Homeಕರ್ನಾಟಕಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -
- Advertisement -

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವರಿಗೆ ಸತತ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಅಮಾನತು ಆಗಿರುವ ಆರೋಪಿಯ ಪರ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು ವಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ

ದಿನಾಂಕ 18-10-2019 ರಂದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮು ಎಂಬುವವರು ಅನುಚಿತವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಅವರು ಪದೇ ಪದೇ ಫೋನ್ ಮಾಡಿ, ವಾಟ್ಸಾಪ್‌ ಮಾಡಿ ಪಾರ್ಟಿ ಕೊಡಿಸು, ನಿಮ್ಮ ತಂದೆ ತಾಯಿಯ ನಂಬರ್‌ ಕೊಡು ಎಂದು ಒತ್ತಾಯಿಸುತ್ತಾರೆ, ಇದರಿಂದ ನನಗೆ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದು ಓದಲು ತೊಂದರೆಯಾಗುತ್ತಿದೆ. ಹಾಗಾಗಿ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿ ಒತ್ತಾಯಿಸಿದ್ದರು.

ದೂರಿನ ಆಧಾರದಲ್ಲಿ ಕಾಲೇಜಿನಲ್ಲಿ ಆಂತರಿಕ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಡಾ.ಪಿ.ಎಚ್‌ ತೇಜಸ್ವಿನಿಯವರ ನೇತೃತ್ವದಲ್ಲಿ 28-10-2019ರಿಂದ ಹಲವು ಸುತ್ತಿನ ಸಭೆ ಸೇರಿ ವಿಚಾರಣೆ ನಡೆಸಿತ್ತು. ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮುರವರು ಆ ವಿದ್ಯಾರ್ಥಿನಿಯೊಂದಿಗೆ ನಡೆಸಿದ ಫೋನ್‌ ಸಂಭಾಷಣೆಗಳ ರೆಕಾರ್ಡ್ ಇದ್ದುದರಿಂದ ಮೇಲ್ನೋಟದಲ್ಲಿಯೇ ಆತನ ತಪ್ಪು ನಡವಳಿಕೆ ಸಾಬೀತಾಗಿತ್ತು.

ಆನಂತರ ಆ ವಿದ್ಯಾರ್ಥಿನಿಯ ನಡುವೆ ಸಮಿತಿಯು ಆಪ್ತಸಮಾಲೋಚನೆ ನಡೆಸಿದಾಗ ಆತ ಪದೇ ಪದೇ ಕರೆ ಮಾಡುತ್ತಿದ್ದುದು, ವಾಟ್ಸಾಪ್‌ ಸಂದೇಶಗಳನ್ನು ಕಳಿಸುತ್ತಿದ್ದುದು, ಪಾರ್ಟಿ ಕೊಡಿಸು, ಇಲ್ಲವಾದರೆ ನಿನಗೆ ಪರೀಕ್ಷೆ ಬರೆಯದಂತೆ ತಡೆಹಿಡಿಯುತ್ತೇನೆ, ನಿಮ್ಮ ತಂದೆಯವರಿಗೆ ಕಂಪ್ಲೈಟ್‌ ಮಾಡುತ್ತೇನೆ, ನಿಮ್ಮ ತಾಯಿಯೊಂದಿಗೆ ಮಾತಾಡುತ್ತೇನೆ ಎಂದೆಲ್ಲಾ ಅಶ್ಲೀಲವಾಗಿ ಮಾತನಾಡಿ ಆಕೆಗೆ ಮಾನಸಿಕ ಕಿರುಕುಳಕೊಟ್ಟಿರುವುದು ಕಂಡುಬಂದಿದೆ. ಇದೆಲ್ಲವರನ್ನು ಆಧರಿಸಿ ಅದು 25-11-2019ರಂದು ತನ್ನ ವರದಿಯನ್ನು ಪ್ರಾಂಶುಪಾಲರಿಗೆ ಸಲ್ಲಿಸಿತ್ತು.

ಜಯರಾಮು ಎಂಬುವವನ ಕೃತ್ಯಗಳಿಗೆ ಸೂಕ್ತ ಸಾಕ್ಷಿಗಳು ಸಹ ಲಭ್ಯವಿದ್ದುದರಿಂದ ಪ್ರಾಂಶುಪಾಲರು ಆಯುಕ್ತರ ಗಮನಕ್ಕೆ ತಂದಿದ್ದು, ಆಯುಕ್ತರು ದಿನಾಂಕ 12-12-2019ರಂದು ವಿಚಾರಣೆ ಕಾಯ್ದಿರಿಸಿ ಆತನನ್ನು ಸೇವೆಯಿಂದ ಅಮಾನತ್ತು ಮಾಡಿರುತ್ತಾರೆ.

ಶಾಸಕರ ಎಂಟ್ರಿ..

ಇದಾದ ನಾಲ್ಕೇ ದಿನದಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರರವರು ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳಾದ ಅಶ್ವಥನಾರಾಯಣರವರಿಗೆ ಪತ್ರ ಬರೆದಿದ್ದು ಅದರಲ್ಲಿ ಆರೋಪಿ ಜಯರಾಮುರವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ, ಕೆಲಸಕ್ಕೆ ನಿಯುಕ್ತಿ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

ದ್ವೀತಿಯ ದರ್ಜೆ ಸಹಾಯಕ ಜಯರಾಮು ಮಾಡಿರುವ ದೃಷ್ಕೃತ್ಯಗಳಿಗೆ ಎಲ್ಲಾ ರೀತಿಯ ಸಾಕ್ಷಿಗಳಿದ್ದು ಅವು ನಾನುಗೌರಿ.ಕಾಂಗೂ ಕೂಡ ಲಭ್ಯವಾಗಿವೆ. ವಿದ್ಯಾರ್ಥಿನಿಯ ದೂರು, ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಭೆಯ ನಿರ್ಣಯಗಳು, ಆತ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್‌ಗಳು ಸಿಕ್ಕಿದ್ದು ಅವುಗಳನ್ನು ನೋಡಿದರೆ ಆತನ ತಪ್ಪು ಎಂಥವರಿಗೂ ಅರಿವಾಗುತ್ತದೆ. ಅಂತದ್ದರಲ್ಲಿ ಈ ಬಿಜೆಪಿ ಶಾಸಕರು ಮಾತ್ರ ಏಕೆ ಆತನ ಪರ ನಿಂತಿದ್ದಾರೆ ಎಂಬುದು ಆಶ್ಚರ್‍ಯವಾಗಿದೆ.

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ಮತ್ತು ಆಕೆಯ ತಂದೆಗೆ ಒತ್ತಡ:

ದೂರು ನೀಡಿದ ಕೆಲವೇ ದಿನಗಳಲ್ಲಿ ವಿಷಯ ತಿಳಿದ ಕೂಡಲೇ ಆರೋಪಿ ಜಯರಾಮು ಹಲವು ಮೂಲಗಳಿಂದ ವಿದ್ಯಾರ್ಥಿನಿ ಮತ್ತು ಆಕೆಯ ತಂದೆಯೇ ಮೇಲೆ ದೂರು ವಾಪಸ್‌ ತೆಗೆದುಕೊಳ್ಳಲು ಒತ್ತಡ ತಂದಿದ್ದಾನೆ. ವಿದ್ಯಾರ್ಥಿನಿಯ ಬಳಿ ಬಂದು ಇನ್ನು ಎರಡು ವರ್ಷ ಮಾತ್ರ ನನ್ನ ಸರ್ವಿಸ್‌ ಇದೆ. ನೀವು ಕೇಳಿದ್ದು ಕೊಡುತ್ತೇನೆ, ನಿಮ್ಮ ಕಾಲಿಗೆ ಬೀಳುತ್ತೇನೆ ದಯವಿಟ್ಟು ದೂರು ವಾಪಸ್‌ ತಗೊಳ್ಳಿ ಎಂದು ಗೋಗೆರಿದ್ದಾನೆ.

ವಿದ್ಯಾರ್ಥಿನಿಯ ತಂದೆಯವರೊಡನೆಯು ಸಹ ಮಾತನಾಡಿ ದೂರನ್ನು ವಾಪಸ್‌ ಪಡೆಯುವಂತೆ ಒತ್ತಡ ತಂದಿದ್ದಾನೆ. ಹಾಗಾಗಿ ನವೆಂಬರ್‌ 07ರಂದು ವಿದ್ಯಾರ್ಥಿನಿಯ ತಂದೆಯು ದೂರನ್ನು ವಾಪಸ್‌ ಪಡೆಯುವ ಕುರಿತು ಪತ್ರವೊಂದನ್ನು ಬರೆದು ಅದಕ್ಕೆ ವಿದ್ಯಾರ್ಥಿನಿಯ ಸಹಿ ಹಾಕಿಸಿ ಪ್ರಾಂಶುಪಾಲರಿಗೆ ತಲುಪಿಸಿದ್ದಾರೆ. ಆದರೆ ಇದೆಲ್ಲವೂ ನಮ್ಮ ಮೇಲೆ ಒತ್ತಡ ತಂದು ಹೀಗೆ ಮಾಡಿಸಿದ್ದಾರೆ. ಆತನಿಗೆ ಶಿಕ್ಷೆಯಾಗಬೇಕೆಂದು ವಿದ್ಯಾರ್ಥಿನಿಯು ದೌರ್ಜನ್ಯ ತಡೆ ಸಮಿತಿಯ ಮುಂದೆ ಮಾತನ್ನಾಡಿರುವುದು ಆಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಅಂದರೆ ಜಯರಾಮು ತಪ್ಪು ಮಾಡಿದ್ದಲ್ಲದೇ ದೂರು ವಾಪಸ್‌ ಪಡೆಯುವಂತೆಯೂ ಸಹ ತನಗಿರುವ ಶಕ್ತಿ ಸಾಮರ್ಥ್ಯ ಬಳಿಸಿ ಒತ್ತಡ ತಂದಿರುವುದು ಸ್ಪಷ್ಟವಾಗಿದೆ. ಇನ್ನು ಮುಂದುವರೆದು ಅಮಾನತ್ತು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಿಂದ ಆಯಕ್ತರಿಗೆ ಪತ್ರ ಬರೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಆತನ ಅಮಾನತ್ತು ರದ್ದಗೊಂಡರೂ ಅಚ್ಚರಿಪಡಬೇಕಾಗಿಲ್ಲ..

ಹೀಗಾದರೆ ನ್ಯಾಯದ ಕಥೆಯೇನು?

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಭೇಟಿ ಪಡಾವೋ, ಭೇಟಿ ಬಚಾಚೊ ಎಂದು ಘೋಷಣೆಯಲ್ಲಿ ಮಾತ್ರ ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಇದರಿಂದ ಅನ್ಯಾಯಕ್ಕೊಳಗಾದವರು ಸಹ ದೂರು ಕೊಡಲು ಹೆದರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೂರು ನೀಡಿದ ವಿದ್ಯಾರ್ಥಿನಿಯ ಬಾಯಿ ಮುಚ್ಚಿಸುವ ಹುನ್ನಾರ ಮೈಸೂರಿನಲ್ಲಿ ನಡೆಯುತ್ತಿದೆ. ತನ್ನನ್ನು ಆರಿಸಿದ ಜನರ ಹಿತಕಾಯಬೇಕಾದ ಶಾಸಕರೆ ಆರೋಪಿಗಳ ಪರ ನಿಂತಿರುವುದು ದುರದೃಷ್ಟಕರವಾಗಿದೆ.

ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಅಮಾನತ್ತು ರದ್ದುಗೊಳಸಬಾರದು. ಆದಷ್ಟು ಬೇಗ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದು ಉಳಿದವರಿಗೂ ಪಾಠವಾಗಬೇಕು. ಆಮೂಲಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...