Homeಕರ್ನಾಟಕಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪದವಿ ಫಲಿತಾಂಶ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಮೈಸೂರು: ಎನ್‌ಇಪಿ-2020 ಅಡಿ ವ್ಯಾಸಂಗ ಮಾಡಿರುವ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್‌  ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇ಼ಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು, “ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಬೇಕು, ಬೇಡಿಕೆ ಇರುವಷ್ಟು ಹಾಸ್ಟೆಲ್‌ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾಧ್ಯಕ್ಷರಾದ ಸುಭಾಷ್, “ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಈ ಕೂಡಲೇ ಎನ್‌ಇಪಿ ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು” ಎಂದರು.

ಸಂಘಟನೆಯ ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ತಿಳಿಸಿದರು.

ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿಯ ಸದಸ್ಯರಾದ ಚಂದ್ರಿಕಾ, ಬಿ.ಆರ್.ಚಂದನಾ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...