Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...