Homeಕರ್ನಾಟಕಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

- Advertisement -
- Advertisement -

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು.

ʼʼಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆʼʼ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಮಹಿಷ ದಸರಾ ಹಾಗೂ ಇದನ್ನು ವಿರೋಧಿಸಿ ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕೇಳಲಾಗಿತ್ತು. ಆದರೆ, ಇವರೆಡೂ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಕುಂದು ತರಬಹುದೆಂಬ ಲೆಕ್ಕಾಚಾರದಿಂದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಣೆ ಮಾಡಿದ್ದಾರೆ.

ಈ ಮೂಲಕ ಮಹಿಷ ದಸರಾ ಆಚರಣಾ ಸಮಿತಿಗೆ ಹಾಗೂ ಚಾಮುಂಡಿ ಚಲೋಗೂ ಅನುಮತಿ ಇಲ್ಲ. ಅ.13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತೀರ್ಮಾನ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಜಾಥ ಹೊರಡಲಾಗುತ್ತದೆ. ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಗಿತ್ತು.ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.

ಮತ್ತೊಂದೆಡೆ ಬಿಜೆಪಿ ಮಹಿಷ ದಸರಾ ಆಚರಣೆ ವಿರೋಧಿಸಿತ್ತು. ಅ.13 ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವುದು. ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳುವುದು. ಚಾಮುಂಡಿ ಬೆಟ್ಟದಲ್ಲಿ ಚಲೋ‌ ನಡೆಸಲು ತೀರ್ಮಾನಿಸಿತ್ತು. ಇಲ್ಲಿ ಗಲಭೆಗಳಾಗುವ ಮುನ್ಸೂಚನೆಯಿಂದ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ. ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಹಿಷ ದಸರಾ- ಚಾಮುಂಡಿಚಲೋಗೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: ಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...