Homeಕರ್ನಾಟಕಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ಮೈಸೂರು: ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

- Advertisement -
- Advertisement -

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು.

ʼʼಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆʼʼ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಮಹಿಷ ದಸರಾ ಹಾಗೂ ಇದನ್ನು ವಿರೋಧಿಸಿ ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕೇಳಲಾಗಿತ್ತು. ಆದರೆ, ಇವರೆಡೂ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಕುಂದು ತರಬಹುದೆಂಬ ಲೆಕ್ಕಾಚಾರದಿಂದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಣೆ ಮಾಡಿದ್ದಾರೆ.

ಈ ಮೂಲಕ ಮಹಿಷ ದಸರಾ ಆಚರಣಾ ಸಮಿತಿಗೆ ಹಾಗೂ ಚಾಮುಂಡಿ ಚಲೋಗೂ ಅನುಮತಿ ಇಲ್ಲ. ಅ.13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತೀರ್ಮಾನ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಜಾಥ ಹೊರಡಲಾಗುತ್ತದೆ. ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಗಿತ್ತು.ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.

ಮತ್ತೊಂದೆಡೆ ಬಿಜೆಪಿ ಮಹಿಷ ದಸರಾ ಆಚರಣೆ ವಿರೋಧಿಸಿತ್ತು. ಅ.13 ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವುದು. ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳುವುದು. ಚಾಮುಂಡಿ ಬೆಟ್ಟದಲ್ಲಿ ಚಲೋ‌ ನಡೆಸಲು ತೀರ್ಮಾನಿಸಿತ್ತು. ಇಲ್ಲಿ ಗಲಭೆಗಳಾಗುವ ಮುನ್ಸೂಚನೆಯಿಂದ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ. ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಹಿಷ ದಸರಾ- ಚಾಮುಂಡಿಚಲೋಗೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ: ಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...