Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...