Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...