Homeಕರ್ನಾಟಕಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -
- Advertisement -

ಕಳೆದ 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯದಲ್ಲಿ 11 ಸಾವಿರ ಪುಸ್ತಕಗಳಿದ್ದು, ಎಲ್ಲವೂ ಬೆಂಕಿಗಾಹುತಿಯಾಗಿವೆ.

ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ 10 ವರ್ಷಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಕನ್ನಡ ಸಾರ್ವಜನಿಕ ಗ್ರಂಥಾಲಯ ಆರಂಭಿಸಿದ್ದರು. ಇದರಿಂದ ರಾಜೀವ್ ನಗರ ಮತ್ತು ಶಾಂತಿ ನಗರದ ನಿವಾಸಿಗಳಲ್ಲಿ ಜನಪ್ರಿಯ ಮುಖವಾಗಿದ್ದರು. ಇದನ್ನು ಸಹಿಸದ ಕೆಲವರು ಅನೇಕ ಬಾರಿ ಗಲಾಟೆ ಮಾಡಿದ್ದರು. ಈಗ ಶುಕ್ರವಾರ ಬೆಳಗಿನ ಜಾವದಲ್ಲಿ ಗ್ರಂಥಾಲಯಕ್ಕೆ ಬೆಂಕಿ ಹಚ್ಚಿದ್ದಾರೆ.

ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯದಲ್ಲಿ 3 ಸಾವಿರ ಕನ್ನಡ ಪುಸ್ತಕಗಳು, ಭಗವದ್ ಗೀತೆಯ 3 ಸಾವಿರ ಪ್ರತಿಗಳು, 3 ಸಾವಿರ ಕುರಾನ್ ಪ್ರತಿಗಳು, 1 ಸಾವಿರ ಉರ್ದು ಪುಸ್ತಕಗಳು ಹಾಗೂ ಬೈಬಲ್‌ನ 1 ಸಾವಿರ ಕನ್ನಡ ಪ್ರತಿಗಳು ಇದ್ದವು. ಇವುಗಳಲ್ಲಿ ಬಹಳಷ್ಟು ದಾನಿಗಳಿಂದ ಸಂಗ್ರಹಿಸಿದ್ದು ಎಂದು ಸೈಯದ್ ಇಸಾಕ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಶಿಕ್ಷಣದಿಂದ ವಂಚಿತರಾಗಿದ್ದ ಸೈಯದ್ ಇಸಾಕ್, ಅಂಡರ್ ಗ್ರೌಂಡ್ ಡ್ರೈನೇಜ್ (ಯುಜಿಡಿ) ಕ್ಲೀನರ್ ಆಗಿ ಕೆಲಸ ಮಾಡುತ್ತಾರೆ. ಜನರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮತ್ತು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ, ಈ ಸಾರ್ವಜನಿಕ ಗ್ರಂಥಾಲಯವನ್ನು ಆರಂಭಿಸಿದ್ದರು.

ಅಮ್ಮರ್ ಮಸೀದಿ ಬಳಿಯ ರಾಜೀವ್ ನಗರದ ಎರಡನೇ ಹಂತದ ಕಾರ್ಪೊರೇಷನ್ ಪಾರ್ಕ್ ಒಳಗೆ ಶೆಡ್ ಹಾಕಿ ಸ್ಥಾಪಿಸಿದ್ದರು. ಪ್ರತಿದಿನ, 100-150 ಕ್ಕೂ ಹೆಚ್ಚು ಜನರು ಅವರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದರು. ಕನ್ನಡ, ಇಂಗ್ಲಿಷ್, ಉರ್ದು ಮತ್ತು ತಮಿಳು ಸೇರಿದಂತೆ 17 ಕ್ಕೂ ಹೆಚ್ಚು ಪತ್ರಿಕೆಗಳನ್ನು ಇಸಾಕ್ ಖರೀದಿಸುತ್ತಿದ್ದರು.

“ಬೆಳಿಗ್ಗೆ 4 ಗಂಟೆಗೆ, ಗ್ರಂಥಾಲಯದ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಒಳಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ಮಾಹಿತಿ ನೀಡಿದರು. ನಾನು ಗ್ರಂಥಾಲಯಕ್ಕೆ ಧಾವಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ಪುಸ್ತಕಗಳು ಬೂದಿಯಾಗುವುದನ್ನು ನೋಡಿದೆ. ”ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಘಟನೆಯ ನಂತರ, ಸೈಯದ್ ಇಸಾಕ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ, ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

ಘಟನೆಯಿಂದ ನೊಂದಿದ್ದರು ಕೂಡ ಮತ್ತೆ ಗ್ರಂಥಾಲಯವನ್ನು ಕಟ್ಟುತ್ತೇನೆ ಎಂದಿದ್ದಾರೆ. ಇಸಾಕ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...