Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...