Homeಕರ್ನಾಟಕಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

ಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

- Advertisement -
- Advertisement -

ಇದುವರೆಗೂ ಸಿದ್ದರಾಮಯ್ಯನವರು ಮತ್ತು ಮೈಸೂರಿನ ದಳಪತಿಗಳ ನಡುವೆ ದೋಸ್ತಿ ಕುದುರಿಲ್ಲ. ಸಮ್ಮಿಶ್ರ ಸರ್ಕಾರವೇ ಈ ಎರಡು ಪಕ್ಷಗಳ ಮೈತ್ರಿಯಿಂದ ರಚನೆಯಾದರೂ, ಮೈಸೂರಿನಲ್ಲಿ ಅಷ್ಟು ಸುಲಭವಿರಲಿಲ್ಲ. ಚಾಮುಂಡೇಶ್ವರಿಯ ಸೋಲು ಸಿದ್ದರಾಮಯ್ಯನವರಿಗೆ ಯಾವ ಮಟ್ಟಿಗಿನ ಬೇಸರ/ಅಸಮಾಧಾನ ಮೂಡಿಸಿದೆಯೆಂದರೆ, 2 ತಿಂಗಳ ಕೆಳಗೆ ಮೈಸೂರಿನಲ್ಲಿ ಮಾತನಾಡಿ ‘ಪ್ರತೀ ವರ್ಷ ಇಲ್ಲಿ ಸಾಮೂಹಿಕ ಮದುವೆ ಏರ್ಪಡಿಸುತ್ತಿದ್ದೆ. ನಾನು ಹೇಳಿದರೆ ಕೆಲವರು ದುಡ್ಡೂ ಕೊಡೋರು. ಈ ವರ್ಷದಿಂದ ಇಲ್ಲಿ ಮಾಡಿಸಲ್ಲ. ಮೈಸೂರಿನಿಂದ ನನ್ನನ್ನು ಓಡಿಸಿದ್ದೀರಿ. ಹಾಗಾಗಿ ಬಾದಾಮಿಯಲ್ಲೇ ಮಾಡಿಸುತ್ತೇನೆ’ ಎಂದಿದ್ದರು. ಒಕ್ಕಲಿಗ ಮತಗಳ ಧ್ರುವೀಕರಣದ ಜೊತೆಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದದ ಮೂಲಕ ಸಿದ್ದರಾಮಯ್ಯನವರಿಗೆ ತವರಿನಲ್ಲಿ ಕೊಟ್ಟ ಪೆಟ್ಟು ಆ ಪ್ರಮಾಣಕ್ಕೆ ಇತ್ತು.

ಆದರೂ ಮೈಸೂರು ಲೋಕಸಭಾ ಕ್ಷೇತ್ರ ಬೇಕೆ ಬೇಕೆಂದು ಪಟ್ಟು ಹಿಡಿದು, ಹಾಲಿ ಸಂಸದರಿದ್ದ ತುಮಕೂರನ್ನೂ ಬಿಟ್ಟುಕೊಟ್ಟು ಅದನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಮೈಸೂರಿನ ಮೇಲೆ ಏನೇ ಪಟ್ಟಿದ್ದರೂ, ಅವರು ದೇವೇಗೌಡರನ್ನು ಒಲಿಸಿಕೊಳ್ಳದೇ ಇಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಎರಡು ಚುನಾವಣೆಗಳ ಅಂಕಗಣಿತ ನೋಡಿದರೆ ಅದು ಸುಸ್ಪಷ್ಟ.

ಇದು ಚೆನ್ನಾಗಿ ಗೊತ್ತಿದ್ದ ಪ್ರತಾಪಸಿಂಹ ಕಳೆದ ಸಾರಿ ಆಡಿದ ಆಟವನ್ನೇ ಈ ಸಾರಿಯೂ ಆಡಲು ಶುರು ಮಾಡಿದ್ದಾರೆ. ಆಗ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಅವರು ಅಗತ್ಯವಿರಲಿ ಇಲ್ಲದಿರಲು ದೇವೇಗೌಡರನ್ನು ಟೀಕೆ ಮಾಡುವ ಕೆಲಸವನ್ನು ಮಾಡುತ್ತಲೇ ಇದ್ದು, ಒಂದು ನಕಾರಾತ್ಮಕ ಸಂದೇಶವನ್ನು ಕೊಟ್ಟಿದ್ದರು. ಹಾಗಾಗಿಯೇ ಚಿಕ್ಕಮಗಳೂರು ಮೂಲದ, ಬೆಂಗಳೂರಿನಲ್ಲಿ ಪತ್ರಕರ್ತನಾಗಿದ್ದ ಸಿಂಹ, ಪ್ರತಾಪ್ ಸಿಂಹ ಗೌಡನಾಗಿ ಮೈಸೂರಿಗೆ ಎಂಟ್ರಿ ಕೊಟ್ಟಿದ್ದು. ದೇವೇಗೌಡರ ಬಗ್ಗೆ ಹೊಗಳುತ್ತಾ, ಎಚ್.ವಿಶ್ವನಾಥ್ ಅವರು ಆ ರೀತಿ ಗೌಡರ ಬಗ್ಗೆ ಮಾತನಾಡುವುದನ್ನು ತಾನು ಒಪ್ಪುವುದಿಲ್ಲವೆಂದು ಹೇಳುತ್ತಾ ಪ್ರಚಾರ ಮಾಡಿದ್ದರು.

ಸ್ಪಷ್ಟವಾಗಿರುವ ಅಂಕಗಣಿತ
ಅದಕ್ಕೆ ಸರಿಯಾಗಿ ಜೆಡಿಎಸ್ ಅಂತಹ ದೊಡ್ಡ ಹೆಸರಲ್ಲದ ಚಂದ್ರಶೇಖರಯ್ಯನವರನ್ನು ಕಣಕ್ಕಿಳಿಸಿ ಪ್ರತಾಪ್ ಸಿಂಹರ ಪರವಾಗಿ ಒಳ ಸಂದೇಶ ಕೊಟ್ಟಿದ್ದರು. ಇವೆಲ್ಲದರ ಜೊತೆಗೆ ಇಡೀ ದೇಶದಲ್ಲಿ ಆಗ ಇದ್ದ ಮೋದಿ ಅಲೆಯ ಲಾಭವನ್ನು ಪಡೆದುಕೊಂಡರೂ ಪ್ರತಾಪ್ ಸಿಂಹ ಗೆದ್ದಿದ್ದು 31 ಸಾವಿರ ಮತಗಳಲ್ಲಿ. 2009ರಲ್ಲಿ ಎಚ್.ವಿಶ್ವನಾಥ್ 3.54 ಲಕ್ಷ ಮತ ಪಡೆದುಕೊಂಡಿದ್ದರೆ, ಬಿಜೆಪಿಯ ವಿಜಯಶಂಕರ್ 3.47 ಲಕ್ಷ ಪಡೆದುಕೊಂಡಿದ್ದರು. ಕೊಡಗಿನ ಜೀವಿಜಯ ಜನತಾದಳದಿಂದ ಸ್ಪರ್ಧಿಸಿ 2.16 ಲಕ್ಷ ಪಡೆದುಕೊಂಡಿದ್ದರು. ಅದಕ್ಕೆ ಹಿಂದಿನ ಸಾಲಿನಲ್ಲಿ ಜೆಡಿಎಸ್‍ನ ಮತಪ್ರಮಾಣದಲ್ಲಿ ಶೇ.9.8ರಷ್ಟು ನಷ್ಟವಾಗಿ ಮಿಕ್ಕೆರಡೂ ಪಕ್ಷಗಳು ಅದರ ಲಾಭ ಪಡೆದುಕೊಂಡಿದ್ದರೂ, ಜೆಡಿಎಸ್‍ಗೆ 2.16 ಲಕ್ಷ ಮತ ಇದ್ದೇ ಇತ್ತು.

2014ರಲ್ಲಿ ಒಂದೂ ಮುಕ್ಕಾಲು ಲಕ್ಷ ಹೆಚ್ಚು ಮತಗಳು ಚಲಾವಣೆಯಾದವು. ದೇವೇಗೌಡರು ಪ್ರತಾಪಸಿಂಹರಿಗೆ ಬೆಂಬಲಿಸಿದದರೂ, ಜೆಡಿಎಸ್‍ನ ಡಮ್ಮಿ ಕ್ಯಾಂಡಿಡೇಟ್‍ಗೆ 1.38 ಲಕ್ಷ ಮತಗಳು ಬಂದವು. ಕಾಂಗ್ರೆಸ್‍ನ ಎಚ್.ವಿಶ್ವನಾಥ್ ಹಿಂದಿಗಿಂತ 1 ಲಕ್ಷ 20 ಸಾವಿರ ಹೆಚ್ಚು ಮತ ಪಡೆದುಕೊಂಡರೂ ಸೋತರು. ಇವೆಲ್ಲವೂ ದೇವೇಗೌಡರ ಕಾರಣಕ್ಕೆ ಎಂಬುದರಲ್ಲಿ ಯಾರಿಗೂ ಸಂಶಯವಿಲ್ಲ. ಆದರೂ ಸಂದರ್ಭದ ಅನಿವಾರ್ಯತೆಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ‘ಗೌಡರ ವಿರೋಧಿ’ ವಿಶ್ವನಾಥ್ ಜೆಡಿಎಸ್ ಸೇರಿ ಅದರ ರಾಜ್ಯಾಧ್ಯಕ್ಷರಾಗಿದ್ದಾರೆ.
ಈ ಚುನಾವಣೆಯ ಹೊತ್ತಿಗೆ ಒಕ್ಕಲಿಗರ ಮತ ಧ್ರುವೀಕರಣದಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತಷ್ಟು ಪ್ರಬಲವಾಗಿದೆ. ಕಾಂಗ್ರೆಸ್‍ಗೆ ಒಬ್ಬ ಎಂಎಲ್‍ಎ ಇದ್ದರೆ, ಜೆಡಿಎಸ್‍ಗೆ ಮೂವರು ಎಂಎಲ್‍ಎಗಳಿದ್ದಾರೆ. ಅಂದರೆ, ಇಂದಿನ ಮತದಾರರ ಸಂಖ್ಯೆಗೆ ತಾಳೆ ಹಾಕುವುದಾದರೆ ಜೆಡಿಎಸ್ ಕನಿಷ್ಠ 3 ಲಕ್ಷ ಓಟುಗಳನ್ನು ಹೊಂದಿದೆ. ಜೊತೆಗೆ ಇದೊಂಥರಾ ಟ್ರಾನ್ಸಫರಬಲ್ ಮತಗಳು. ಹೀಗಾಗಿ ಇಲ್ಲಿ ದೇವೇಗೌಡರೇ ನಿರ್ಣಾಯಕ. ಅವರ ನೆರವಿಲ್ಲದೇ ಸಿದ್ದರಾಮಯ್ಯನವರು ವಿಜಯಶಂಕರ್‍ರನ್ನು ಗೆಲ್ಲಿಸಿಕೊಳ್ಳುವುದು ಸುಲಭವಿಲ್ಲ.

ಮೈತ್ರಿ ಧರ್ಮ ಪಾಲನೆಯಾದರೆ, ಪ್ರತಾಪ್‍ಸಿಂಹ 2 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ. ಮುಂದಿನ ಒಂದು ವಾರದಲ್ಲೇ ದೋಸ್ತಿಗಳ ನಡುವಿನ ಬಂಧ ಎಷ್ಟು ಗಟ್ಟಿಯಿದೆ ಎಂಬುದು ತೀರ್ಮಾನವಾಗಿಬಿಡುವುದರಿಂದ, ಮೈಸೂರು ಕ್ಷೇತ್ರದ ಫಲಿತಾಂಶವೂ ಈ ವಾರದಲ್ಲೇ ಅಂತಿಮಗೊಂಡುಬಿಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...