Homeಕರ್ನಾಟಕಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

ಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

- Advertisement -
- Advertisement -

ಇದುವರೆಗೂ ಸಿದ್ದರಾಮಯ್ಯನವರು ಮತ್ತು ಮೈಸೂರಿನ ದಳಪತಿಗಳ ನಡುವೆ ದೋಸ್ತಿ ಕುದುರಿಲ್ಲ. ಸಮ್ಮಿಶ್ರ ಸರ್ಕಾರವೇ ಈ ಎರಡು ಪಕ್ಷಗಳ ಮೈತ್ರಿಯಿಂದ ರಚನೆಯಾದರೂ, ಮೈಸೂರಿನಲ್ಲಿ ಅಷ್ಟು ಸುಲಭವಿರಲಿಲ್ಲ. ಚಾಮುಂಡೇಶ್ವರಿಯ ಸೋಲು ಸಿದ್ದರಾಮಯ್ಯನವರಿಗೆ ಯಾವ ಮಟ್ಟಿಗಿನ ಬೇಸರ/ಅಸಮಾಧಾನ ಮೂಡಿಸಿದೆಯೆಂದರೆ, 2 ತಿಂಗಳ ಕೆಳಗೆ ಮೈಸೂರಿನಲ್ಲಿ ಮಾತನಾಡಿ ‘ಪ್ರತೀ ವರ್ಷ ಇಲ್ಲಿ ಸಾಮೂಹಿಕ ಮದುವೆ ಏರ್ಪಡಿಸುತ್ತಿದ್ದೆ. ನಾನು ಹೇಳಿದರೆ ಕೆಲವರು ದುಡ್ಡೂ ಕೊಡೋರು. ಈ ವರ್ಷದಿಂದ ಇಲ್ಲಿ ಮಾಡಿಸಲ್ಲ. ಮೈಸೂರಿನಿಂದ ನನ್ನನ್ನು ಓಡಿಸಿದ್ದೀರಿ. ಹಾಗಾಗಿ ಬಾದಾಮಿಯಲ್ಲೇ ಮಾಡಿಸುತ್ತೇನೆ’ ಎಂದಿದ್ದರು. ಒಕ್ಕಲಿಗ ಮತಗಳ ಧ್ರುವೀಕರಣದ ಜೊತೆಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದದ ಮೂಲಕ ಸಿದ್ದರಾಮಯ್ಯನವರಿಗೆ ತವರಿನಲ್ಲಿ ಕೊಟ್ಟ ಪೆಟ್ಟು ಆ ಪ್ರಮಾಣಕ್ಕೆ ಇತ್ತು.

ಆದರೂ ಮೈಸೂರು ಲೋಕಸಭಾ ಕ್ಷೇತ್ರ ಬೇಕೆ ಬೇಕೆಂದು ಪಟ್ಟು ಹಿಡಿದು, ಹಾಲಿ ಸಂಸದರಿದ್ದ ತುಮಕೂರನ್ನೂ ಬಿಟ್ಟುಕೊಟ್ಟು ಅದನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಮೈಸೂರಿನ ಮೇಲೆ ಏನೇ ಪಟ್ಟಿದ್ದರೂ, ಅವರು ದೇವೇಗೌಡರನ್ನು ಒಲಿಸಿಕೊಳ್ಳದೇ ಇಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಎರಡು ಚುನಾವಣೆಗಳ ಅಂಕಗಣಿತ ನೋಡಿದರೆ ಅದು ಸುಸ್ಪಷ್ಟ.

ಇದು ಚೆನ್ನಾಗಿ ಗೊತ್ತಿದ್ದ ಪ್ರತಾಪಸಿಂಹ ಕಳೆದ ಸಾರಿ ಆಡಿದ ಆಟವನ್ನೇ ಈ ಸಾರಿಯೂ ಆಡಲು ಶುರು ಮಾಡಿದ್ದಾರೆ. ಆಗ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಅವರು ಅಗತ್ಯವಿರಲಿ ಇಲ್ಲದಿರಲು ದೇವೇಗೌಡರನ್ನು ಟೀಕೆ ಮಾಡುವ ಕೆಲಸವನ್ನು ಮಾಡುತ್ತಲೇ ಇದ್ದು, ಒಂದು ನಕಾರಾತ್ಮಕ ಸಂದೇಶವನ್ನು ಕೊಟ್ಟಿದ್ದರು. ಹಾಗಾಗಿಯೇ ಚಿಕ್ಕಮಗಳೂರು ಮೂಲದ, ಬೆಂಗಳೂರಿನಲ್ಲಿ ಪತ್ರಕರ್ತನಾಗಿದ್ದ ಸಿಂಹ, ಪ್ರತಾಪ್ ಸಿಂಹ ಗೌಡನಾಗಿ ಮೈಸೂರಿಗೆ ಎಂಟ್ರಿ ಕೊಟ್ಟಿದ್ದು. ದೇವೇಗೌಡರ ಬಗ್ಗೆ ಹೊಗಳುತ್ತಾ, ಎಚ್.ವಿಶ್ವನಾಥ್ ಅವರು ಆ ರೀತಿ ಗೌಡರ ಬಗ್ಗೆ ಮಾತನಾಡುವುದನ್ನು ತಾನು ಒಪ್ಪುವುದಿಲ್ಲವೆಂದು ಹೇಳುತ್ತಾ ಪ್ರಚಾರ ಮಾಡಿದ್ದರು.

ಸ್ಪಷ್ಟವಾಗಿರುವ ಅಂಕಗಣಿತ
ಅದಕ್ಕೆ ಸರಿಯಾಗಿ ಜೆಡಿಎಸ್ ಅಂತಹ ದೊಡ್ಡ ಹೆಸರಲ್ಲದ ಚಂದ್ರಶೇಖರಯ್ಯನವರನ್ನು ಕಣಕ್ಕಿಳಿಸಿ ಪ್ರತಾಪ್ ಸಿಂಹರ ಪರವಾಗಿ ಒಳ ಸಂದೇಶ ಕೊಟ್ಟಿದ್ದರು. ಇವೆಲ್ಲದರ ಜೊತೆಗೆ ಇಡೀ ದೇಶದಲ್ಲಿ ಆಗ ಇದ್ದ ಮೋದಿ ಅಲೆಯ ಲಾಭವನ್ನು ಪಡೆದುಕೊಂಡರೂ ಪ್ರತಾಪ್ ಸಿಂಹ ಗೆದ್ದಿದ್ದು 31 ಸಾವಿರ ಮತಗಳಲ್ಲಿ. 2009ರಲ್ಲಿ ಎಚ್.ವಿಶ್ವನಾಥ್ 3.54 ಲಕ್ಷ ಮತ ಪಡೆದುಕೊಂಡಿದ್ದರೆ, ಬಿಜೆಪಿಯ ವಿಜಯಶಂಕರ್ 3.47 ಲಕ್ಷ ಪಡೆದುಕೊಂಡಿದ್ದರು. ಕೊಡಗಿನ ಜೀವಿಜಯ ಜನತಾದಳದಿಂದ ಸ್ಪರ್ಧಿಸಿ 2.16 ಲಕ್ಷ ಪಡೆದುಕೊಂಡಿದ್ದರು. ಅದಕ್ಕೆ ಹಿಂದಿನ ಸಾಲಿನಲ್ಲಿ ಜೆಡಿಎಸ್‍ನ ಮತಪ್ರಮಾಣದಲ್ಲಿ ಶೇ.9.8ರಷ್ಟು ನಷ್ಟವಾಗಿ ಮಿಕ್ಕೆರಡೂ ಪಕ್ಷಗಳು ಅದರ ಲಾಭ ಪಡೆದುಕೊಂಡಿದ್ದರೂ, ಜೆಡಿಎಸ್‍ಗೆ 2.16 ಲಕ್ಷ ಮತ ಇದ್ದೇ ಇತ್ತು.

2014ರಲ್ಲಿ ಒಂದೂ ಮುಕ್ಕಾಲು ಲಕ್ಷ ಹೆಚ್ಚು ಮತಗಳು ಚಲಾವಣೆಯಾದವು. ದೇವೇಗೌಡರು ಪ್ರತಾಪಸಿಂಹರಿಗೆ ಬೆಂಬಲಿಸಿದದರೂ, ಜೆಡಿಎಸ್‍ನ ಡಮ್ಮಿ ಕ್ಯಾಂಡಿಡೇಟ್‍ಗೆ 1.38 ಲಕ್ಷ ಮತಗಳು ಬಂದವು. ಕಾಂಗ್ರೆಸ್‍ನ ಎಚ್.ವಿಶ್ವನಾಥ್ ಹಿಂದಿಗಿಂತ 1 ಲಕ್ಷ 20 ಸಾವಿರ ಹೆಚ್ಚು ಮತ ಪಡೆದುಕೊಂಡರೂ ಸೋತರು. ಇವೆಲ್ಲವೂ ದೇವೇಗೌಡರ ಕಾರಣಕ್ಕೆ ಎಂಬುದರಲ್ಲಿ ಯಾರಿಗೂ ಸಂಶಯವಿಲ್ಲ. ಆದರೂ ಸಂದರ್ಭದ ಅನಿವಾರ್ಯತೆಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ‘ಗೌಡರ ವಿರೋಧಿ’ ವಿಶ್ವನಾಥ್ ಜೆಡಿಎಸ್ ಸೇರಿ ಅದರ ರಾಜ್ಯಾಧ್ಯಕ್ಷರಾಗಿದ್ದಾರೆ.
ಈ ಚುನಾವಣೆಯ ಹೊತ್ತಿಗೆ ಒಕ್ಕಲಿಗರ ಮತ ಧ್ರುವೀಕರಣದಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತಷ್ಟು ಪ್ರಬಲವಾಗಿದೆ. ಕಾಂಗ್ರೆಸ್‍ಗೆ ಒಬ್ಬ ಎಂಎಲ್‍ಎ ಇದ್ದರೆ, ಜೆಡಿಎಸ್‍ಗೆ ಮೂವರು ಎಂಎಲ್‍ಎಗಳಿದ್ದಾರೆ. ಅಂದರೆ, ಇಂದಿನ ಮತದಾರರ ಸಂಖ್ಯೆಗೆ ತಾಳೆ ಹಾಕುವುದಾದರೆ ಜೆಡಿಎಸ್ ಕನಿಷ್ಠ 3 ಲಕ್ಷ ಓಟುಗಳನ್ನು ಹೊಂದಿದೆ. ಜೊತೆಗೆ ಇದೊಂಥರಾ ಟ್ರಾನ್ಸಫರಬಲ್ ಮತಗಳು. ಹೀಗಾಗಿ ಇಲ್ಲಿ ದೇವೇಗೌಡರೇ ನಿರ್ಣಾಯಕ. ಅವರ ನೆರವಿಲ್ಲದೇ ಸಿದ್ದರಾಮಯ್ಯನವರು ವಿಜಯಶಂಕರ್‍ರನ್ನು ಗೆಲ್ಲಿಸಿಕೊಳ್ಳುವುದು ಸುಲಭವಿಲ್ಲ.

ಮೈತ್ರಿ ಧರ್ಮ ಪಾಲನೆಯಾದರೆ, ಪ್ರತಾಪ್‍ಸಿಂಹ 2 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ. ಮುಂದಿನ ಒಂದು ವಾರದಲ್ಲೇ ದೋಸ್ತಿಗಳ ನಡುವಿನ ಬಂಧ ಎಷ್ಟು ಗಟ್ಟಿಯಿದೆ ಎಂಬುದು ತೀರ್ಮಾನವಾಗಿಬಿಡುವುದರಿಂದ, ಮೈಸೂರು ಕ್ಷೇತ್ರದ ಫಲಿತಾಂಶವೂ ಈ ವಾರದಲ್ಲೇ ಅಂತಿಮಗೊಂಡುಬಿಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...