Homeಕರ್ನಾಟಕಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -
- Advertisement -

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವರಿಗೆ ಸತತ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಅಮಾನತು ಆಗಿರುವ ಆರೋಪಿಯ ಪರ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು ವಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ

ದಿನಾಂಕ 18-10-2019 ರಂದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮು ಎಂಬುವವರು ಅನುಚಿತವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಅವರು ಪದೇ ಪದೇ ಫೋನ್ ಮಾಡಿ, ವಾಟ್ಸಾಪ್‌ ಮಾಡಿ ಪಾರ್ಟಿ ಕೊಡಿಸು, ನಿಮ್ಮ ತಂದೆ ತಾಯಿಯ ನಂಬರ್‌ ಕೊಡು ಎಂದು ಒತ್ತಾಯಿಸುತ್ತಾರೆ, ಇದರಿಂದ ನನಗೆ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದು ಓದಲು ತೊಂದರೆಯಾಗುತ್ತಿದೆ. ಹಾಗಾಗಿ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿ ಒತ್ತಾಯಿಸಿದ್ದರು.

ದೂರಿನ ಆಧಾರದಲ್ಲಿ ಕಾಲೇಜಿನಲ್ಲಿ ಆಂತರಿಕ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಡಾ.ಪಿ.ಎಚ್‌ ತೇಜಸ್ವಿನಿಯವರ ನೇತೃತ್ವದಲ್ಲಿ 28-10-2019ರಿಂದ ಹಲವು ಸುತ್ತಿನ ಸಭೆ ಸೇರಿ ವಿಚಾರಣೆ ನಡೆಸಿತ್ತು. ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮುರವರು ಆ ವಿದ್ಯಾರ್ಥಿನಿಯೊಂದಿಗೆ ನಡೆಸಿದ ಫೋನ್‌ ಸಂಭಾಷಣೆಗಳ ರೆಕಾರ್ಡ್ ಇದ್ದುದರಿಂದ ಮೇಲ್ನೋಟದಲ್ಲಿಯೇ ಆತನ ತಪ್ಪು ನಡವಳಿಕೆ ಸಾಬೀತಾಗಿತ್ತು.

ಆನಂತರ ಆ ವಿದ್ಯಾರ್ಥಿನಿಯ ನಡುವೆ ಸಮಿತಿಯು ಆಪ್ತಸಮಾಲೋಚನೆ ನಡೆಸಿದಾಗ ಆತ ಪದೇ ಪದೇ ಕರೆ ಮಾಡುತ್ತಿದ್ದುದು, ವಾಟ್ಸಾಪ್‌ ಸಂದೇಶಗಳನ್ನು ಕಳಿಸುತ್ತಿದ್ದುದು, ಪಾರ್ಟಿ ಕೊಡಿಸು, ಇಲ್ಲವಾದರೆ ನಿನಗೆ ಪರೀಕ್ಷೆ ಬರೆಯದಂತೆ ತಡೆಹಿಡಿಯುತ್ತೇನೆ, ನಿಮ್ಮ ತಂದೆಯವರಿಗೆ ಕಂಪ್ಲೈಟ್‌ ಮಾಡುತ್ತೇನೆ, ನಿಮ್ಮ ತಾಯಿಯೊಂದಿಗೆ ಮಾತಾಡುತ್ತೇನೆ ಎಂದೆಲ್ಲಾ ಅಶ್ಲೀಲವಾಗಿ ಮಾತನಾಡಿ ಆಕೆಗೆ ಮಾನಸಿಕ ಕಿರುಕುಳಕೊಟ್ಟಿರುವುದು ಕಂಡುಬಂದಿದೆ. ಇದೆಲ್ಲವರನ್ನು ಆಧರಿಸಿ ಅದು 25-11-2019ರಂದು ತನ್ನ ವರದಿಯನ್ನು ಪ್ರಾಂಶುಪಾಲರಿಗೆ ಸಲ್ಲಿಸಿತ್ತು.

ಜಯರಾಮು ಎಂಬುವವನ ಕೃತ್ಯಗಳಿಗೆ ಸೂಕ್ತ ಸಾಕ್ಷಿಗಳು ಸಹ ಲಭ್ಯವಿದ್ದುದರಿಂದ ಪ್ರಾಂಶುಪಾಲರು ಆಯುಕ್ತರ ಗಮನಕ್ಕೆ ತಂದಿದ್ದು, ಆಯುಕ್ತರು ದಿನಾಂಕ 12-12-2019ರಂದು ವಿಚಾರಣೆ ಕಾಯ್ದಿರಿಸಿ ಆತನನ್ನು ಸೇವೆಯಿಂದ ಅಮಾನತ್ತು ಮಾಡಿರುತ್ತಾರೆ.

ಶಾಸಕರ ಎಂಟ್ರಿ..

ಇದಾದ ನಾಲ್ಕೇ ದಿನದಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರರವರು ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳಾದ ಅಶ್ವಥನಾರಾಯಣರವರಿಗೆ ಪತ್ರ ಬರೆದಿದ್ದು ಅದರಲ್ಲಿ ಆರೋಪಿ ಜಯರಾಮುರವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ, ಕೆಲಸಕ್ಕೆ ನಿಯುಕ್ತಿ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

ದ್ವೀತಿಯ ದರ್ಜೆ ಸಹಾಯಕ ಜಯರಾಮು ಮಾಡಿರುವ ದೃಷ್ಕೃತ್ಯಗಳಿಗೆ ಎಲ್ಲಾ ರೀತಿಯ ಸಾಕ್ಷಿಗಳಿದ್ದು ಅವು ನಾನುಗೌರಿ.ಕಾಂಗೂ ಕೂಡ ಲಭ್ಯವಾಗಿವೆ. ವಿದ್ಯಾರ್ಥಿನಿಯ ದೂರು, ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಭೆಯ ನಿರ್ಣಯಗಳು, ಆತ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್‌ಗಳು ಸಿಕ್ಕಿದ್ದು ಅವುಗಳನ್ನು ನೋಡಿದರೆ ಆತನ ತಪ್ಪು ಎಂಥವರಿಗೂ ಅರಿವಾಗುತ್ತದೆ. ಅಂತದ್ದರಲ್ಲಿ ಈ ಬಿಜೆಪಿ ಶಾಸಕರು ಮಾತ್ರ ಏಕೆ ಆತನ ಪರ ನಿಂತಿದ್ದಾರೆ ಎಂಬುದು ಆಶ್ಚರ್‍ಯವಾಗಿದೆ.

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ಮತ್ತು ಆಕೆಯ ತಂದೆಗೆ ಒತ್ತಡ:

ದೂರು ನೀಡಿದ ಕೆಲವೇ ದಿನಗಳಲ್ಲಿ ವಿಷಯ ತಿಳಿದ ಕೂಡಲೇ ಆರೋಪಿ ಜಯರಾಮು ಹಲವು ಮೂಲಗಳಿಂದ ವಿದ್ಯಾರ್ಥಿನಿ ಮತ್ತು ಆಕೆಯ ತಂದೆಯೇ ಮೇಲೆ ದೂರು ವಾಪಸ್‌ ತೆಗೆದುಕೊಳ್ಳಲು ಒತ್ತಡ ತಂದಿದ್ದಾನೆ. ವಿದ್ಯಾರ್ಥಿನಿಯ ಬಳಿ ಬಂದು ಇನ್ನು ಎರಡು ವರ್ಷ ಮಾತ್ರ ನನ್ನ ಸರ್ವಿಸ್‌ ಇದೆ. ನೀವು ಕೇಳಿದ್ದು ಕೊಡುತ್ತೇನೆ, ನಿಮ್ಮ ಕಾಲಿಗೆ ಬೀಳುತ್ತೇನೆ ದಯವಿಟ್ಟು ದೂರು ವಾಪಸ್‌ ತಗೊಳ್ಳಿ ಎಂದು ಗೋಗೆರಿದ್ದಾನೆ.

ವಿದ್ಯಾರ್ಥಿನಿಯ ತಂದೆಯವರೊಡನೆಯು ಸಹ ಮಾತನಾಡಿ ದೂರನ್ನು ವಾಪಸ್‌ ಪಡೆಯುವಂತೆ ಒತ್ತಡ ತಂದಿದ್ದಾನೆ. ಹಾಗಾಗಿ ನವೆಂಬರ್‌ 07ರಂದು ವಿದ್ಯಾರ್ಥಿನಿಯ ತಂದೆಯು ದೂರನ್ನು ವಾಪಸ್‌ ಪಡೆಯುವ ಕುರಿತು ಪತ್ರವೊಂದನ್ನು ಬರೆದು ಅದಕ್ಕೆ ವಿದ್ಯಾರ್ಥಿನಿಯ ಸಹಿ ಹಾಕಿಸಿ ಪ್ರಾಂಶುಪಾಲರಿಗೆ ತಲುಪಿಸಿದ್ದಾರೆ. ಆದರೆ ಇದೆಲ್ಲವೂ ನಮ್ಮ ಮೇಲೆ ಒತ್ತಡ ತಂದು ಹೀಗೆ ಮಾಡಿಸಿದ್ದಾರೆ. ಆತನಿಗೆ ಶಿಕ್ಷೆಯಾಗಬೇಕೆಂದು ವಿದ್ಯಾರ್ಥಿನಿಯು ದೌರ್ಜನ್ಯ ತಡೆ ಸಮಿತಿಯ ಮುಂದೆ ಮಾತನ್ನಾಡಿರುವುದು ಆಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಅಂದರೆ ಜಯರಾಮು ತಪ್ಪು ಮಾಡಿದ್ದಲ್ಲದೇ ದೂರು ವಾಪಸ್‌ ಪಡೆಯುವಂತೆಯೂ ಸಹ ತನಗಿರುವ ಶಕ್ತಿ ಸಾಮರ್ಥ್ಯ ಬಳಿಸಿ ಒತ್ತಡ ತಂದಿರುವುದು ಸ್ಪಷ್ಟವಾಗಿದೆ. ಇನ್ನು ಮುಂದುವರೆದು ಅಮಾನತ್ತು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಿಂದ ಆಯಕ್ತರಿಗೆ ಪತ್ರ ಬರೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಆತನ ಅಮಾನತ್ತು ರದ್ದಗೊಂಡರೂ ಅಚ್ಚರಿಪಡಬೇಕಾಗಿಲ್ಲ..

ಹೀಗಾದರೆ ನ್ಯಾಯದ ಕಥೆಯೇನು?

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಭೇಟಿ ಪಡಾವೋ, ಭೇಟಿ ಬಚಾಚೊ ಎಂದು ಘೋಷಣೆಯಲ್ಲಿ ಮಾತ್ರ ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಇದರಿಂದ ಅನ್ಯಾಯಕ್ಕೊಳಗಾದವರು ಸಹ ದೂರು ಕೊಡಲು ಹೆದರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೂರು ನೀಡಿದ ವಿದ್ಯಾರ್ಥಿನಿಯ ಬಾಯಿ ಮುಚ್ಚಿಸುವ ಹುನ್ನಾರ ಮೈಸೂರಿನಲ್ಲಿ ನಡೆಯುತ್ತಿದೆ. ತನ್ನನ್ನು ಆರಿಸಿದ ಜನರ ಹಿತಕಾಯಬೇಕಾದ ಶಾಸಕರೆ ಆರೋಪಿಗಳ ಪರ ನಿಂತಿರುವುದು ದುರದೃಷ್ಟಕರವಾಗಿದೆ.

ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಅಮಾನತ್ತು ರದ್ದುಗೊಳಸಬಾರದು. ಆದಷ್ಟು ಬೇಗ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದು ಉಳಿದವರಿಗೂ ಪಾಠವಾಗಬೇಕು. ಆಮೂಲಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...