Homeಕರ್ನಾಟಕಮೈಸೂರು - ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

ಮೈಸೂರು – ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

- Advertisement -
- Advertisement -

ರಾಜ್ಯದ ಮೈಸೂರು ಕ್ಯಾಂಪಸ್‌ನಲ್ಲಿ ನೇಮಕಗೊಂಡಿದ್ದ ಮತ್ತು ಕಳೆದ ಕೆಲವು ತಿಂಗಳುಗಳಲ್ಲಿ ಫೌಂಡೇಶನ್‌ನಿಂದ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸಬರನ್ನುಇನ್ಫೋಸಿಸ್‌ ವಜಾಗೊಳಿಸಿದೆ ಎಂಬುವುದನ್ನು ಒಪ್ಪಿಕೊಂಡಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಐಟಿ ವಲಯದ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಜಾಗೊಳಿಸಲಾಗಿರುವ ಸಂಖ್ಯೆಯನ್ನು 700 ಎಂದು ಹೇಳಿದ್ದು ವಿವಾದವೇರ್ಪಟ್ಟಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಇನ್ಫೋಸಿಸ್ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ವಜಾಗೊಳಿಸಿದ್ದು ಇದೇ ಮೊದಲಾಗಿದ್ದು, ಈ ಹಿಂದೆ ಸುಮಾರು 500 ಜನರನ್ನು ವಜಾಗೊಳಿಸಲಾಗಿತ್ತು ಎಂದು ವಜಾಗೊಳಿಸಲ್ಪಟ್ಟ ವ್ಯಕ್ತಿಯೊಬ್ಬರು ಅಂದಾಜಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ಫೋಸಿಸ್ ಅಕ್ಟೋಬರ್ 2024 ರಲ್ಲಿ ಕೆಲವೇ ತಿಂಗಳುಗಳ ಹಿಂದೆ ನೇಮಕಗೊಂಡಿದ್ದ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ಬಲವಂತವಾಗಿ ವಜಾಗೊಳಿಸಲು ಪ್ರಾರಂಭಿಸಿದ್ದು, ಇದು ಆಘಾತಕಾರಿ ಮತ್ತು ಅನೈತಿಕ ಕ್ರಮವಾಗಿದೆ. ಈ ಉದ್ಯೋಗಿಗಳು ತಮ್ಮ ಆಫರ್ ಲೆಟರ್‌ಗಳನ್ನು ಸ್ವೀಕರಿಸಿ ಈಗಾಗಲೇ ಎರಡು ವರ್ಷಗಳ ಕಾಲ ಕಾಯಬೇಕಾಗಿತ್ತು” ಎಂದು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲುಜಾ ಹೇಳಿದ್ದಾರೆ.

ಇನ್ಫೋಸಿಸ್ ಶುಕ್ರವಾರ ಈ ಉದ್ಯೋಗಿಗಳನ್ನು ತನ್ನ ಮೈಸೂರು ಕ್ಯಾಂಪಸ್‌ನ ಸಭೆ ಕೊಠಡಿಗಳಿಗೆ ಕರೆಸಿತು. ಅಲ್ಲಿ ಅವರನ್ನು “ಪರಸ್ಪರ ಬೇರ್ಪಡಿಕೆ” ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ಒಕ್ಕೂಟವು ಹೇಳಿದೆ.

ದೇಶದ ಎಲ್ಲಾ ಪ್ರದೇಶದಿಂದ ಇದ್ದ ಉದ್ಯೋಗಿಗಳನ್ನು ಪೂರ್ಣ ದಿನದ ನೋಟಿಸ್ ಅವಧಿ ಕೂಡಾ ನೀಡದೆ ಸಂಜೆಯೊಳಗೆ ಇನ್ಫೋಸಿಸ್ ಆವರಣವನ್ನು ತೊರೆಯುವಂತೆ ಹೇಳಲಾಯಿತು ಎಂದು ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಸುರಕ್ಷತಾ ಕಳವಳವನ್ನು ಕೂಡಾ ಅವರು ಎತ್ತಿ ತೋರಿಸಿದ್ದಾರೆ.

“ಮುಂದಿನ ಕೆಲವು ಬ್ಯಾಚ್‌ಗಳ ಹೆಚ್ಚಿನ ವಜಾಗಳು ಕೂಡಾ ಮುಂದೆ ನಡೆಯಲಿದೆ” ಎಂದು ಮಾಜಿ ಉದ್ಯೋಗಿ ಹೇಳಿದ್ದಾರೆ. ಅದಾಗ್ಯೂ, ಇನ್ಫೋಸಿಸ್ ನೀಡಿರುವ ಅಧಿಕೃತ ಹೇಳಿಕೆಯಲ್ಲಿ, “ವಜಾಗೊಳಿಸಲ್ಪಟ್ಟ ಉದ್ಯೋಗಿಗಳ ಸಂಖ್ಯೆ 300 ಕ್ಕಿಂತ ಸ್ವಲ್ಪ ಹೆಚ್ಚಿದೆ ಮತ್ತು ನಾವು ಯಾರನ್ನೂ ಬಲವಂತವಾಗಿ ವಜಾಗೊಳಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಇನ್ಫೋಸಿಸ್ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದೆ. ಅಲ್ಲಿ ಎಲ್ಲಾ ಹೊಸಬರು ತಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಮೂಲಭೂತ ತರಬೇತಿಯನ್ನು ಪಡೆದ ನಂತರ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಎಲ್ಲಾ ಹೊಸಬರು ಮೌಲ್ಯಮಾಪನವನ್ನು ಪೂರ್ಣಗೊಳಿಸಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ, ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ, ಇದು ಅವರ ನಡುವೆ ನಡೆಸಲಾದ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ” ಎಂದು ಇನ್ಫೋಸಿಸ್ ಹೇಳಿದೆ.

“ಇದು ನಿಮಗೆ ತಿಳಿಸಲಾದ ತರಬೇತಿ ಮೌಲ್ಯಮಾಪನ ಫಲಿತಾಂಶದ ಮುಂದುವರಿಕೆಯಾಗಿದೆ. ಮುಂದಿನ ಹಂತಗಳನ್ನು ಚರ್ಚಿಸಲು ಫೆಬ್ರವರಿ 7, 2025 ರಂದು ಎಚ್‌ಆರ್‌ಡಿಯೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ನೀವು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಆದ್ದರಿಂದ ದಯವಿಟ್ಟು ಇದರ ಬಗ್ಗೆ ಚರ್ಚಿಸಬೇಡಿ ಅಥವಾ ಈ ಕ್ಯಾಲೆಂಡರ್ ಆಹ್ವಾನವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.” ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಕ್ರಮವನ್ನು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಿರೋಧಿಸಿದ್ದು, ಅವದ ಕ್ರಮಗಳು 1947 ರ ಕೈಗಾರಿಕಾ ವಿವಾದ ಕಾಯ್ದೆ ಸೇರಿದಂತೆ ಭಾರತೀಯ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಒಕ್ಕೂಟವು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮತ್ತು ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಮೈಸೂರು

ಇದನ್ನೂಓದಿ:  ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...