Homeಕರ್ನಾಟಕಮೈಸೂರು - ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

ಮೈಸೂರು – ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

- Advertisement -
- Advertisement -

ರಾಜ್ಯದ ಮೈಸೂರು ಕ್ಯಾಂಪಸ್‌ನಲ್ಲಿ ನೇಮಕಗೊಂಡಿದ್ದ ಮತ್ತು ಕಳೆದ ಕೆಲವು ತಿಂಗಳುಗಳಲ್ಲಿ ಫೌಂಡೇಶನ್‌ನಿಂದ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸಬರನ್ನುಇನ್ಫೋಸಿಸ್‌ ವಜಾಗೊಳಿಸಿದೆ ಎಂಬುವುದನ್ನು ಒಪ್ಪಿಕೊಂಡಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಐಟಿ ವಲಯದ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಜಾಗೊಳಿಸಲಾಗಿರುವ ಸಂಖ್ಯೆಯನ್ನು 700 ಎಂದು ಹೇಳಿದ್ದು ವಿವಾದವೇರ್ಪಟ್ಟಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಇನ್ಫೋಸಿಸ್ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ವಜಾಗೊಳಿಸಿದ್ದು ಇದೇ ಮೊದಲಾಗಿದ್ದು, ಈ ಹಿಂದೆ ಸುಮಾರು 500 ಜನರನ್ನು ವಜಾಗೊಳಿಸಲಾಗಿತ್ತು ಎಂದು ವಜಾಗೊಳಿಸಲ್ಪಟ್ಟ ವ್ಯಕ್ತಿಯೊಬ್ಬರು ಅಂದಾಜಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ಫೋಸಿಸ್ ಅಕ್ಟೋಬರ್ 2024 ರಲ್ಲಿ ಕೆಲವೇ ತಿಂಗಳುಗಳ ಹಿಂದೆ ನೇಮಕಗೊಂಡಿದ್ದ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ಬಲವಂತವಾಗಿ ವಜಾಗೊಳಿಸಲು ಪ್ರಾರಂಭಿಸಿದ್ದು, ಇದು ಆಘಾತಕಾರಿ ಮತ್ತು ಅನೈತಿಕ ಕ್ರಮವಾಗಿದೆ. ಈ ಉದ್ಯೋಗಿಗಳು ತಮ್ಮ ಆಫರ್ ಲೆಟರ್‌ಗಳನ್ನು ಸ್ವೀಕರಿಸಿ ಈಗಾಗಲೇ ಎರಡು ವರ್ಷಗಳ ಕಾಲ ಕಾಯಬೇಕಾಗಿತ್ತು” ಎಂದು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲುಜಾ ಹೇಳಿದ್ದಾರೆ.

ಇನ್ಫೋಸಿಸ್ ಶುಕ್ರವಾರ ಈ ಉದ್ಯೋಗಿಗಳನ್ನು ತನ್ನ ಮೈಸೂರು ಕ್ಯಾಂಪಸ್‌ನ ಸಭೆ ಕೊಠಡಿಗಳಿಗೆ ಕರೆಸಿತು. ಅಲ್ಲಿ ಅವರನ್ನು “ಪರಸ್ಪರ ಬೇರ್ಪಡಿಕೆ” ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ಒಕ್ಕೂಟವು ಹೇಳಿದೆ.

ದೇಶದ ಎಲ್ಲಾ ಪ್ರದೇಶದಿಂದ ಇದ್ದ ಉದ್ಯೋಗಿಗಳನ್ನು ಪೂರ್ಣ ದಿನದ ನೋಟಿಸ್ ಅವಧಿ ಕೂಡಾ ನೀಡದೆ ಸಂಜೆಯೊಳಗೆ ಇನ್ಫೋಸಿಸ್ ಆವರಣವನ್ನು ತೊರೆಯುವಂತೆ ಹೇಳಲಾಯಿತು ಎಂದು ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಸುರಕ್ಷತಾ ಕಳವಳವನ್ನು ಕೂಡಾ ಅವರು ಎತ್ತಿ ತೋರಿಸಿದ್ದಾರೆ.

“ಮುಂದಿನ ಕೆಲವು ಬ್ಯಾಚ್‌ಗಳ ಹೆಚ್ಚಿನ ವಜಾಗಳು ಕೂಡಾ ಮುಂದೆ ನಡೆಯಲಿದೆ” ಎಂದು ಮಾಜಿ ಉದ್ಯೋಗಿ ಹೇಳಿದ್ದಾರೆ. ಅದಾಗ್ಯೂ, ಇನ್ಫೋಸಿಸ್ ನೀಡಿರುವ ಅಧಿಕೃತ ಹೇಳಿಕೆಯಲ್ಲಿ, “ವಜಾಗೊಳಿಸಲ್ಪಟ್ಟ ಉದ್ಯೋಗಿಗಳ ಸಂಖ್ಯೆ 300 ಕ್ಕಿಂತ ಸ್ವಲ್ಪ ಹೆಚ್ಚಿದೆ ಮತ್ತು ನಾವು ಯಾರನ್ನೂ ಬಲವಂತವಾಗಿ ವಜಾಗೊಳಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಇನ್ಫೋಸಿಸ್ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದೆ. ಅಲ್ಲಿ ಎಲ್ಲಾ ಹೊಸಬರು ತಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಮೂಲಭೂತ ತರಬೇತಿಯನ್ನು ಪಡೆದ ನಂತರ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಎಲ್ಲಾ ಹೊಸಬರು ಮೌಲ್ಯಮಾಪನವನ್ನು ಪೂರ್ಣಗೊಳಿಸಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ, ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ, ಇದು ಅವರ ನಡುವೆ ನಡೆಸಲಾದ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ” ಎಂದು ಇನ್ಫೋಸಿಸ್ ಹೇಳಿದೆ.

“ಇದು ನಿಮಗೆ ತಿಳಿಸಲಾದ ತರಬೇತಿ ಮೌಲ್ಯಮಾಪನ ಫಲಿತಾಂಶದ ಮುಂದುವರಿಕೆಯಾಗಿದೆ. ಮುಂದಿನ ಹಂತಗಳನ್ನು ಚರ್ಚಿಸಲು ಫೆಬ್ರವರಿ 7, 2025 ರಂದು ಎಚ್‌ಆರ್‌ಡಿಯೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ನೀವು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಆದ್ದರಿಂದ ದಯವಿಟ್ಟು ಇದರ ಬಗ್ಗೆ ಚರ್ಚಿಸಬೇಡಿ ಅಥವಾ ಈ ಕ್ಯಾಲೆಂಡರ್ ಆಹ್ವಾನವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.” ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಕ್ರಮವನ್ನು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಿರೋಧಿಸಿದ್ದು, ಅವದ ಕ್ರಮಗಳು 1947 ರ ಕೈಗಾರಿಕಾ ವಿವಾದ ಕಾಯ್ದೆ ಸೇರಿದಂತೆ ಭಾರತೀಯ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಒಕ್ಕೂಟವು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮತ್ತು ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಮೈಸೂರು

ಇದನ್ನೂಓದಿ:  ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...