Homeಕರ್ನಾಟಕಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

ಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

- Advertisement -
- Advertisement -

ಮೈಸೂರು: ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದಿಢೀರನೇ ಸಾವಿರಾರು ರೂಪಾಯಿ ಶುಲ್ಕವನ್ನು ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು ಹೋರಾಟ ನಡೆಸುತ್ತಿದ್ದಾರೆ.

ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆ ಎದುರುಗಡೆ ಜಮಾಯಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದೆ.ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30,000 ಹಾಗೂ ಯುವರಾಜ ಕಾಲೇಜಿನಲ್ಲಿ 30ರಿಂದ 60 ಸಾವಿರ ರೂ. ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಪ್ರವೇಶ ಶುಲ್ಕವನ್ನು ಕಟ್ಟಲು ಸಾಧ್ಯವಿಲ್ಲ. ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ವಿದ್ಯಾರ್ಥಿವೇತನ ಬಂದ ನಂತರ ಕಟ್ಟಲಾಗುವುದು. ಅದಕ್ಕಾಗಿ ಸಮಯಾವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಎಷ್ಟೋ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರ ರೈತರ ಕೂಲಿ ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟಲು ಸಾಧ್ಯ? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

“ಕಾಲೇಜಿಗೆ ನೇರವಾಗಿ ಸ್ಕಾಲರ್‌ಶಿಪ್‌ ರೂಪದಲ್ಲಿ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸುತ್ತಿದ್ದ ಸರ್ಕಾರ ಈಗ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡುವುದಾಗಿ ಹೇಳಿ ವಂಚಿಸುತ್ತಿದೆ. ಸ್ಕಾಲರ್‌ಶಿಪ್‌ ನಿಮ್ಮ ಖಾತೆಗೆ ಬಂದಿದ್ದು, ಅದನ್ನು ವಿತ್‌‌ಡ್ರಾ ಮಾಡಿಕೊಂಡು ಪ್ರವೇಶಾತಿ ಪಡೆಯಿರಿ ಎಂದು ಕಾಲೇಜುಗಳು ಒತ್ತಡ ಸೃಷ್ಟಿಸಿವೆ. ಆದರೆ ನಮಗೆ ಯಾವುದೇ ಹಣ ಸರ್ಕಾರದಿಂದ ಬಂದಿಲ್ಲ. ಈ ಮೂಲಕ ಸರ್ಕಾರ ಮತ್ತು ವಿಶ್ವವಿದ್ಯಾನಿಲಯ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮನವಿ ಪತ್ರವನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಸುಭಾಷ್, ಚಂದ್ರಕಲಾ, ಆಸಿಯಾ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ ವಿದ್ಯಾರ್ಥಿಗಳಾದ ಸಂಗೀತಾ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲಾ, ರಮ್ಯಾ, ಕೋಮಲಾ ಹಾಗೂ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...