Homeಕರ್ನಾಟಕಮೈಸೂರು - ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

ಮೈಸೂರು – ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

- Advertisement -
- Advertisement -

ರಾಜ್ಯದ ಮೈಸೂರು ಕ್ಯಾಂಪಸ್‌ನಲ್ಲಿ ನೇಮಕಗೊಂಡಿದ್ದ ಮತ್ತು ಕಳೆದ ಕೆಲವು ತಿಂಗಳುಗಳಲ್ಲಿ ಫೌಂಡೇಶನ್‌ನಿಂದ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸಬರನ್ನುಇನ್ಫೋಸಿಸ್‌ ವಜಾಗೊಳಿಸಿದೆ ಎಂಬುವುದನ್ನು ಒಪ್ಪಿಕೊಂಡಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಐಟಿ ವಲಯದ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಜಾಗೊಳಿಸಲಾಗಿರುವ ಸಂಖ್ಯೆಯನ್ನು 700 ಎಂದು ಹೇಳಿದ್ದು ವಿವಾದವೇರ್ಪಟ್ಟಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಇನ್ಫೋಸಿಸ್ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ವಜಾಗೊಳಿಸಿದ್ದು ಇದೇ ಮೊದಲಾಗಿದ್ದು, ಈ ಹಿಂದೆ ಸುಮಾರು 500 ಜನರನ್ನು ವಜಾಗೊಳಿಸಲಾಗಿತ್ತು ಎಂದು ವಜಾಗೊಳಿಸಲ್ಪಟ್ಟ ವ್ಯಕ್ತಿಯೊಬ್ಬರು ಅಂದಾಜಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ಫೋಸಿಸ್ ಅಕ್ಟೋಬರ್ 2024 ರಲ್ಲಿ ಕೆಲವೇ ತಿಂಗಳುಗಳ ಹಿಂದೆ ನೇಮಕಗೊಂಡಿದ್ದ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ಬಲವಂತವಾಗಿ ವಜಾಗೊಳಿಸಲು ಪ್ರಾರಂಭಿಸಿದ್ದು, ಇದು ಆಘಾತಕಾರಿ ಮತ್ತು ಅನೈತಿಕ ಕ್ರಮವಾಗಿದೆ. ಈ ಉದ್ಯೋಗಿಗಳು ತಮ್ಮ ಆಫರ್ ಲೆಟರ್‌ಗಳನ್ನು ಸ್ವೀಕರಿಸಿ ಈಗಾಗಲೇ ಎರಡು ವರ್ಷಗಳ ಕಾಲ ಕಾಯಬೇಕಾಗಿತ್ತು” ಎಂದು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲುಜಾ ಹೇಳಿದ್ದಾರೆ.

ಇನ್ಫೋಸಿಸ್ ಶುಕ್ರವಾರ ಈ ಉದ್ಯೋಗಿಗಳನ್ನು ತನ್ನ ಮೈಸೂರು ಕ್ಯಾಂಪಸ್‌ನ ಸಭೆ ಕೊಠಡಿಗಳಿಗೆ ಕರೆಸಿತು. ಅಲ್ಲಿ ಅವರನ್ನು “ಪರಸ್ಪರ ಬೇರ್ಪಡಿಕೆ” ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ಒಕ್ಕೂಟವು ಹೇಳಿದೆ.

ದೇಶದ ಎಲ್ಲಾ ಪ್ರದೇಶದಿಂದ ಇದ್ದ ಉದ್ಯೋಗಿಗಳನ್ನು ಪೂರ್ಣ ದಿನದ ನೋಟಿಸ್ ಅವಧಿ ಕೂಡಾ ನೀಡದೆ ಸಂಜೆಯೊಳಗೆ ಇನ್ಫೋಸಿಸ್ ಆವರಣವನ್ನು ತೊರೆಯುವಂತೆ ಹೇಳಲಾಯಿತು ಎಂದು ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಸುರಕ್ಷತಾ ಕಳವಳವನ್ನು ಕೂಡಾ ಅವರು ಎತ್ತಿ ತೋರಿಸಿದ್ದಾರೆ.

“ಮುಂದಿನ ಕೆಲವು ಬ್ಯಾಚ್‌ಗಳ ಹೆಚ್ಚಿನ ವಜಾಗಳು ಕೂಡಾ ಮುಂದೆ ನಡೆಯಲಿದೆ” ಎಂದು ಮಾಜಿ ಉದ್ಯೋಗಿ ಹೇಳಿದ್ದಾರೆ. ಅದಾಗ್ಯೂ, ಇನ್ಫೋಸಿಸ್ ನೀಡಿರುವ ಅಧಿಕೃತ ಹೇಳಿಕೆಯಲ್ಲಿ, “ವಜಾಗೊಳಿಸಲ್ಪಟ್ಟ ಉದ್ಯೋಗಿಗಳ ಸಂಖ್ಯೆ 300 ಕ್ಕಿಂತ ಸ್ವಲ್ಪ ಹೆಚ್ಚಿದೆ ಮತ್ತು ನಾವು ಯಾರನ್ನೂ ಬಲವಂತವಾಗಿ ವಜಾಗೊಳಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಇನ್ಫೋಸಿಸ್ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದೆ. ಅಲ್ಲಿ ಎಲ್ಲಾ ಹೊಸಬರು ತಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಮೂಲಭೂತ ತರಬೇತಿಯನ್ನು ಪಡೆದ ನಂತರ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಎಲ್ಲಾ ಹೊಸಬರು ಮೌಲ್ಯಮಾಪನವನ್ನು ಪೂರ್ಣಗೊಳಿಸಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ, ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ, ಇದು ಅವರ ನಡುವೆ ನಡೆಸಲಾದ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ” ಎಂದು ಇನ್ಫೋಸಿಸ್ ಹೇಳಿದೆ.

“ಇದು ನಿಮಗೆ ತಿಳಿಸಲಾದ ತರಬೇತಿ ಮೌಲ್ಯಮಾಪನ ಫಲಿತಾಂಶದ ಮುಂದುವರಿಕೆಯಾಗಿದೆ. ಮುಂದಿನ ಹಂತಗಳನ್ನು ಚರ್ಚಿಸಲು ಫೆಬ್ರವರಿ 7, 2025 ರಂದು ಎಚ್‌ಆರ್‌ಡಿಯೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ನೀವು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಆದ್ದರಿಂದ ದಯವಿಟ್ಟು ಇದರ ಬಗ್ಗೆ ಚರ್ಚಿಸಬೇಡಿ ಅಥವಾ ಈ ಕ್ಯಾಲೆಂಡರ್ ಆಹ್ವಾನವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.” ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಕ್ರಮವನ್ನು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಿರೋಧಿಸಿದ್ದು, ಅವದ ಕ್ರಮಗಳು 1947 ರ ಕೈಗಾರಿಕಾ ವಿವಾದ ಕಾಯ್ದೆ ಸೇರಿದಂತೆ ಭಾರತೀಯ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಒಕ್ಕೂಟವು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮತ್ತು ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಮೈಸೂರು

ಇದನ್ನೂಓದಿ:  ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...