Homeಕರ್ನಾಟಕಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -
- Advertisement -

ಕಳೆದ 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯದಲ್ಲಿ 11 ಸಾವಿರ ಪುಸ್ತಕಗಳಿದ್ದು, ಎಲ್ಲವೂ ಬೆಂಕಿಗಾಹುತಿಯಾಗಿವೆ.

ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ 10 ವರ್ಷಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಕನ್ನಡ ಸಾರ್ವಜನಿಕ ಗ್ರಂಥಾಲಯ ಆರಂಭಿಸಿದ್ದರು. ಇದರಿಂದ ರಾಜೀವ್ ನಗರ ಮತ್ತು ಶಾಂತಿ ನಗರದ ನಿವಾಸಿಗಳಲ್ಲಿ ಜನಪ್ರಿಯ ಮುಖವಾಗಿದ್ದರು. ಇದನ್ನು ಸಹಿಸದ ಕೆಲವರು ಅನೇಕ ಬಾರಿ ಗಲಾಟೆ ಮಾಡಿದ್ದರು. ಈಗ ಶುಕ್ರವಾರ ಬೆಳಗಿನ ಜಾವದಲ್ಲಿ ಗ್ರಂಥಾಲಯಕ್ಕೆ ಬೆಂಕಿ ಹಚ್ಚಿದ್ದಾರೆ.

ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯದಲ್ಲಿ 3 ಸಾವಿರ ಕನ್ನಡ ಪುಸ್ತಕಗಳು, ಭಗವದ್ ಗೀತೆಯ 3 ಸಾವಿರ ಪ್ರತಿಗಳು, 3 ಸಾವಿರ ಕುರಾನ್ ಪ್ರತಿಗಳು, 1 ಸಾವಿರ ಉರ್ದು ಪುಸ್ತಕಗಳು ಹಾಗೂ ಬೈಬಲ್‌ನ 1 ಸಾವಿರ ಕನ್ನಡ ಪ್ರತಿಗಳು ಇದ್ದವು. ಇವುಗಳಲ್ಲಿ ಬಹಳಷ್ಟು ದಾನಿಗಳಿಂದ ಸಂಗ್ರಹಿಸಿದ್ದು ಎಂದು ಸೈಯದ್ ಇಸಾಕ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಶಿಕ್ಷಣದಿಂದ ವಂಚಿತರಾಗಿದ್ದ ಸೈಯದ್ ಇಸಾಕ್, ಅಂಡರ್ ಗ್ರೌಂಡ್ ಡ್ರೈನೇಜ್ (ಯುಜಿಡಿ) ಕ್ಲೀನರ್ ಆಗಿ ಕೆಲಸ ಮಾಡುತ್ತಾರೆ. ಜನರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮತ್ತು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ, ಈ ಸಾರ್ವಜನಿಕ ಗ್ರಂಥಾಲಯವನ್ನು ಆರಂಭಿಸಿದ್ದರು.

ಅಮ್ಮರ್ ಮಸೀದಿ ಬಳಿಯ ರಾಜೀವ್ ನಗರದ ಎರಡನೇ ಹಂತದ ಕಾರ್ಪೊರೇಷನ್ ಪಾರ್ಕ್ ಒಳಗೆ ಶೆಡ್ ಹಾಕಿ ಸ್ಥಾಪಿಸಿದ್ದರು. ಪ್ರತಿದಿನ, 100-150 ಕ್ಕೂ ಹೆಚ್ಚು ಜನರು ಅವರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದರು. ಕನ್ನಡ, ಇಂಗ್ಲಿಷ್, ಉರ್ದು ಮತ್ತು ತಮಿಳು ಸೇರಿದಂತೆ 17 ಕ್ಕೂ ಹೆಚ್ಚು ಪತ್ರಿಕೆಗಳನ್ನು ಇಸಾಕ್ ಖರೀದಿಸುತ್ತಿದ್ದರು.

“ಬೆಳಿಗ್ಗೆ 4 ಗಂಟೆಗೆ, ಗ್ರಂಥಾಲಯದ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಒಳಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ಮಾಹಿತಿ ನೀಡಿದರು. ನಾನು ಗ್ರಂಥಾಲಯಕ್ಕೆ ಧಾವಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ಪುಸ್ತಕಗಳು ಬೂದಿಯಾಗುವುದನ್ನು ನೋಡಿದೆ. ”ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಘಟನೆಯ ನಂತರ, ಸೈಯದ್ ಇಸಾಕ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ, ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

ಘಟನೆಯಿಂದ ನೊಂದಿದ್ದರು ಕೂಡ ಮತ್ತೆ ಗ್ರಂಥಾಲಯವನ್ನು ಕಟ್ಟುತ್ತೇನೆ ಎಂದಿದ್ದಾರೆ. ಇಸಾಕ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...