ಆಟವಾಡಿಸತೊಡಗಿದ್ದಾರೆ ಎಂಬ ಆರೋಪಗಳು ಬಂದಿವೆ.

ಕಳೆದ ಹದಿನೈದು ದಿನಗಳಿಂದ (ಸೆ.15ರಿಂದ) ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಅಲೆಮಾರಿಗಳು ಹೋರಾಟಕ್ಕೆ ಕುಳಿತ್ತಿದ್ದಾರೆ. ಇವರ ಕೂಗನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಆಲಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲೆಮಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿ ಹೇಳುವುದೇನು?

ಹಕ್ಕಿಪಿಕ್ಕಿ, ದೊಂಬಿದಾಸ, ಶಿಳ್ಳೆಕ್ಯಾತ, ಬುಡುಬುಡುಕೆ ಇತರೆ ಅಲೆಮಾರಿ- ಅರೆ ಅಲೆಮಾರಿ ಸಮುದಾಯದ ಜನರು ಶತಶತಮಾನಗಳಿಂದಲೂ ಒಂದೆಡೆ ನೆಲೆ ನಿಲ್ಲಲಾಗದೆ ಪರದಾಡುತ್ತಿದ್ದಾರೆ. ಇಂತಹ ಸಮುದಾಯಗಳ ಕೆಲವು ಜನರು ಮೈಸೂರಿನ ಹೆಬ್ಬಾಳ ಕೆರೆಯ ಅಂಗಳದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಳ್ಳಲು ಯತ್ನಿಸಿದರು. ಕೆರೆ ಅಭಿವೃದ್ಧಿಪಡಿಸುವ ನೆಪದಲ್ಲಿ ಜಿಲ್ಲಾಡಳಿತ ಅಲೆಮಾರಿಗಳನ್ನು ಒಕ್ಕಲೆಬ್ಬಿಸಿತು. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಯಿತು. ಇದರ ಫಲವಾಗಿ ಜಿಲ್ಲಾಡಳಿತವು ಮೈಸೂರು ತಾಲ್ಲೂಕಿನ ಶ್ಯಾದನಹಳ್ಳಿ ಗ್ರಾಮದ ಸರ್ವೇ ನಂಬರ್‌ 53ರ ಸರ್ಕಾರಿ ಭೂಮಿಯನ್ನು ಗುರುತಿಸಿ, ಈ ಜನರು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸಲು ಮೌಖಿಕ ಆದೇಶದೊಂದಿಗೆ ಅವಕಾಶ ಕಲ್ಪಿಸಿತು.

12 ವರ್ಷಗಳ ಹಿಂದೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯವರು ಈ ಅಲೆಮಾರಿಗಳು ವಾಸವಿರುವ ಪ್ರದೇಶವನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಎಲ್ಲರಿಗೂ ಪ್ರತ್ಯೇಕವಾಗಿ ನೆಲ ಮಳಿಗೆಗಳನ್ನು ನಿರ್ಮಿಸಿಕೊಡುವುದಾಗಿ ವಾಗ್ದಾನ ನೀಡಿ ಈ ಜನರನ್ನು ಶ್ಯಾದನಹಳ್ಳಿ ಸರ್ವೇ ನಂ. 37ರ ಸರ್ಕಾರಿ ಗೋಮಾಳದ ಖಾಲಿ ಜಾಗಕ್ಕೆ ಸ್ಥಳಾಂತರಿಸಿದ್ದರು. ತದನಂತರ ಜಿಲ್ಲಾಡಳಿತವು ಈ ಜಾಗಕ್ಕೆ ‘ಏಕಲವ್ಯನಗರ’ ಎಂದು ಘೋಷಿಸಿ ಈ ಜನರಿಗೆ ಕುಡಿಯುವ ನೀರು, ವಿದ್ಯುತ್‌, ರಸ್ತೆ ಸೌಕರ್ಯಗಳನ್ನು ಕಲ್ಪಿಸಿಕೊಟ್ಟು, ಇವರಿಗೆ ಆಧಾರ್‌ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಹಾಗೂ ಜಾತಿ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ಎಲ್ಲಾ ರೀತಿಯ ದಾಖಲಾತಿಗಳನ್ನು ನೀಡಿತು. ನಾಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡಿಸಿ ಏಕಲವ್ಯ ನಗರದಿಂದಲೇ ಐದು ಜನರು ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡಲಾಗಿದೆ.

ಶ್ಯಾದನಹಳ್ಳಿ ಸರ್ವೇ ನಂ. 37ರ 83.08 (51 ಬಿ.ಖರಾಬು) ಎಕರೆ ವಿಸ್ತೀರ್ಣವುಳ್ಳ ಸರ್ಕಾರಿ ಗೋಮಾಳದ ಪೈಕಿ ನಾಗನಹಳ್ಳಿ ಗ್ರಾಮ ಪಂಚಾಯಿತಿ ಆಶ್ರಯ ನಿವೇಶನಕ್ಕಾಗಿ 5 ಎಕರೆ, ಚರ್ಮ ಕೈಗಾರಿಕಾ ಸಂಸ್ಥೆಗೆ 2 ಎಕರೆ, ವರುಣ ನಾಲೆಗೆ ಸೇರಿದಂತೆ ಒಟ್ಟು 16.06 ಎಕರೆ ಭೂಮಿಯನ್ನು ವಿಲೇವಾರಿ ಮಾಡಿರುವುದಾಗಿ ಉಳಿಕೆ 59.02 ಎಕರೆ ಭೂಮಿಯು ಖಾಲಿಯಿದ್ದು, ಈ ಭೂಮಿಯು ಮೈಸೂರು ನಗರದ 10 ಕಿ.ಮೀ. ವ್ಯಾಪ್ತಿಗೆ ಒಳಪಡುವುದರಿಂದ ಸದರಿ ಭೂಮಿಯು ಸಾರ್ವಜನಿಕ ಉದ್ದೇಶಕ್ಕೆ ಹೊರತುಪಡಿಸಿ ವೈಯಕ್ತಿಕವಾಗಿ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲವೆಂದು ತಹಸೀಲ್ದಾರ್‌ರವರು ಜಿಲ್ಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸ್ಥಳೀಯ ಕಂದಾಯ ಇಲಾಖಾಧಿಕಾರಿಗಳು ಭೂ ಮಾಫಿಯಾದವರ ಪ್ರಭಾವ ಮತ್ತು ಆಮಿಷಕ್ಕೊಳಗಾಗಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ 2014ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಗೋಮಾಳದ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ.

ಈ ಮಧ್ಯೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಕುರಿ, ಕೋಳಿ, ಮೇಕೆ, ಕೋಲೆ ಬಸವ ಇತರೆ ಜಾನುವಾರುಗಳೊಂದಿಗೆ ಏಕಲವ್ಯನಗರದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿಗಳನ್ನು ಜೆ-ನರ್ಮ್ ಯೋಜನೆಯಡಿ ನಿರ್ಮಿಸಿರುವ ಕಳಪೆ ಗುಣಮಟ್ಟದ ಬಹುಮಹಡಿ ಕಟ್ಟಡಕ್ಕೆ (ಇಂದಿರಾ ಗಾಂಧಿ ಬಡಾವಣೆ) ಸ್ಥಳಾಂತರಿಸಲು ಪಿತೂರಿ ನಡೆಸಿದ್ದಾರೆ. ಅಲ್ಲದೆ ಕಂದಾಯ ಇಲಾಖಾಧಿಕಾರಿಗಳ ಜೊತೆ ಸೇರಿಕೊಂಡು ಮೇಲಧಿಕಾರಿಗಳಿಗೆ ಸುಳ್ಳು ವರದಿಗಳನ್ನು ನೀಡಿದ್ದಾರೆ.

ಮಳೆಗಾಳಿಗೆ ಬಿದ್ದ ಗುಡಿಸಲುಗಳನ್ನು ಪುನರ್‌ ನಿರ್ಮಾಣ ಮಾಡಿಕೊಳ್ಳುತ್ತಿದ್ದ ಈ ಜನರ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸುತ್ತಿದ್ದಾರೆಂದು ಗ್ರಾಮ ಲೆಕ್ಕಾಧಿಕಾರಿಗಳ ಮುಖಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಬಳಸಿಕೊಂಡು ಈ ಜನರನ್ನು ಹೆದರಿಸಲಾಗಿದೆ. ಗುಡಿಸಲುಗಳಿಗೆ ಬೆಂಕಿ ಹಚ್ಚುವಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವವರು ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಇತ್ತೀಚೆಗೆ ಸರ್ಕಾರವು ಅವಕಾಶ ನೀಡಿತ್ತು. ಅದರಂತೆ ಏಕಲವ್ಯನಗರದ ನಿವಾಸಿಗಳು 94 ಸಿ, ಯೋಜನೆಯಡಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ವಾಸದ ಮನೆಗಳಿಗೆ ಹಕ್ಕು ಪತ್ರ ವಿತರಿಸಬೇಕಿದ್ದ ಮೈಸೂರು ತಾಲ್ಲೂಕು ತಹಸೀಲ್ದಾರ್‌, ಭೂ ಮಾಫಿಯಾದವರ ಆಮಿಷಕ್ಕೊಳಗಾಗಿ ಏಕಲವ್ಯನಗರ ನಿವಾಸಿಗಳ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಈ ಜನರನ್ನು ಒಕ್ಕಲೆಬ್ಬಿಸಿ ಅಕ್ರಮ ಖಾತೆದಾರರಿಗೆ ಈ ಜಾಗವನ್ನು ಬಿಟ್ಟುಕೊಡಲು ತುದಿಗಾಲಲ್ಲಿ ನಿಂತಿದ್ದಾರೆ ತಹಸೀಲ್ದಾರ್‌ ನಿಂತಿದ್ದಾರೆ ಎಂದು ಅಲೆಮಾರಿಗಳು ಹಾಗೂ ದಸಂಸ ಮುಖಂಡರು ದೂರಿದ್ದಾರೆ.

ಮಕ್ಕಳು ಭಿಕ್ಷೆ ಬೇಡಬೇಕಾ?

ಅಲೆಮಾರಿ ಸಮುದಾಯದ ಮಹಿಳೆ ಲಕ್ಷ್ಮಮ್ಮ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಕ್ಕುಪತ್ರವನ್ನು ಕೇಳುತ್ತಿದ್ದೇವೆ. ಅಕ್ಕಪಕ್ಕದವರು ಹೊಡೆಯಲು ಬರುತ್ತಿದ್ದಾರೆ. ಜೆಸಿಬಿ ತಂದು ಒಕ್ಕಲೆಬ್ಬಿಸುತ್ತೇವೆ ಎನ್ನುತ್ತಿದ್ದಾರೆ. ನಮ್ಮ ಮಕ್ಕಳು ಶಾಲಾ- ಕಾಲೇಜು ಮೆಟ್ಟಿಲೇರಿದ್ದಾರೆ. ಸಮುದಾಯವನ್ನು ಒಕ್ಕಲೆಬ್ಬಿಸಿದರೆ ನಮ್ಮ ಮಕ್ಕಳು ನಮ್ಮಂತೆಯೇ ಭಿಕ್ಷೆ ಬೇಡಬೇಕಾ?” ಎಂದು ಪ್ರಶ್ನಿಸಿದರು.

“ಅಧಿಕಾರಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಎಂಎಲ್‌ಎ, ಎಂಪಿ ಆಗಬಹುದು; ನಮ್ಮ ಮಕ್ಕಳು ಮಾತ್ರ ಭಿಕ್ಷೆ ಬೇಡಬೇಕಾ? ನಾವೇನು ಅವರ ಆಸ್ತಿ ಕೇಳುತ್ತಿದ್ದೇವೆಯೇ? ಸರ್ಕಾರಿ ಜಾಗದ ಹಕ್ಕು ಪತ್ರವನ್ನಷ್ಟೇ ಕೇಳುತ್ತಿದ್ದೇವೆ. ಹದಿನೈದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಇವರಿಗೆ ಕಣ್ಣು ಕಾಣಿಸುವುದಿಲ್ಲವೇ? ಮಕ್ಕಳು ಅನ್ನ ನೀರಿಲ್ಲದೇ ಸಾಯುತ್ತಿವೆ. ಇವರಿಗೆ ಕರುಣೆ ಇಲ್ಲವೇ?” ಎಂದು ನೊಂದು ನುಡಿದರು.

“ವೋಟು ಕೇಳಲು ಬರುತ್ತೀರಿ. ನಾವು ವೋಟು ಹಾಕಿದರೆ ಮಾತ್ರ ನೀವು ಎಂಎಲ್‌ಎ, ಎಂಪಿ ಆಗುತ್ತೀರಿ. ವೋಟು ಕೇಳಲು ಬಂದಾಗ ಶಾಸಕ ಜಿ.ಟಿ.ದೇವೇಗೌಡರು, ನಿಮಗೆ ಸುಂದರವಾದ ಮನೆಗಳನ್ನು ಕಟ್ಟಿಸುತ್ತೇವೆ ಎಂದಿದ್ದರು. ಎಲ್ಲಿ ಕಟ್ಟಿಸಿಕೊಟ್ಟಿದ್ದಾರೆ? ನಾವು ಗುಡಿಸಲಿಗೆ ಹಕ್ಕುಪತ್ರ ಕೇಳುತ್ತಿದ್ದೇವೆ ಅಷ್ಟೇ” ಎಂದರು.

ಮೈಸೂರು ಜಿಲ್ಲಾಧಿಕಾರಿ ಹೇಳುವುದೇನು?

ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್‌, “ಏಕಲವ್ಯನಗರದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿದ್ದಾರೆ. ಹಕ್ಕುಪತ್ರ ಕೊಡಲು ಸಾಧ್ಯವೇ? ಕಳೆದ ಇಪ್ಪತ್ತು ವರ್ಷಗಳಿಂದ ಅಲ್ಲಿ ವಾಸವಿದ್ದರೂ ಖಾಸಗಿ ಜಾಗವನ್ನು ನೀಡಲು ಸಾಧ್ಯವಿಲ್ಲ. ಇದು ಗೋಮಾಳ ಎಂದು ಹೇಳಿದ ತಕ್ಷಣ ಗೋಮಾಳ ಆಗುವುದಿಲ್ಲ” ಎಂದರು.

ಇದನ್ನೂ ಓದಿರಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾವು ಅಲೆಮಾರಿಗಳೊಂದಿಗೆ ಮಾತನಾಡಿದ್ದೇವೆ. ಅವರ ಮನವಿ ಪತ್ರವನ್ನು ಅಧಿಕಾರಿಗಳು ಸ್ವೀಕರಿಸಿದ್ದಾರೆ. ಆದರೆ ಖಾಸಗಿ ಜಾಗಕ್ಕೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

“ಇಷ್ಟು ವರ್ಷಗಳಿಂದ ಖಾಸಗಿ ಜಾಗದಲ್ಲಿ ಅಲೆಮಾರಿಗಳು ವಾಸವಿರಲು ಅವಕಾಶ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆಯೂ ಬರುತ್ತದೆ” ಎಂದಾಗ, “ಇದನ್ನು ತನಿಖೆ ಮಾಡಲು ನೀವು ಪೊಲೀಸರಲ್ಲ. ಇಷ್ಟು ವರ್ಷಗಳಿಂದ ನಾನು ಇಲ್ಲಿರಲಿಲ್ಲ, ನೀವು ಇರಲಿಲ್ಲ. ಖಾಸಗಿ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡಿರುವವರನ್ನು ನೀವು ಕೇಳಬೇಕು. ನನ್ನನ್ನು ಕೇಳಿದರೆ ಏನು ಮಾಡಲು ಸಾಧ್ಯ?” ಎಂದು ಪ್ರಶ್ನಿಸಿದರು.

“ಮೊದಲು ಸರ್ಕಾರಿ ಜಮೀನಾಗಿತ್ತು. ಈಗ ಖಾಸಗಿಯವರ ಪರ ನ್ಯಾಯಾಲಯದಲ್ಲಿ ತೀರ್ಪು ಬಂದಿದೆ. ಕೋರ್ಟ್ ಆದೇಶಗಳನ್ನು ನಾವು ಉಲ್ಲಂಘಿಸಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...