Homeಕರ್ನಾಟಕಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

ಪ್ರತಾಪ ಸಿಂಹರ ಸೋಲು ಗೆಲುವು- ಈ ಸಾರಿಯೂ ದೇವೇಗೌಡರ ಕೈಯ್ಯಲ್ಲಿ

- Advertisement -
- Advertisement -

ಇದುವರೆಗೂ ಸಿದ್ದರಾಮಯ್ಯನವರು ಮತ್ತು ಮೈಸೂರಿನ ದಳಪತಿಗಳ ನಡುವೆ ದೋಸ್ತಿ ಕುದುರಿಲ್ಲ. ಸಮ್ಮಿಶ್ರ ಸರ್ಕಾರವೇ ಈ ಎರಡು ಪಕ್ಷಗಳ ಮೈತ್ರಿಯಿಂದ ರಚನೆಯಾದರೂ, ಮೈಸೂರಿನಲ್ಲಿ ಅಷ್ಟು ಸುಲಭವಿರಲಿಲ್ಲ. ಚಾಮುಂಡೇಶ್ವರಿಯ ಸೋಲು ಸಿದ್ದರಾಮಯ್ಯನವರಿಗೆ ಯಾವ ಮಟ್ಟಿಗಿನ ಬೇಸರ/ಅಸಮಾಧಾನ ಮೂಡಿಸಿದೆಯೆಂದರೆ, 2 ತಿಂಗಳ ಕೆಳಗೆ ಮೈಸೂರಿನಲ್ಲಿ ಮಾತನಾಡಿ ‘ಪ್ರತೀ ವರ್ಷ ಇಲ್ಲಿ ಸಾಮೂಹಿಕ ಮದುವೆ ಏರ್ಪಡಿಸುತ್ತಿದ್ದೆ. ನಾನು ಹೇಳಿದರೆ ಕೆಲವರು ದುಡ್ಡೂ ಕೊಡೋರು. ಈ ವರ್ಷದಿಂದ ಇಲ್ಲಿ ಮಾಡಿಸಲ್ಲ. ಮೈಸೂರಿನಿಂದ ನನ್ನನ್ನು ಓಡಿಸಿದ್ದೀರಿ. ಹಾಗಾಗಿ ಬಾದಾಮಿಯಲ್ಲೇ ಮಾಡಿಸುತ್ತೇನೆ’ ಎಂದಿದ್ದರು. ಒಕ್ಕಲಿಗ ಮತಗಳ ಧ್ರುವೀಕರಣದ ಜೊತೆಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದದ ಮೂಲಕ ಸಿದ್ದರಾಮಯ್ಯನವರಿಗೆ ತವರಿನಲ್ಲಿ ಕೊಟ್ಟ ಪೆಟ್ಟು ಆ ಪ್ರಮಾಣಕ್ಕೆ ಇತ್ತು.

ಆದರೂ ಮೈಸೂರು ಲೋಕಸಭಾ ಕ್ಷೇತ್ರ ಬೇಕೆ ಬೇಕೆಂದು ಪಟ್ಟು ಹಿಡಿದು, ಹಾಲಿ ಸಂಸದರಿದ್ದ ತುಮಕೂರನ್ನೂ ಬಿಟ್ಟುಕೊಟ್ಟು ಅದನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಮೈಸೂರಿನ ಮೇಲೆ ಏನೇ ಪಟ್ಟಿದ್ದರೂ, ಅವರು ದೇವೇಗೌಡರನ್ನು ಒಲಿಸಿಕೊಳ್ಳದೇ ಇಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಎರಡು ಚುನಾವಣೆಗಳ ಅಂಕಗಣಿತ ನೋಡಿದರೆ ಅದು ಸುಸ್ಪಷ್ಟ.

ಇದು ಚೆನ್ನಾಗಿ ಗೊತ್ತಿದ್ದ ಪ್ರತಾಪಸಿಂಹ ಕಳೆದ ಸಾರಿ ಆಡಿದ ಆಟವನ್ನೇ ಈ ಸಾರಿಯೂ ಆಡಲು ಶುರು ಮಾಡಿದ್ದಾರೆ. ಆಗ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಅವರು ಅಗತ್ಯವಿರಲಿ ಇಲ್ಲದಿರಲು ದೇವೇಗೌಡರನ್ನು ಟೀಕೆ ಮಾಡುವ ಕೆಲಸವನ್ನು ಮಾಡುತ್ತಲೇ ಇದ್ದು, ಒಂದು ನಕಾರಾತ್ಮಕ ಸಂದೇಶವನ್ನು ಕೊಟ್ಟಿದ್ದರು. ಹಾಗಾಗಿಯೇ ಚಿಕ್ಕಮಗಳೂರು ಮೂಲದ, ಬೆಂಗಳೂರಿನಲ್ಲಿ ಪತ್ರಕರ್ತನಾಗಿದ್ದ ಸಿಂಹ, ಪ್ರತಾಪ್ ಸಿಂಹ ಗೌಡನಾಗಿ ಮೈಸೂರಿಗೆ ಎಂಟ್ರಿ ಕೊಟ್ಟಿದ್ದು. ದೇವೇಗೌಡರ ಬಗ್ಗೆ ಹೊಗಳುತ್ತಾ, ಎಚ್.ವಿಶ್ವನಾಥ್ ಅವರು ಆ ರೀತಿ ಗೌಡರ ಬಗ್ಗೆ ಮಾತನಾಡುವುದನ್ನು ತಾನು ಒಪ್ಪುವುದಿಲ್ಲವೆಂದು ಹೇಳುತ್ತಾ ಪ್ರಚಾರ ಮಾಡಿದ್ದರು.

ಸ್ಪಷ್ಟವಾಗಿರುವ ಅಂಕಗಣಿತ
ಅದಕ್ಕೆ ಸರಿಯಾಗಿ ಜೆಡಿಎಸ್ ಅಂತಹ ದೊಡ್ಡ ಹೆಸರಲ್ಲದ ಚಂದ್ರಶೇಖರಯ್ಯನವರನ್ನು ಕಣಕ್ಕಿಳಿಸಿ ಪ್ರತಾಪ್ ಸಿಂಹರ ಪರವಾಗಿ ಒಳ ಸಂದೇಶ ಕೊಟ್ಟಿದ್ದರು. ಇವೆಲ್ಲದರ ಜೊತೆಗೆ ಇಡೀ ದೇಶದಲ್ಲಿ ಆಗ ಇದ್ದ ಮೋದಿ ಅಲೆಯ ಲಾಭವನ್ನು ಪಡೆದುಕೊಂಡರೂ ಪ್ರತಾಪ್ ಸಿಂಹ ಗೆದ್ದಿದ್ದು 31 ಸಾವಿರ ಮತಗಳಲ್ಲಿ. 2009ರಲ್ಲಿ ಎಚ್.ವಿಶ್ವನಾಥ್ 3.54 ಲಕ್ಷ ಮತ ಪಡೆದುಕೊಂಡಿದ್ದರೆ, ಬಿಜೆಪಿಯ ವಿಜಯಶಂಕರ್ 3.47 ಲಕ್ಷ ಪಡೆದುಕೊಂಡಿದ್ದರು. ಕೊಡಗಿನ ಜೀವಿಜಯ ಜನತಾದಳದಿಂದ ಸ್ಪರ್ಧಿಸಿ 2.16 ಲಕ್ಷ ಪಡೆದುಕೊಂಡಿದ್ದರು. ಅದಕ್ಕೆ ಹಿಂದಿನ ಸಾಲಿನಲ್ಲಿ ಜೆಡಿಎಸ್‍ನ ಮತಪ್ರಮಾಣದಲ್ಲಿ ಶೇ.9.8ರಷ್ಟು ನಷ್ಟವಾಗಿ ಮಿಕ್ಕೆರಡೂ ಪಕ್ಷಗಳು ಅದರ ಲಾಭ ಪಡೆದುಕೊಂಡಿದ್ದರೂ, ಜೆಡಿಎಸ್‍ಗೆ 2.16 ಲಕ್ಷ ಮತ ಇದ್ದೇ ಇತ್ತು.

2014ರಲ್ಲಿ ಒಂದೂ ಮುಕ್ಕಾಲು ಲಕ್ಷ ಹೆಚ್ಚು ಮತಗಳು ಚಲಾವಣೆಯಾದವು. ದೇವೇಗೌಡರು ಪ್ರತಾಪಸಿಂಹರಿಗೆ ಬೆಂಬಲಿಸಿದದರೂ, ಜೆಡಿಎಸ್‍ನ ಡಮ್ಮಿ ಕ್ಯಾಂಡಿಡೇಟ್‍ಗೆ 1.38 ಲಕ್ಷ ಮತಗಳು ಬಂದವು. ಕಾಂಗ್ರೆಸ್‍ನ ಎಚ್.ವಿಶ್ವನಾಥ್ ಹಿಂದಿಗಿಂತ 1 ಲಕ್ಷ 20 ಸಾವಿರ ಹೆಚ್ಚು ಮತ ಪಡೆದುಕೊಂಡರೂ ಸೋತರು. ಇವೆಲ್ಲವೂ ದೇವೇಗೌಡರ ಕಾರಣಕ್ಕೆ ಎಂಬುದರಲ್ಲಿ ಯಾರಿಗೂ ಸಂಶಯವಿಲ್ಲ. ಆದರೂ ಸಂದರ್ಭದ ಅನಿವಾರ್ಯತೆಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ‘ಗೌಡರ ವಿರೋಧಿ’ ವಿಶ್ವನಾಥ್ ಜೆಡಿಎಸ್ ಸೇರಿ ಅದರ ರಾಜ್ಯಾಧ್ಯಕ್ಷರಾಗಿದ್ದಾರೆ.
ಈ ಚುನಾವಣೆಯ ಹೊತ್ತಿಗೆ ಒಕ್ಕಲಿಗರ ಮತ ಧ್ರುವೀಕರಣದಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತಷ್ಟು ಪ್ರಬಲವಾಗಿದೆ. ಕಾಂಗ್ರೆಸ್‍ಗೆ ಒಬ್ಬ ಎಂಎಲ್‍ಎ ಇದ್ದರೆ, ಜೆಡಿಎಸ್‍ಗೆ ಮೂವರು ಎಂಎಲ್‍ಎಗಳಿದ್ದಾರೆ. ಅಂದರೆ, ಇಂದಿನ ಮತದಾರರ ಸಂಖ್ಯೆಗೆ ತಾಳೆ ಹಾಕುವುದಾದರೆ ಜೆಡಿಎಸ್ ಕನಿಷ್ಠ 3 ಲಕ್ಷ ಓಟುಗಳನ್ನು ಹೊಂದಿದೆ. ಜೊತೆಗೆ ಇದೊಂಥರಾ ಟ್ರಾನ್ಸಫರಬಲ್ ಮತಗಳು. ಹೀಗಾಗಿ ಇಲ್ಲಿ ದೇವೇಗೌಡರೇ ನಿರ್ಣಾಯಕ. ಅವರ ನೆರವಿಲ್ಲದೇ ಸಿದ್ದರಾಮಯ್ಯನವರು ವಿಜಯಶಂಕರ್‍ರನ್ನು ಗೆಲ್ಲಿಸಿಕೊಳ್ಳುವುದು ಸುಲಭವಿಲ್ಲ.

ಮೈತ್ರಿ ಧರ್ಮ ಪಾಲನೆಯಾದರೆ, ಪ್ರತಾಪ್‍ಸಿಂಹ 2 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ. ಮುಂದಿನ ಒಂದು ವಾರದಲ್ಲೇ ದೋಸ್ತಿಗಳ ನಡುವಿನ ಬಂಧ ಎಷ್ಟು ಗಟ್ಟಿಯಿದೆ ಎಂಬುದು ತೀರ್ಮಾನವಾಗಿಬಿಡುವುದರಿಂದ, ಮೈಸೂರು ಕ್ಷೇತ್ರದ ಫಲಿತಾಂಶವೂ ಈ ವಾರದಲ್ಲೇ ಅಂತಿಮಗೊಂಡುಬಿಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...