Homeಕರ್ನಾಟಕಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -
- Advertisement -

ಕಳೆದ 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯದಲ್ಲಿ 11 ಸಾವಿರ ಪುಸ್ತಕಗಳಿದ್ದು, ಎಲ್ಲವೂ ಬೆಂಕಿಗಾಹುತಿಯಾಗಿವೆ.

ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ 10 ವರ್ಷಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಕನ್ನಡ ಸಾರ್ವಜನಿಕ ಗ್ರಂಥಾಲಯ ಆರಂಭಿಸಿದ್ದರು. ಇದರಿಂದ ರಾಜೀವ್ ನಗರ ಮತ್ತು ಶಾಂತಿ ನಗರದ ನಿವಾಸಿಗಳಲ್ಲಿ ಜನಪ್ರಿಯ ಮುಖವಾಗಿದ್ದರು. ಇದನ್ನು ಸಹಿಸದ ಕೆಲವರು ಅನೇಕ ಬಾರಿ ಗಲಾಟೆ ಮಾಡಿದ್ದರು. ಈಗ ಶುಕ್ರವಾರ ಬೆಳಗಿನ ಜಾವದಲ್ಲಿ ಗ್ರಂಥಾಲಯಕ್ಕೆ ಬೆಂಕಿ ಹಚ್ಚಿದ್ದಾರೆ.

ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯದಲ್ಲಿ 3 ಸಾವಿರ ಕನ್ನಡ ಪುಸ್ತಕಗಳು, ಭಗವದ್ ಗೀತೆಯ 3 ಸಾವಿರ ಪ್ರತಿಗಳು, 3 ಸಾವಿರ ಕುರಾನ್ ಪ್ರತಿಗಳು, 1 ಸಾವಿರ ಉರ್ದು ಪುಸ್ತಕಗಳು ಹಾಗೂ ಬೈಬಲ್‌ನ 1 ಸಾವಿರ ಕನ್ನಡ ಪ್ರತಿಗಳು ಇದ್ದವು. ಇವುಗಳಲ್ಲಿ ಬಹಳಷ್ಟು ದಾನಿಗಳಿಂದ ಸಂಗ್ರಹಿಸಿದ್ದು ಎಂದು ಸೈಯದ್ ಇಸಾಕ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಶಿಕ್ಷಣದಿಂದ ವಂಚಿತರಾಗಿದ್ದ ಸೈಯದ್ ಇಸಾಕ್, ಅಂಡರ್ ಗ್ರೌಂಡ್ ಡ್ರೈನೇಜ್ (ಯುಜಿಡಿ) ಕ್ಲೀನರ್ ಆಗಿ ಕೆಲಸ ಮಾಡುತ್ತಾರೆ. ಜನರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮತ್ತು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ, ಈ ಸಾರ್ವಜನಿಕ ಗ್ರಂಥಾಲಯವನ್ನು ಆರಂಭಿಸಿದ್ದರು.

ಅಮ್ಮರ್ ಮಸೀದಿ ಬಳಿಯ ರಾಜೀವ್ ನಗರದ ಎರಡನೇ ಹಂತದ ಕಾರ್ಪೊರೇಷನ್ ಪಾರ್ಕ್ ಒಳಗೆ ಶೆಡ್ ಹಾಕಿ ಸ್ಥಾಪಿಸಿದ್ದರು. ಪ್ರತಿದಿನ, 100-150 ಕ್ಕೂ ಹೆಚ್ಚು ಜನರು ಅವರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದರು. ಕನ್ನಡ, ಇಂಗ್ಲಿಷ್, ಉರ್ದು ಮತ್ತು ತಮಿಳು ಸೇರಿದಂತೆ 17 ಕ್ಕೂ ಹೆಚ್ಚು ಪತ್ರಿಕೆಗಳನ್ನು ಇಸಾಕ್ ಖರೀದಿಸುತ್ತಿದ್ದರು.

“ಬೆಳಿಗ್ಗೆ 4 ಗಂಟೆಗೆ, ಗ್ರಂಥಾಲಯದ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಒಳಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ಮಾಹಿತಿ ನೀಡಿದರು. ನಾನು ಗ್ರಂಥಾಲಯಕ್ಕೆ ಧಾವಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ಪುಸ್ತಕಗಳು ಬೂದಿಯಾಗುವುದನ್ನು ನೋಡಿದೆ. ”ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಘಟನೆಯ ನಂತರ, ಸೈಯದ್ ಇಸಾಕ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ, ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

ಘಟನೆಯಿಂದ ನೊಂದಿದ್ದರು ಕೂಡ ಮತ್ತೆ ಗ್ರಂಥಾಲಯವನ್ನು ಕಟ್ಟುತ್ತೇನೆ ಎಂದಿದ್ದಾರೆ. ಇಸಾಕ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...