Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...