Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...