Homeಕರ್ನಾಟಕಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

ಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

- Advertisement -
- Advertisement -

ಮೈಸೂರು: ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದಿಢೀರನೇ ಸಾವಿರಾರು ರೂಪಾಯಿ ಶುಲ್ಕವನ್ನು ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು ಹೋರಾಟ ನಡೆಸುತ್ತಿದ್ದಾರೆ.

ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆ ಎದುರುಗಡೆ ಜಮಾಯಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದೆ.ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30,000 ಹಾಗೂ ಯುವರಾಜ ಕಾಲೇಜಿನಲ್ಲಿ 30ರಿಂದ 60 ಸಾವಿರ ರೂ. ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಪ್ರವೇಶ ಶುಲ್ಕವನ್ನು ಕಟ್ಟಲು ಸಾಧ್ಯವಿಲ್ಲ. ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ವಿದ್ಯಾರ್ಥಿವೇತನ ಬಂದ ನಂತರ ಕಟ್ಟಲಾಗುವುದು. ಅದಕ್ಕಾಗಿ ಸಮಯಾವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಎಷ್ಟೋ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರ ರೈತರ ಕೂಲಿ ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟಲು ಸಾಧ್ಯ? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

“ಕಾಲೇಜಿಗೆ ನೇರವಾಗಿ ಸ್ಕಾಲರ್‌ಶಿಪ್‌ ರೂಪದಲ್ಲಿ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸುತ್ತಿದ್ದ ಸರ್ಕಾರ ಈಗ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡುವುದಾಗಿ ಹೇಳಿ ವಂಚಿಸುತ್ತಿದೆ. ಸ್ಕಾಲರ್‌ಶಿಪ್‌ ನಿಮ್ಮ ಖಾತೆಗೆ ಬಂದಿದ್ದು, ಅದನ್ನು ವಿತ್‌‌ಡ್ರಾ ಮಾಡಿಕೊಂಡು ಪ್ರವೇಶಾತಿ ಪಡೆಯಿರಿ ಎಂದು ಕಾಲೇಜುಗಳು ಒತ್ತಡ ಸೃಷ್ಟಿಸಿವೆ. ಆದರೆ ನಮಗೆ ಯಾವುದೇ ಹಣ ಸರ್ಕಾರದಿಂದ ಬಂದಿಲ್ಲ. ಈ ಮೂಲಕ ಸರ್ಕಾರ ಮತ್ತು ವಿಶ್ವವಿದ್ಯಾನಿಲಯ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮನವಿ ಪತ್ರವನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಸುಭಾಷ್, ಚಂದ್ರಕಲಾ, ಆಸಿಯಾ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ ವಿದ್ಯಾರ್ಥಿಗಳಾದ ಸಂಗೀತಾ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲಾ, ರಮ್ಯಾ, ಕೋಮಲಾ ಹಾಗೂ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...