Homeಕರ್ನಾಟಕಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಮೈಸೂರು: ಎನ್‌ಇಪಿ-2020 ಅಡಿ ವ್ಯಾಸಂಗ ಮಾಡಿರುವ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್‌  ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇ಼ಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು, “ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಬೇಕು, ಬೇಡಿಕೆ ಇರುವಷ್ಟು ಹಾಸ್ಟೆಲ್‌ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾಧ್ಯಕ್ಷರಾದ ಸುಭಾಷ್, “ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಈ ಕೂಡಲೇ ಎನ್‌ಇಪಿ ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು” ಎಂದರು.

ಸಂಘಟನೆಯ ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ತಿಳಿಸಿದರು.

ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿಯ ಸದಸ್ಯರಾದ ಚಂದ್ರಿಕಾ, ಬಿ.ಆರ್.ಚಂದನಾ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....