Homeಕರ್ನಾಟಕಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಮೈಸೂರು: ಎನ್‌ಇಪಿ-2020 ಅಡಿ ವ್ಯಾಸಂಗ ಮಾಡಿರುವ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್‌  ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇ಼ಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು, “ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಬೇಕು, ಬೇಡಿಕೆ ಇರುವಷ್ಟು ಹಾಸ್ಟೆಲ್‌ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾಧ್ಯಕ್ಷರಾದ ಸುಭಾಷ್, “ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಈ ಕೂಡಲೇ ಎನ್‌ಇಪಿ ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು” ಎಂದರು.

ಸಂಘಟನೆಯ ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ತಿಳಿಸಿದರು.

ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿಯ ಸದಸ್ಯರಾದ ಚಂದ್ರಿಕಾ, ಬಿ.ಆರ್.ಚಂದನಾ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...