Homeಕರ್ನಾಟಕಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -
- Advertisement -

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವರಿಗೆ ಸತತ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಅಮಾನತು ಆಗಿರುವ ಆರೋಪಿಯ ಪರ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು ವಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ

ದಿನಾಂಕ 18-10-2019 ರಂದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮು ಎಂಬುವವರು ಅನುಚಿತವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಅವರು ಪದೇ ಪದೇ ಫೋನ್ ಮಾಡಿ, ವಾಟ್ಸಾಪ್‌ ಮಾಡಿ ಪಾರ್ಟಿ ಕೊಡಿಸು, ನಿಮ್ಮ ತಂದೆ ತಾಯಿಯ ನಂಬರ್‌ ಕೊಡು ಎಂದು ಒತ್ತಾಯಿಸುತ್ತಾರೆ, ಇದರಿಂದ ನನಗೆ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದು ಓದಲು ತೊಂದರೆಯಾಗುತ್ತಿದೆ. ಹಾಗಾಗಿ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿ ಒತ್ತಾಯಿಸಿದ್ದರು.

ದೂರಿನ ಆಧಾರದಲ್ಲಿ ಕಾಲೇಜಿನಲ್ಲಿ ಆಂತರಿಕ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಡಾ.ಪಿ.ಎಚ್‌ ತೇಜಸ್ವಿನಿಯವರ ನೇತೃತ್ವದಲ್ಲಿ 28-10-2019ರಿಂದ ಹಲವು ಸುತ್ತಿನ ಸಭೆ ಸೇರಿ ವಿಚಾರಣೆ ನಡೆಸಿತ್ತು. ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮುರವರು ಆ ವಿದ್ಯಾರ್ಥಿನಿಯೊಂದಿಗೆ ನಡೆಸಿದ ಫೋನ್‌ ಸಂಭಾಷಣೆಗಳ ರೆಕಾರ್ಡ್ ಇದ್ದುದರಿಂದ ಮೇಲ್ನೋಟದಲ್ಲಿಯೇ ಆತನ ತಪ್ಪು ನಡವಳಿಕೆ ಸಾಬೀತಾಗಿತ್ತು.

ಆನಂತರ ಆ ವಿದ್ಯಾರ್ಥಿನಿಯ ನಡುವೆ ಸಮಿತಿಯು ಆಪ್ತಸಮಾಲೋಚನೆ ನಡೆಸಿದಾಗ ಆತ ಪದೇ ಪದೇ ಕರೆ ಮಾಡುತ್ತಿದ್ದುದು, ವಾಟ್ಸಾಪ್‌ ಸಂದೇಶಗಳನ್ನು ಕಳಿಸುತ್ತಿದ್ದುದು, ಪಾರ್ಟಿ ಕೊಡಿಸು, ಇಲ್ಲವಾದರೆ ನಿನಗೆ ಪರೀಕ್ಷೆ ಬರೆಯದಂತೆ ತಡೆಹಿಡಿಯುತ್ತೇನೆ, ನಿಮ್ಮ ತಂದೆಯವರಿಗೆ ಕಂಪ್ಲೈಟ್‌ ಮಾಡುತ್ತೇನೆ, ನಿಮ್ಮ ತಾಯಿಯೊಂದಿಗೆ ಮಾತಾಡುತ್ತೇನೆ ಎಂದೆಲ್ಲಾ ಅಶ್ಲೀಲವಾಗಿ ಮಾತನಾಡಿ ಆಕೆಗೆ ಮಾನಸಿಕ ಕಿರುಕುಳಕೊಟ್ಟಿರುವುದು ಕಂಡುಬಂದಿದೆ. ಇದೆಲ್ಲವರನ್ನು ಆಧರಿಸಿ ಅದು 25-11-2019ರಂದು ತನ್ನ ವರದಿಯನ್ನು ಪ್ರಾಂಶುಪಾಲರಿಗೆ ಸಲ್ಲಿಸಿತ್ತು.

ಜಯರಾಮು ಎಂಬುವವನ ಕೃತ್ಯಗಳಿಗೆ ಸೂಕ್ತ ಸಾಕ್ಷಿಗಳು ಸಹ ಲಭ್ಯವಿದ್ದುದರಿಂದ ಪ್ರಾಂಶುಪಾಲರು ಆಯುಕ್ತರ ಗಮನಕ್ಕೆ ತಂದಿದ್ದು, ಆಯುಕ್ತರು ದಿನಾಂಕ 12-12-2019ರಂದು ವಿಚಾರಣೆ ಕಾಯ್ದಿರಿಸಿ ಆತನನ್ನು ಸೇವೆಯಿಂದ ಅಮಾನತ್ತು ಮಾಡಿರುತ್ತಾರೆ.

ಶಾಸಕರ ಎಂಟ್ರಿ..

ಇದಾದ ನಾಲ್ಕೇ ದಿನದಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರರವರು ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳಾದ ಅಶ್ವಥನಾರಾಯಣರವರಿಗೆ ಪತ್ರ ಬರೆದಿದ್ದು ಅದರಲ್ಲಿ ಆರೋಪಿ ಜಯರಾಮುರವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ, ಕೆಲಸಕ್ಕೆ ನಿಯುಕ್ತಿ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

ದ್ವೀತಿಯ ದರ್ಜೆ ಸಹಾಯಕ ಜಯರಾಮು ಮಾಡಿರುವ ದೃಷ್ಕೃತ್ಯಗಳಿಗೆ ಎಲ್ಲಾ ರೀತಿಯ ಸಾಕ್ಷಿಗಳಿದ್ದು ಅವು ನಾನುಗೌರಿ.ಕಾಂಗೂ ಕೂಡ ಲಭ್ಯವಾಗಿವೆ. ವಿದ್ಯಾರ್ಥಿನಿಯ ದೂರು, ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಭೆಯ ನಿರ್ಣಯಗಳು, ಆತ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್‌ಗಳು ಸಿಕ್ಕಿದ್ದು ಅವುಗಳನ್ನು ನೋಡಿದರೆ ಆತನ ತಪ್ಪು ಎಂಥವರಿಗೂ ಅರಿವಾಗುತ್ತದೆ. ಅಂತದ್ದರಲ್ಲಿ ಈ ಬಿಜೆಪಿ ಶಾಸಕರು ಮಾತ್ರ ಏಕೆ ಆತನ ಪರ ನಿಂತಿದ್ದಾರೆ ಎಂಬುದು ಆಶ್ಚರ್‍ಯವಾಗಿದೆ.

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ಮತ್ತು ಆಕೆಯ ತಂದೆಗೆ ಒತ್ತಡ:

ದೂರು ನೀಡಿದ ಕೆಲವೇ ದಿನಗಳಲ್ಲಿ ವಿಷಯ ತಿಳಿದ ಕೂಡಲೇ ಆರೋಪಿ ಜಯರಾಮು ಹಲವು ಮೂಲಗಳಿಂದ ವಿದ್ಯಾರ್ಥಿನಿ ಮತ್ತು ಆಕೆಯ ತಂದೆಯೇ ಮೇಲೆ ದೂರು ವಾಪಸ್‌ ತೆಗೆದುಕೊಳ್ಳಲು ಒತ್ತಡ ತಂದಿದ್ದಾನೆ. ವಿದ್ಯಾರ್ಥಿನಿಯ ಬಳಿ ಬಂದು ಇನ್ನು ಎರಡು ವರ್ಷ ಮಾತ್ರ ನನ್ನ ಸರ್ವಿಸ್‌ ಇದೆ. ನೀವು ಕೇಳಿದ್ದು ಕೊಡುತ್ತೇನೆ, ನಿಮ್ಮ ಕಾಲಿಗೆ ಬೀಳುತ್ತೇನೆ ದಯವಿಟ್ಟು ದೂರು ವಾಪಸ್‌ ತಗೊಳ್ಳಿ ಎಂದು ಗೋಗೆರಿದ್ದಾನೆ.

ವಿದ್ಯಾರ್ಥಿನಿಯ ತಂದೆಯವರೊಡನೆಯು ಸಹ ಮಾತನಾಡಿ ದೂರನ್ನು ವಾಪಸ್‌ ಪಡೆಯುವಂತೆ ಒತ್ತಡ ತಂದಿದ್ದಾನೆ. ಹಾಗಾಗಿ ನವೆಂಬರ್‌ 07ರಂದು ವಿದ್ಯಾರ್ಥಿನಿಯ ತಂದೆಯು ದೂರನ್ನು ವಾಪಸ್‌ ಪಡೆಯುವ ಕುರಿತು ಪತ್ರವೊಂದನ್ನು ಬರೆದು ಅದಕ್ಕೆ ವಿದ್ಯಾರ್ಥಿನಿಯ ಸಹಿ ಹಾಕಿಸಿ ಪ್ರಾಂಶುಪಾಲರಿಗೆ ತಲುಪಿಸಿದ್ದಾರೆ. ಆದರೆ ಇದೆಲ್ಲವೂ ನಮ್ಮ ಮೇಲೆ ಒತ್ತಡ ತಂದು ಹೀಗೆ ಮಾಡಿಸಿದ್ದಾರೆ. ಆತನಿಗೆ ಶಿಕ್ಷೆಯಾಗಬೇಕೆಂದು ವಿದ್ಯಾರ್ಥಿನಿಯು ದೌರ್ಜನ್ಯ ತಡೆ ಸಮಿತಿಯ ಮುಂದೆ ಮಾತನ್ನಾಡಿರುವುದು ಆಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಅಂದರೆ ಜಯರಾಮು ತಪ್ಪು ಮಾಡಿದ್ದಲ್ಲದೇ ದೂರು ವಾಪಸ್‌ ಪಡೆಯುವಂತೆಯೂ ಸಹ ತನಗಿರುವ ಶಕ್ತಿ ಸಾಮರ್ಥ್ಯ ಬಳಿಸಿ ಒತ್ತಡ ತಂದಿರುವುದು ಸ್ಪಷ್ಟವಾಗಿದೆ. ಇನ್ನು ಮುಂದುವರೆದು ಅಮಾನತ್ತು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಿಂದ ಆಯಕ್ತರಿಗೆ ಪತ್ರ ಬರೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಆತನ ಅಮಾನತ್ತು ರದ್ದಗೊಂಡರೂ ಅಚ್ಚರಿಪಡಬೇಕಾಗಿಲ್ಲ..

ಹೀಗಾದರೆ ನ್ಯಾಯದ ಕಥೆಯೇನು?

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಭೇಟಿ ಪಡಾವೋ, ಭೇಟಿ ಬಚಾಚೊ ಎಂದು ಘೋಷಣೆಯಲ್ಲಿ ಮಾತ್ರ ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಇದರಿಂದ ಅನ್ಯಾಯಕ್ಕೊಳಗಾದವರು ಸಹ ದೂರು ಕೊಡಲು ಹೆದರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೂರು ನೀಡಿದ ವಿದ್ಯಾರ್ಥಿನಿಯ ಬಾಯಿ ಮುಚ್ಚಿಸುವ ಹುನ್ನಾರ ಮೈಸೂರಿನಲ್ಲಿ ನಡೆಯುತ್ತಿದೆ. ತನ್ನನ್ನು ಆರಿಸಿದ ಜನರ ಹಿತಕಾಯಬೇಕಾದ ಶಾಸಕರೆ ಆರೋಪಿಗಳ ಪರ ನಿಂತಿರುವುದು ದುರದೃಷ್ಟಕರವಾಗಿದೆ.

ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಅಮಾನತ್ತು ರದ್ದುಗೊಳಸಬಾರದು. ಆದಷ್ಟು ಬೇಗ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದು ಉಳಿದವರಿಗೂ ಪಾಠವಾಗಬೇಕು. ಆಮೂಲಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...