Homeಕರ್ನಾಟಕಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

ಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

- Advertisement -
- Advertisement -

ಇದುವರೆಗೂ ಸಿದ್ದರಾಮಯ್ಯನವರು ಮತ್ತು ಮೈಸೂರಿನ ದಳಪತಿಗಳ ನಡುವೆ ದೋಸ್ತಿ ಕುದುರಿಲ್ಲ. ಸಮ್ಮಿಶ್ರ ಸರ್ಕಾರವೇ ಈ ಎರಡು ಪಕ್ಷಗಳ ಮೈತ್ರಿಯಿಂದ ರಚನೆಯಾದರೂ, ಮೈಸೂರಿನಲ್ಲಿ ಅಷ್ಟು ಸುಲಭವಿರಲಿಲ್ಲ. ಚಾಮುಂಡೇಶ್ವರಿಯ ಸೋಲು ಸಿದ್ದರಾಮಯ್ಯನವರಿಗೆ ಯಾವ ಮಟ್ಟಿಗಿನ ಬೇಸರ/ಅಸಮಾಧಾನ ಮೂಡಿಸಿದೆಯೆಂದರೆ, 2 ತಿಂಗಳ ಕೆಳಗೆ ಮೈಸೂರಿನಲ್ಲಿ ಮಾತನಾಡಿ ‘ಪ್ರತೀ ವರ್ಷ ಇಲ್ಲಿ ಸಾಮೂಹಿಕ ಮದುವೆ ಏರ್ಪಡಿಸುತ್ತಿದ್ದೆ. ನಾನು ಹೇಳಿದರೆ ಕೆಲವರು ದುಡ್ಡೂ ಕೊಡೋರು. ಈ ವರ್ಷದಿಂದ ಇಲ್ಲಿ ಮಾಡಿಸಲ್ಲ. ಮೈಸೂರಿನಿಂದ ನನ್ನನ್ನು ಓಡಿಸಿದ್ದೀರಿ. ಹಾಗಾಗಿ ಬಾದಾಮಿಯಲ್ಲೇ ಮಾಡಿಸುತ್ತೇನೆ’ ಎಂದಿದ್ದರು. ಒಕ್ಕಲಿಗ ಮತಗಳ ಧ್ರುವೀಕರಣದ ಜೊತೆಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದದ ಮೂಲಕ ಸಿದ್ದರಾಮಯ್ಯನವರಿಗೆ ತವರಿನಲ್ಲಿ ಕೊಟ್ಟ ಪೆಟ್ಟು ಆ ಪ್ರಮಾಣಕ್ಕೆ ಇತ್ತು.

ಆದರೂ ಮೈಸೂರು ಲೋಕಸಭಾ ಕ್ಷೇತ್ರ ಬೇಕೆ ಬೇಕೆಂದು ಪಟ್ಟು ಹಿಡಿದು, ಹಾಲಿ ಸಂಸದರಿದ್ದ ತುಮಕೂರನ್ನೂ ಬಿಟ್ಟುಕೊಟ್ಟು ಅದನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಮೈಸೂರಿನ ಮೇಲೆ ಏನೇ ಪಟ್ಟಿದ್ದರೂ, ಅವರು ದೇವೇಗೌಡರನ್ನು ಒಲಿಸಿಕೊಳ್ಳದೇ ಇಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಎರಡು ಚುನಾವಣೆಗಳ ಅಂಕಗಣಿತ ನೋಡಿದರೆ ಅದು ಸುಸ್ಪಷ್ಟ.

ಇದು ಚೆನ್ನಾಗಿ ಗೊತ್ತಿದ್ದ ಪ್ರತಾಪಸಿಂಹ ಕಳೆದ ಸಾರಿ ಆಡಿದ ಆಟವನ್ನೇ ಈ ಸಾರಿಯೂ ಆಡಲು ಶುರು ಮಾಡಿದ್ದಾರೆ. ಆಗ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಅವರು ಅಗತ್ಯವಿರಲಿ ಇಲ್ಲದಿರಲು ದೇವೇಗೌಡರನ್ನು ಟೀಕೆ ಮಾಡುವ ಕೆಲಸವನ್ನು ಮಾಡುತ್ತಲೇ ಇದ್ದು, ಒಂದು ನಕಾರಾತ್ಮಕ ಸಂದೇಶವನ್ನು ಕೊಟ್ಟಿದ್ದರು. ಹಾಗಾಗಿಯೇ ಚಿಕ್ಕಮಗಳೂರು ಮೂಲದ, ಬೆಂಗಳೂರಿನಲ್ಲಿ ಪತ್ರಕರ್ತನಾಗಿದ್ದ ಸಿಂಹ, ಪ್ರತಾಪ್ ಸಿಂಹ ಗೌಡನಾಗಿ ಮೈಸೂರಿಗೆ ಎಂಟ್ರಿ ಕೊಟ್ಟಿದ್ದು. ದೇವೇಗೌಡರ ಬಗ್ಗೆ ಹೊಗಳುತ್ತಾ, ಎಚ್.ವಿಶ್ವನಾಥ್ ಅವರು ಆ ರೀತಿ ಗೌಡರ ಬಗ್ಗೆ ಮಾತನಾಡುವುದನ್ನು ತಾನು ಒಪ್ಪುವುದಿಲ್ಲವೆಂದು ಹೇಳುತ್ತಾ ಪ್ರಚಾರ ಮಾಡಿದ್ದರು.

ಸ್ಪಷ್ಟವಾಗಿರುವ ಅಂಕಗಣಿತ
ಅದಕ್ಕೆ ಸರಿಯಾಗಿ ಜೆಡಿಎಸ್ ಅಂತಹ ದೊಡ್ಡ ಹೆಸರಲ್ಲದ ಚಂದ್ರಶೇಖರಯ್ಯನವರನ್ನು ಕಣಕ್ಕಿಳಿಸಿ ಪ್ರತಾಪ್ ಸಿಂಹರ ಪರವಾಗಿ ಒಳ ಸಂದೇಶ ಕೊಟ್ಟಿದ್ದರು. ಇವೆಲ್ಲದರ ಜೊತೆಗೆ ಇಡೀ ದೇಶದಲ್ಲಿ ಆಗ ಇದ್ದ ಮೋದಿ ಅಲೆಯ ಲಾಭವನ್ನು ಪಡೆದುಕೊಂಡರೂ ಪ್ರತಾಪ್ ಸಿಂಹ ಗೆದ್ದಿದ್ದು 31 ಸಾವಿರ ಮತಗಳಲ್ಲಿ. 2009ರಲ್ಲಿ ಎಚ್.ವಿಶ್ವನಾಥ್ 3.54 ಲಕ್ಷ ಮತ ಪಡೆದುಕೊಂಡಿದ್ದರೆ, ಬಿಜೆಪಿಯ ವಿಜಯಶಂಕರ್ 3.47 ಲಕ್ಷ ಪಡೆದುಕೊಂಡಿದ್ದರು. ಕೊಡಗಿನ ಜೀವಿಜಯ ಜನತಾದಳದಿಂದ ಸ್ಪರ್ಧಿಸಿ 2.16 ಲಕ್ಷ ಪಡೆದುಕೊಂಡಿದ್ದರು. ಅದಕ್ಕೆ ಹಿಂದಿನ ಸಾಲಿನಲ್ಲಿ ಜೆಡಿಎಸ್‍ನ ಮತಪ್ರಮಾಣದಲ್ಲಿ ಶೇ.9.8ರಷ್ಟು ನಷ್ಟವಾಗಿ ಮಿಕ್ಕೆರಡೂ ಪಕ್ಷಗಳು ಅದರ ಲಾಭ ಪಡೆದುಕೊಂಡಿದ್ದರೂ, ಜೆಡಿಎಸ್‍ಗೆ 2.16 ಲಕ್ಷ ಮತ ಇದ್ದೇ ಇತ್ತು.

2014ರಲ್ಲಿ ಒಂದೂ ಮುಕ್ಕಾಲು ಲಕ್ಷ ಹೆಚ್ಚು ಮತಗಳು ಚಲಾವಣೆಯಾದವು. ದೇವೇಗೌಡರು ಪ್ರತಾಪಸಿಂಹರಿಗೆ ಬೆಂಬಲಿಸಿದದರೂ, ಜೆಡಿಎಸ್‍ನ ಡಮ್ಮಿ ಕ್ಯಾಂಡಿಡೇಟ್‍ಗೆ 1.38 ಲಕ್ಷ ಮತಗಳು ಬಂದವು. ಕಾಂಗ್ರೆಸ್‍ನ ಎಚ್.ವಿಶ್ವನಾಥ್ ಹಿಂದಿಗಿಂತ 1 ಲಕ್ಷ 20 ಸಾವಿರ ಹೆಚ್ಚು ಮತ ಪಡೆದುಕೊಂಡರೂ ಸೋತರು. ಇವೆಲ್ಲವೂ ದೇವೇಗೌಡರ ಕಾರಣಕ್ಕೆ ಎಂಬುದರಲ್ಲಿ ಯಾರಿಗೂ ಸಂಶಯವಿಲ್ಲ. ಆದರೂ ಸಂದರ್ಭದ ಅನಿವಾರ್ಯತೆಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ‘ಗೌಡರ ವಿರೋಧಿ’ ವಿಶ್ವನಾಥ್ ಜೆಡಿಎಸ್ ಸೇರಿ ಅದರ ರಾಜ್ಯಾಧ್ಯಕ್ಷರಾಗಿದ್ದಾರೆ.
ಈ ಚುನಾವಣೆಯ ಹೊತ್ತಿಗೆ ಒಕ್ಕಲಿಗರ ಮತ ಧ್ರುವೀಕರಣದಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತಷ್ಟು ಪ್ರಬಲವಾಗಿದೆ. ಕಾಂಗ್ರೆಸ್‍ಗೆ ಒಬ್ಬ ಎಂಎಲ್‍ಎ ಇದ್ದರೆ, ಜೆಡಿಎಸ್‍ಗೆ ಮೂವರು ಎಂಎಲ್‍ಎಗಳಿದ್ದಾರೆ. ಅಂದರೆ, ಇಂದಿನ ಮತದಾರರ ಸಂಖ್ಯೆಗೆ ತಾಳೆ ಹಾಕುವುದಾದರೆ ಜೆಡಿಎಸ್ ಕನಿಷ್ಠ 3 ಲಕ್ಷ ಓಟುಗಳನ್ನು ಹೊಂದಿದೆ. ಜೊತೆಗೆ ಇದೊಂಥರಾ ಟ್ರಾನ್ಸಫರಬಲ್ ಮತಗಳು. ಹೀಗಾಗಿ ಇಲ್ಲಿ ದೇವೇಗೌಡರೇ ನಿರ್ಣಾಯಕ. ಅವರ ನೆರವಿಲ್ಲದೇ ಸಿದ್ದರಾಮಯ್ಯನವರು ವಿಜಯಶಂಕರ್‍ರನ್ನು ಗೆಲ್ಲಿಸಿಕೊಳ್ಳುವುದು ಸುಲಭವಿಲ್ಲ.

ಮೈತ್ರಿ ಧರ್ಮ ಪಾಲನೆಯಾದರೆ, ಪ್ರತಾಪ್‍ಸಿಂಹ 2 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ. ಮುಂದಿನ ಒಂದು ವಾರದಲ್ಲೇ ದೋಸ್ತಿಗಳ ನಡುವಿನ ಬಂಧ ಎಷ್ಟು ಗಟ್ಟಿಯಿದೆ ಎಂಬುದು ತೀರ್ಮಾನವಾಗಿಬಿಡುವುದರಿಂದ, ಮೈಸೂರು ಕ್ಷೇತ್ರದ ಫಲಿತಾಂಶವೂ ಈ ವಾರದಲ್ಲೇ ಅಂತಿಮಗೊಂಡುಬಿಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...