Homeಕರ್ನಾಟಕಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

ಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

- Advertisement -
- Advertisement -

ಮೈಸೂರು: ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದಿಢೀರನೇ ಸಾವಿರಾರು ರೂಪಾಯಿ ಶುಲ್ಕವನ್ನು ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು ಹೋರಾಟ ನಡೆಸುತ್ತಿದ್ದಾರೆ.

ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆ ಎದುರುಗಡೆ ಜಮಾಯಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದೆ.ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30,000 ಹಾಗೂ ಯುವರಾಜ ಕಾಲೇಜಿನಲ್ಲಿ 30ರಿಂದ 60 ಸಾವಿರ ರೂ. ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಪ್ರವೇಶ ಶುಲ್ಕವನ್ನು ಕಟ್ಟಲು ಸಾಧ್ಯವಿಲ್ಲ. ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ವಿದ್ಯಾರ್ಥಿವೇತನ ಬಂದ ನಂತರ ಕಟ್ಟಲಾಗುವುದು. ಅದಕ್ಕಾಗಿ ಸಮಯಾವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಎಷ್ಟೋ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರ ರೈತರ ಕೂಲಿ ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟಲು ಸಾಧ್ಯ? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

“ಕಾಲೇಜಿಗೆ ನೇರವಾಗಿ ಸ್ಕಾಲರ್‌ಶಿಪ್‌ ರೂಪದಲ್ಲಿ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸುತ್ತಿದ್ದ ಸರ್ಕಾರ ಈಗ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡುವುದಾಗಿ ಹೇಳಿ ವಂಚಿಸುತ್ತಿದೆ. ಸ್ಕಾಲರ್‌ಶಿಪ್‌ ನಿಮ್ಮ ಖಾತೆಗೆ ಬಂದಿದ್ದು, ಅದನ್ನು ವಿತ್‌‌ಡ್ರಾ ಮಾಡಿಕೊಂಡು ಪ್ರವೇಶಾತಿ ಪಡೆಯಿರಿ ಎಂದು ಕಾಲೇಜುಗಳು ಒತ್ತಡ ಸೃಷ್ಟಿಸಿವೆ. ಆದರೆ ನಮಗೆ ಯಾವುದೇ ಹಣ ಸರ್ಕಾರದಿಂದ ಬಂದಿಲ್ಲ. ಈ ಮೂಲಕ ಸರ್ಕಾರ ಮತ್ತು ವಿಶ್ವವಿದ್ಯಾನಿಲಯ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮನವಿ ಪತ್ರವನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಸುಭಾಷ್, ಚಂದ್ರಕಲಾ, ಆಸಿಯಾ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ ವಿದ್ಯಾರ್ಥಿಗಳಾದ ಸಂಗೀತಾ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲಾ, ರಮ್ಯಾ, ಕೋಮಲಾ ಹಾಗೂ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...