Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...