Homeಕರ್ನಾಟಕಮೈಸೂರು - ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

ಮೈಸೂರು – ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

- Advertisement -
- Advertisement -

ರಾಜ್ಯದ ಮೈಸೂರು ಕ್ಯಾಂಪಸ್‌ನಲ್ಲಿ ನೇಮಕಗೊಂಡಿದ್ದ ಮತ್ತು ಕಳೆದ ಕೆಲವು ತಿಂಗಳುಗಳಲ್ಲಿ ಫೌಂಡೇಶನ್‌ನಿಂದ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸಬರನ್ನುಇನ್ಫೋಸಿಸ್‌ ವಜಾಗೊಳಿಸಿದೆ ಎಂಬುವುದನ್ನು ಒಪ್ಪಿಕೊಂಡಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಐಟಿ ವಲಯದ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಜಾಗೊಳಿಸಲಾಗಿರುವ ಸಂಖ್ಯೆಯನ್ನು 700 ಎಂದು ಹೇಳಿದ್ದು ವಿವಾದವೇರ್ಪಟ್ಟಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಇನ್ಫೋಸಿಸ್ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ವಜಾಗೊಳಿಸಿದ್ದು ಇದೇ ಮೊದಲಾಗಿದ್ದು, ಈ ಹಿಂದೆ ಸುಮಾರು 500 ಜನರನ್ನು ವಜಾಗೊಳಿಸಲಾಗಿತ್ತು ಎಂದು ವಜಾಗೊಳಿಸಲ್ಪಟ್ಟ ವ್ಯಕ್ತಿಯೊಬ್ಬರು ಅಂದಾಜಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ಫೋಸಿಸ್ ಅಕ್ಟೋಬರ್ 2024 ರಲ್ಲಿ ಕೆಲವೇ ತಿಂಗಳುಗಳ ಹಿಂದೆ ನೇಮಕಗೊಂಡಿದ್ದ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ಬಲವಂತವಾಗಿ ವಜಾಗೊಳಿಸಲು ಪ್ರಾರಂಭಿಸಿದ್ದು, ಇದು ಆಘಾತಕಾರಿ ಮತ್ತು ಅನೈತಿಕ ಕ್ರಮವಾಗಿದೆ. ಈ ಉದ್ಯೋಗಿಗಳು ತಮ್ಮ ಆಫರ್ ಲೆಟರ್‌ಗಳನ್ನು ಸ್ವೀಕರಿಸಿ ಈಗಾಗಲೇ ಎರಡು ವರ್ಷಗಳ ಕಾಲ ಕಾಯಬೇಕಾಗಿತ್ತು” ಎಂದು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲುಜಾ ಹೇಳಿದ್ದಾರೆ.

ಇನ್ಫೋಸಿಸ್ ಶುಕ್ರವಾರ ಈ ಉದ್ಯೋಗಿಗಳನ್ನು ತನ್ನ ಮೈಸೂರು ಕ್ಯಾಂಪಸ್‌ನ ಸಭೆ ಕೊಠಡಿಗಳಿಗೆ ಕರೆಸಿತು. ಅಲ್ಲಿ ಅವರನ್ನು “ಪರಸ್ಪರ ಬೇರ್ಪಡಿಕೆ” ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ಒಕ್ಕೂಟವು ಹೇಳಿದೆ.

ದೇಶದ ಎಲ್ಲಾ ಪ್ರದೇಶದಿಂದ ಇದ್ದ ಉದ್ಯೋಗಿಗಳನ್ನು ಪೂರ್ಣ ದಿನದ ನೋಟಿಸ್ ಅವಧಿ ಕೂಡಾ ನೀಡದೆ ಸಂಜೆಯೊಳಗೆ ಇನ್ಫೋಸಿಸ್ ಆವರಣವನ್ನು ತೊರೆಯುವಂತೆ ಹೇಳಲಾಯಿತು ಎಂದು ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಸುರಕ್ಷತಾ ಕಳವಳವನ್ನು ಕೂಡಾ ಅವರು ಎತ್ತಿ ತೋರಿಸಿದ್ದಾರೆ.

“ಮುಂದಿನ ಕೆಲವು ಬ್ಯಾಚ್‌ಗಳ ಹೆಚ್ಚಿನ ವಜಾಗಳು ಕೂಡಾ ಮುಂದೆ ನಡೆಯಲಿದೆ” ಎಂದು ಮಾಜಿ ಉದ್ಯೋಗಿ ಹೇಳಿದ್ದಾರೆ. ಅದಾಗ್ಯೂ, ಇನ್ಫೋಸಿಸ್ ನೀಡಿರುವ ಅಧಿಕೃತ ಹೇಳಿಕೆಯಲ್ಲಿ, “ವಜಾಗೊಳಿಸಲ್ಪಟ್ಟ ಉದ್ಯೋಗಿಗಳ ಸಂಖ್ಯೆ 300 ಕ್ಕಿಂತ ಸ್ವಲ್ಪ ಹೆಚ್ಚಿದೆ ಮತ್ತು ನಾವು ಯಾರನ್ನೂ ಬಲವಂತವಾಗಿ ವಜಾಗೊಳಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಇನ್ಫೋಸಿಸ್ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದೆ. ಅಲ್ಲಿ ಎಲ್ಲಾ ಹೊಸಬರು ತಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಮೂಲಭೂತ ತರಬೇತಿಯನ್ನು ಪಡೆದ ನಂತರ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಎಲ್ಲಾ ಹೊಸಬರು ಮೌಲ್ಯಮಾಪನವನ್ನು ಪೂರ್ಣಗೊಳಿಸಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ, ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ, ಇದು ಅವರ ನಡುವೆ ನಡೆಸಲಾದ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ” ಎಂದು ಇನ್ಫೋಸಿಸ್ ಹೇಳಿದೆ.

“ಇದು ನಿಮಗೆ ತಿಳಿಸಲಾದ ತರಬೇತಿ ಮೌಲ್ಯಮಾಪನ ಫಲಿತಾಂಶದ ಮುಂದುವರಿಕೆಯಾಗಿದೆ. ಮುಂದಿನ ಹಂತಗಳನ್ನು ಚರ್ಚಿಸಲು ಫೆಬ್ರವರಿ 7, 2025 ರಂದು ಎಚ್‌ಆರ್‌ಡಿಯೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ನೀವು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಆದ್ದರಿಂದ ದಯವಿಟ್ಟು ಇದರ ಬಗ್ಗೆ ಚರ್ಚಿಸಬೇಡಿ ಅಥವಾ ಈ ಕ್ಯಾಲೆಂಡರ್ ಆಹ್ವಾನವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.” ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಕ್ರಮವನ್ನು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಿರೋಧಿಸಿದ್ದು, ಅವದ ಕ್ರಮಗಳು 1947 ರ ಕೈಗಾರಿಕಾ ವಿವಾದ ಕಾಯ್ದೆ ಸೇರಿದಂತೆ ಭಾರತೀಯ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಒಕ್ಕೂಟವು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮತ್ತು ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಮೈಸೂರು

ಇದನ್ನೂಓದಿ:  ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...