Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...