Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...