Homeಕರ್ನಾಟಕಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -
- Advertisement -

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವರಿಗೆ ಸತತ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಅಮಾನತು ಆಗಿರುವ ಆರೋಪಿಯ ಪರ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು ವಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ

ದಿನಾಂಕ 18-10-2019 ರಂದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮು ಎಂಬುವವರು ಅನುಚಿತವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಅವರು ಪದೇ ಪದೇ ಫೋನ್ ಮಾಡಿ, ವಾಟ್ಸಾಪ್‌ ಮಾಡಿ ಪಾರ್ಟಿ ಕೊಡಿಸು, ನಿಮ್ಮ ತಂದೆ ತಾಯಿಯ ನಂಬರ್‌ ಕೊಡು ಎಂದು ಒತ್ತಾಯಿಸುತ್ತಾರೆ, ಇದರಿಂದ ನನಗೆ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದು ಓದಲು ತೊಂದರೆಯಾಗುತ್ತಿದೆ. ಹಾಗಾಗಿ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿ ಒತ್ತಾಯಿಸಿದ್ದರು.

ದೂರಿನ ಆಧಾರದಲ್ಲಿ ಕಾಲೇಜಿನಲ್ಲಿ ಆಂತರಿಕ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಡಾ.ಪಿ.ಎಚ್‌ ತೇಜಸ್ವಿನಿಯವರ ನೇತೃತ್ವದಲ್ಲಿ 28-10-2019ರಿಂದ ಹಲವು ಸುತ್ತಿನ ಸಭೆ ಸೇರಿ ವಿಚಾರಣೆ ನಡೆಸಿತ್ತು. ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮುರವರು ಆ ವಿದ್ಯಾರ್ಥಿನಿಯೊಂದಿಗೆ ನಡೆಸಿದ ಫೋನ್‌ ಸಂಭಾಷಣೆಗಳ ರೆಕಾರ್ಡ್ ಇದ್ದುದರಿಂದ ಮೇಲ್ನೋಟದಲ್ಲಿಯೇ ಆತನ ತಪ್ಪು ನಡವಳಿಕೆ ಸಾಬೀತಾಗಿತ್ತು.

ಆನಂತರ ಆ ವಿದ್ಯಾರ್ಥಿನಿಯ ನಡುವೆ ಸಮಿತಿಯು ಆಪ್ತಸಮಾಲೋಚನೆ ನಡೆಸಿದಾಗ ಆತ ಪದೇ ಪದೇ ಕರೆ ಮಾಡುತ್ತಿದ್ದುದು, ವಾಟ್ಸಾಪ್‌ ಸಂದೇಶಗಳನ್ನು ಕಳಿಸುತ್ತಿದ್ದುದು, ಪಾರ್ಟಿ ಕೊಡಿಸು, ಇಲ್ಲವಾದರೆ ನಿನಗೆ ಪರೀಕ್ಷೆ ಬರೆಯದಂತೆ ತಡೆಹಿಡಿಯುತ್ತೇನೆ, ನಿಮ್ಮ ತಂದೆಯವರಿಗೆ ಕಂಪ್ಲೈಟ್‌ ಮಾಡುತ್ತೇನೆ, ನಿಮ್ಮ ತಾಯಿಯೊಂದಿಗೆ ಮಾತಾಡುತ್ತೇನೆ ಎಂದೆಲ್ಲಾ ಅಶ್ಲೀಲವಾಗಿ ಮಾತನಾಡಿ ಆಕೆಗೆ ಮಾನಸಿಕ ಕಿರುಕುಳಕೊಟ್ಟಿರುವುದು ಕಂಡುಬಂದಿದೆ. ಇದೆಲ್ಲವರನ್ನು ಆಧರಿಸಿ ಅದು 25-11-2019ರಂದು ತನ್ನ ವರದಿಯನ್ನು ಪ್ರಾಂಶುಪಾಲರಿಗೆ ಸಲ್ಲಿಸಿತ್ತು.

ಜಯರಾಮು ಎಂಬುವವನ ಕೃತ್ಯಗಳಿಗೆ ಸೂಕ್ತ ಸಾಕ್ಷಿಗಳು ಸಹ ಲಭ್ಯವಿದ್ದುದರಿಂದ ಪ್ರಾಂಶುಪಾಲರು ಆಯುಕ್ತರ ಗಮನಕ್ಕೆ ತಂದಿದ್ದು, ಆಯುಕ್ತರು ದಿನಾಂಕ 12-12-2019ರಂದು ವಿಚಾರಣೆ ಕಾಯ್ದಿರಿಸಿ ಆತನನ್ನು ಸೇವೆಯಿಂದ ಅಮಾನತ್ತು ಮಾಡಿರುತ್ತಾರೆ.

ಶಾಸಕರ ಎಂಟ್ರಿ..

ಇದಾದ ನಾಲ್ಕೇ ದಿನದಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರರವರು ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳಾದ ಅಶ್ವಥನಾರಾಯಣರವರಿಗೆ ಪತ್ರ ಬರೆದಿದ್ದು ಅದರಲ್ಲಿ ಆರೋಪಿ ಜಯರಾಮುರವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ, ಕೆಲಸಕ್ಕೆ ನಿಯುಕ್ತಿ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

ದ್ವೀತಿಯ ದರ್ಜೆ ಸಹಾಯಕ ಜಯರಾಮು ಮಾಡಿರುವ ದೃಷ್ಕೃತ್ಯಗಳಿಗೆ ಎಲ್ಲಾ ರೀತಿಯ ಸಾಕ್ಷಿಗಳಿದ್ದು ಅವು ನಾನುಗೌರಿ.ಕಾಂಗೂ ಕೂಡ ಲಭ್ಯವಾಗಿವೆ. ವಿದ್ಯಾರ್ಥಿನಿಯ ದೂರು, ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಭೆಯ ನಿರ್ಣಯಗಳು, ಆತ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್‌ಗಳು ಸಿಕ್ಕಿದ್ದು ಅವುಗಳನ್ನು ನೋಡಿದರೆ ಆತನ ತಪ್ಪು ಎಂಥವರಿಗೂ ಅರಿವಾಗುತ್ತದೆ. ಅಂತದ್ದರಲ್ಲಿ ಈ ಬಿಜೆಪಿ ಶಾಸಕರು ಮಾತ್ರ ಏಕೆ ಆತನ ಪರ ನಿಂತಿದ್ದಾರೆ ಎಂಬುದು ಆಶ್ಚರ್‍ಯವಾಗಿದೆ.

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ಮತ್ತು ಆಕೆಯ ತಂದೆಗೆ ಒತ್ತಡ:

ದೂರು ನೀಡಿದ ಕೆಲವೇ ದಿನಗಳಲ್ಲಿ ವಿಷಯ ತಿಳಿದ ಕೂಡಲೇ ಆರೋಪಿ ಜಯರಾಮು ಹಲವು ಮೂಲಗಳಿಂದ ವಿದ್ಯಾರ್ಥಿನಿ ಮತ್ತು ಆಕೆಯ ತಂದೆಯೇ ಮೇಲೆ ದೂರು ವಾಪಸ್‌ ತೆಗೆದುಕೊಳ್ಳಲು ಒತ್ತಡ ತಂದಿದ್ದಾನೆ. ವಿದ್ಯಾರ್ಥಿನಿಯ ಬಳಿ ಬಂದು ಇನ್ನು ಎರಡು ವರ್ಷ ಮಾತ್ರ ನನ್ನ ಸರ್ವಿಸ್‌ ಇದೆ. ನೀವು ಕೇಳಿದ್ದು ಕೊಡುತ್ತೇನೆ, ನಿಮ್ಮ ಕಾಲಿಗೆ ಬೀಳುತ್ತೇನೆ ದಯವಿಟ್ಟು ದೂರು ವಾಪಸ್‌ ತಗೊಳ್ಳಿ ಎಂದು ಗೋಗೆರಿದ್ದಾನೆ.

ವಿದ್ಯಾರ್ಥಿನಿಯ ತಂದೆಯವರೊಡನೆಯು ಸಹ ಮಾತನಾಡಿ ದೂರನ್ನು ವಾಪಸ್‌ ಪಡೆಯುವಂತೆ ಒತ್ತಡ ತಂದಿದ್ದಾನೆ. ಹಾಗಾಗಿ ನವೆಂಬರ್‌ 07ರಂದು ವಿದ್ಯಾರ್ಥಿನಿಯ ತಂದೆಯು ದೂರನ್ನು ವಾಪಸ್‌ ಪಡೆಯುವ ಕುರಿತು ಪತ್ರವೊಂದನ್ನು ಬರೆದು ಅದಕ್ಕೆ ವಿದ್ಯಾರ್ಥಿನಿಯ ಸಹಿ ಹಾಕಿಸಿ ಪ್ರಾಂಶುಪಾಲರಿಗೆ ತಲುಪಿಸಿದ್ದಾರೆ. ಆದರೆ ಇದೆಲ್ಲವೂ ನಮ್ಮ ಮೇಲೆ ಒತ್ತಡ ತಂದು ಹೀಗೆ ಮಾಡಿಸಿದ್ದಾರೆ. ಆತನಿಗೆ ಶಿಕ್ಷೆಯಾಗಬೇಕೆಂದು ವಿದ್ಯಾರ್ಥಿನಿಯು ದೌರ್ಜನ್ಯ ತಡೆ ಸಮಿತಿಯ ಮುಂದೆ ಮಾತನ್ನಾಡಿರುವುದು ಆಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಅಂದರೆ ಜಯರಾಮು ತಪ್ಪು ಮಾಡಿದ್ದಲ್ಲದೇ ದೂರು ವಾಪಸ್‌ ಪಡೆಯುವಂತೆಯೂ ಸಹ ತನಗಿರುವ ಶಕ್ತಿ ಸಾಮರ್ಥ್ಯ ಬಳಿಸಿ ಒತ್ತಡ ತಂದಿರುವುದು ಸ್ಪಷ್ಟವಾಗಿದೆ. ಇನ್ನು ಮುಂದುವರೆದು ಅಮಾನತ್ತು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಿಂದ ಆಯಕ್ತರಿಗೆ ಪತ್ರ ಬರೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಆತನ ಅಮಾನತ್ತು ರದ್ದಗೊಂಡರೂ ಅಚ್ಚರಿಪಡಬೇಕಾಗಿಲ್ಲ..

ಹೀಗಾದರೆ ನ್ಯಾಯದ ಕಥೆಯೇನು?

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಭೇಟಿ ಪಡಾವೋ, ಭೇಟಿ ಬಚಾಚೊ ಎಂದು ಘೋಷಣೆಯಲ್ಲಿ ಮಾತ್ರ ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಇದರಿಂದ ಅನ್ಯಾಯಕ್ಕೊಳಗಾದವರು ಸಹ ದೂರು ಕೊಡಲು ಹೆದರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೂರು ನೀಡಿದ ವಿದ್ಯಾರ್ಥಿನಿಯ ಬಾಯಿ ಮುಚ್ಚಿಸುವ ಹುನ್ನಾರ ಮೈಸೂರಿನಲ್ಲಿ ನಡೆಯುತ್ತಿದೆ. ತನ್ನನ್ನು ಆರಿಸಿದ ಜನರ ಹಿತಕಾಯಬೇಕಾದ ಶಾಸಕರೆ ಆರೋಪಿಗಳ ಪರ ನಿಂತಿರುವುದು ದುರದೃಷ್ಟಕರವಾಗಿದೆ.

ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಅಮಾನತ್ತು ರದ್ದುಗೊಳಸಬಾರದು. ಆದಷ್ಟು ಬೇಗ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದು ಉಳಿದವರಿಗೂ ಪಾಠವಾಗಬೇಕು. ಆಮೂಲಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...