Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...