Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...