Homeಕರ್ನಾಟಕಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -
- Advertisement -

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವರಿಗೆ ಸತತ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಅಮಾನತು ಆಗಿರುವ ಆರೋಪಿಯ ಪರ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು ವಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ

ದಿನಾಂಕ 18-10-2019 ರಂದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮು ಎಂಬುವವರು ಅನುಚಿತವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು.

ಅವರು ಪದೇ ಪದೇ ಫೋನ್ ಮಾಡಿ, ವಾಟ್ಸಾಪ್‌ ಮಾಡಿ ಪಾರ್ಟಿ ಕೊಡಿಸು, ನಿಮ್ಮ ತಂದೆ ತಾಯಿಯ ನಂಬರ್‌ ಕೊಡು ಎಂದು ಒತ್ತಾಯಿಸುತ್ತಾರೆ, ಇದರಿಂದ ನನಗೆ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದು ಓದಲು ತೊಂದರೆಯಾಗುತ್ತಿದೆ. ಹಾಗಾಗಿ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿ ಒತ್ತಾಯಿಸಿದ್ದರು.

ದೂರಿನ ಆಧಾರದಲ್ಲಿ ಕಾಲೇಜಿನಲ್ಲಿ ಆಂತರಿಕ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಡಾ.ಪಿ.ಎಚ್‌ ತೇಜಸ್ವಿನಿಯವರ ನೇತೃತ್ವದಲ್ಲಿ 28-10-2019ರಿಂದ ಹಲವು ಸುತ್ತಿನ ಸಭೆ ಸೇರಿ ವಿಚಾರಣೆ ನಡೆಸಿತ್ತು. ದ್ವೀತಿಯ ದರ್ಜೆ ಸಹಾಯಕ ಸಿಬ್ಬಂದಿ ಜಯರಾಮುರವರು ಆ ವಿದ್ಯಾರ್ಥಿನಿಯೊಂದಿಗೆ ನಡೆಸಿದ ಫೋನ್‌ ಸಂಭಾಷಣೆಗಳ ರೆಕಾರ್ಡ್ ಇದ್ದುದರಿಂದ ಮೇಲ್ನೋಟದಲ್ಲಿಯೇ ಆತನ ತಪ್ಪು ನಡವಳಿಕೆ ಸಾಬೀತಾಗಿತ್ತು.

ಆನಂತರ ಆ ವಿದ್ಯಾರ್ಥಿನಿಯ ನಡುವೆ ಸಮಿತಿಯು ಆಪ್ತಸಮಾಲೋಚನೆ ನಡೆಸಿದಾಗ ಆತ ಪದೇ ಪದೇ ಕರೆ ಮಾಡುತ್ತಿದ್ದುದು, ವಾಟ್ಸಾಪ್‌ ಸಂದೇಶಗಳನ್ನು ಕಳಿಸುತ್ತಿದ್ದುದು, ಪಾರ್ಟಿ ಕೊಡಿಸು, ಇಲ್ಲವಾದರೆ ನಿನಗೆ ಪರೀಕ್ಷೆ ಬರೆಯದಂತೆ ತಡೆಹಿಡಿಯುತ್ತೇನೆ, ನಿಮ್ಮ ತಂದೆಯವರಿಗೆ ಕಂಪ್ಲೈಟ್‌ ಮಾಡುತ್ತೇನೆ, ನಿಮ್ಮ ತಾಯಿಯೊಂದಿಗೆ ಮಾತಾಡುತ್ತೇನೆ ಎಂದೆಲ್ಲಾ ಅಶ್ಲೀಲವಾಗಿ ಮಾತನಾಡಿ ಆಕೆಗೆ ಮಾನಸಿಕ ಕಿರುಕುಳಕೊಟ್ಟಿರುವುದು ಕಂಡುಬಂದಿದೆ. ಇದೆಲ್ಲವರನ್ನು ಆಧರಿಸಿ ಅದು 25-11-2019ರಂದು ತನ್ನ ವರದಿಯನ್ನು ಪ್ರಾಂಶುಪಾಲರಿಗೆ ಸಲ್ಲಿಸಿತ್ತು.

ಜಯರಾಮು ಎಂಬುವವನ ಕೃತ್ಯಗಳಿಗೆ ಸೂಕ್ತ ಸಾಕ್ಷಿಗಳು ಸಹ ಲಭ್ಯವಿದ್ದುದರಿಂದ ಪ್ರಾಂಶುಪಾಲರು ಆಯುಕ್ತರ ಗಮನಕ್ಕೆ ತಂದಿದ್ದು, ಆಯುಕ್ತರು ದಿನಾಂಕ 12-12-2019ರಂದು ವಿಚಾರಣೆ ಕಾಯ್ದಿರಿಸಿ ಆತನನ್ನು ಸೇವೆಯಿಂದ ಅಮಾನತ್ತು ಮಾಡಿರುತ್ತಾರೆ.

ಶಾಸಕರ ಎಂಟ್ರಿ..

ಇದಾದ ನಾಲ್ಕೇ ದಿನದಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರರವರು ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳಾದ ಅಶ್ವಥನಾರಾಯಣರವರಿಗೆ ಪತ್ರ ಬರೆದಿದ್ದು ಅದರಲ್ಲಿ ಆರೋಪಿ ಜಯರಾಮುರವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ, ಕೆಲಸಕ್ಕೆ ನಿಯುಕ್ತಿ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

ದ್ವೀತಿಯ ದರ್ಜೆ ಸಹಾಯಕ ಜಯರಾಮು ಮಾಡಿರುವ ದೃಷ್ಕೃತ್ಯಗಳಿಗೆ ಎಲ್ಲಾ ರೀತಿಯ ಸಾಕ್ಷಿಗಳಿದ್ದು ಅವು ನಾನುಗೌರಿ.ಕಾಂಗೂ ಕೂಡ ಲಭ್ಯವಾಗಿವೆ. ವಿದ್ಯಾರ್ಥಿನಿಯ ದೂರು, ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಭೆಯ ನಿರ್ಣಯಗಳು, ಆತ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್‌ಗಳು ಸಿಕ್ಕಿದ್ದು ಅವುಗಳನ್ನು ನೋಡಿದರೆ ಆತನ ತಪ್ಪು ಎಂಥವರಿಗೂ ಅರಿವಾಗುತ್ತದೆ. ಅಂತದ್ದರಲ್ಲಿ ಈ ಬಿಜೆಪಿ ಶಾಸಕರು ಮಾತ್ರ ಏಕೆ ಆತನ ಪರ ನಿಂತಿದ್ದಾರೆ ಎಂಬುದು ಆಶ್ಚರ್‍ಯವಾಗಿದೆ.

ಶಾಸಕರು ಕ್ಷೇತ್ರದಲ್ಲಿ ಮಾಡಬೇಕಾದ್ದ ನೂರಾರು ಕೆಲಸಗಳಿದ್ದರೂ ಸಹ ವಿದ್ಯಾರ್ಥಿನಿಗೆ ಅನ್ಯಾಯವೆಸಗಿದ ಆರೋಪಿಯ ರಕ್ಷಣೆಗೆ ನಿಂತಿರುವುದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ಮತ್ತು ಆಕೆಯ ತಂದೆಗೆ ಒತ್ತಡ:

ದೂರು ನೀಡಿದ ಕೆಲವೇ ದಿನಗಳಲ್ಲಿ ವಿಷಯ ತಿಳಿದ ಕೂಡಲೇ ಆರೋಪಿ ಜಯರಾಮು ಹಲವು ಮೂಲಗಳಿಂದ ವಿದ್ಯಾರ್ಥಿನಿ ಮತ್ತು ಆಕೆಯ ತಂದೆಯೇ ಮೇಲೆ ದೂರು ವಾಪಸ್‌ ತೆಗೆದುಕೊಳ್ಳಲು ಒತ್ತಡ ತಂದಿದ್ದಾನೆ. ವಿದ್ಯಾರ್ಥಿನಿಯ ಬಳಿ ಬಂದು ಇನ್ನು ಎರಡು ವರ್ಷ ಮಾತ್ರ ನನ್ನ ಸರ್ವಿಸ್‌ ಇದೆ. ನೀವು ಕೇಳಿದ್ದು ಕೊಡುತ್ತೇನೆ, ನಿಮ್ಮ ಕಾಲಿಗೆ ಬೀಳುತ್ತೇನೆ ದಯವಿಟ್ಟು ದೂರು ವಾಪಸ್‌ ತಗೊಳ್ಳಿ ಎಂದು ಗೋಗೆರಿದ್ದಾನೆ.

ವಿದ್ಯಾರ್ಥಿನಿಯ ತಂದೆಯವರೊಡನೆಯು ಸಹ ಮಾತನಾಡಿ ದೂರನ್ನು ವಾಪಸ್‌ ಪಡೆಯುವಂತೆ ಒತ್ತಡ ತಂದಿದ್ದಾನೆ. ಹಾಗಾಗಿ ನವೆಂಬರ್‌ 07ರಂದು ವಿದ್ಯಾರ್ಥಿನಿಯ ತಂದೆಯು ದೂರನ್ನು ವಾಪಸ್‌ ಪಡೆಯುವ ಕುರಿತು ಪತ್ರವೊಂದನ್ನು ಬರೆದು ಅದಕ್ಕೆ ವಿದ್ಯಾರ್ಥಿನಿಯ ಸಹಿ ಹಾಕಿಸಿ ಪ್ರಾಂಶುಪಾಲರಿಗೆ ತಲುಪಿಸಿದ್ದಾರೆ. ಆದರೆ ಇದೆಲ್ಲವೂ ನಮ್ಮ ಮೇಲೆ ಒತ್ತಡ ತಂದು ಹೀಗೆ ಮಾಡಿಸಿದ್ದಾರೆ. ಆತನಿಗೆ ಶಿಕ್ಷೆಯಾಗಬೇಕೆಂದು ವಿದ್ಯಾರ್ಥಿನಿಯು ದೌರ್ಜನ್ಯ ತಡೆ ಸಮಿತಿಯ ಮುಂದೆ ಮಾತನ್ನಾಡಿರುವುದು ಆಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಅಂದರೆ ಜಯರಾಮು ತಪ್ಪು ಮಾಡಿದ್ದಲ್ಲದೇ ದೂರು ವಾಪಸ್‌ ಪಡೆಯುವಂತೆಯೂ ಸಹ ತನಗಿರುವ ಶಕ್ತಿ ಸಾಮರ್ಥ್ಯ ಬಳಿಸಿ ಒತ್ತಡ ತಂದಿರುವುದು ಸ್ಪಷ್ಟವಾಗಿದೆ. ಇನ್ನು ಮುಂದುವರೆದು ಅಮಾನತ್ತು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಿಂದ ಆಯಕ್ತರಿಗೆ ಪತ್ರ ಬರೆಸಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಆತನ ಅಮಾನತ್ತು ರದ್ದಗೊಂಡರೂ ಅಚ್ಚರಿಪಡಬೇಕಾಗಿಲ್ಲ..

ಹೀಗಾದರೆ ನ್ಯಾಯದ ಕಥೆಯೇನು?

ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಭೇಟಿ ಪಡಾವೋ, ಭೇಟಿ ಬಚಾಚೊ ಎಂದು ಘೋಷಣೆಯಲ್ಲಿ ಮಾತ್ರ ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಇದರಿಂದ ಅನ್ಯಾಯಕ್ಕೊಳಗಾದವರು ಸಹ ದೂರು ಕೊಡಲು ಹೆದರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೂರು ನೀಡಿದ ವಿದ್ಯಾರ್ಥಿನಿಯ ಬಾಯಿ ಮುಚ್ಚಿಸುವ ಹುನ್ನಾರ ಮೈಸೂರಿನಲ್ಲಿ ನಡೆಯುತ್ತಿದೆ. ತನ್ನನ್ನು ಆರಿಸಿದ ಜನರ ಹಿತಕಾಯಬೇಕಾದ ಶಾಸಕರೆ ಆರೋಪಿಗಳ ಪರ ನಿಂತಿರುವುದು ದುರದೃಷ್ಟಕರವಾಗಿದೆ.

ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಅಮಾನತ್ತು ರದ್ದುಗೊಳಸಬಾರದು. ಆದಷ್ಟು ಬೇಗ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದು ಉಳಿದವರಿಗೂ ಪಾಠವಾಗಬೇಕು. ಆಮೂಲಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...