Homeಕರ್ನಾಟಕಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

- Advertisement -
- Advertisement -

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂತಹ ಘಟನೆಗಳನ್ನ ದೆಹಲಿಯ ನಿರ್ಭಯಾ ಕೇಸ್‌ನಂತೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

“ಯುವತಿ ತನ್ನ ಸ್ನೇಹಿತನ ಜತೆ ವಾಯುವಿಹಾರಕ್ಕೆ ಅಲ್ಲಿಗೆ ಹೋಗಿದ್ದರು. ಆ ವೇಳೆ ಅತ್ಯಾಚಾರ ನಡೆದಿದೆ. ಮೈಸೂರು ಒಂದು ಸಾಂಸ್ಕೃತಿಕ ನಗರಿ ಜೊತೆಗೆ ಎಜುಕೇಷನ್ ಹಬ್ ಕೂಡ ಹೌದು. ಇಲ್ಲಿಗೆ ಸಾವಿರಾರು ಜನ ಪ್ರವಾಸಿಗರು ಬರುತ್ತಾರೆ. ಇಂತಹ ನಗರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಇದು ಪ್ರವಾಸಿಗರ ಮೇಲೆ ಪರಿಣಾಮ ಬೀರುತ್ತೆ. ಈ ಘಟನೆಯಿಂದ ಜನ ಭಯಭೀತರಾಗಿದ್ದಾರೆ” ಎಂದಿದ್ದಾರೆ.

’ನಾನು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೆ. ನಮ್ಮ ಕಾಂಗ್ರೆಸ್ ನಿಂದ ಸತ್ಯಶೋಧನಾ ಸಮಿತಿ ರಚಿಸಿದ್ದವು. ಅವರು ಅಲ್ಲಿಗೆ ಹೋಗಿ ಪರಿಶೀಲಿಸಿ ಕೆಲ ಪ್ರಶ್ನೆಗಳನ್ನ ಎತ್ತಿದ್ದಾರೆ. ಇಂತಹ ಘಟನೆಗಳನ್ನ ದೆಹಲಿಯ ನಿರ್ಭಯಾ ಕೇಸ್ ನಂತೆ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಗಂಭೀರ ಪ್ರಕರಣದಲ್ಲೂ. ಕೇಸ್ ದಾಖಲಿಸಲು ಪೊಲೀಸರು ಏಕೆ ತಡ ಮಾಡಿದರು..? ಘಟನೆ ನಡೆದ 14 ರಿಂದ 15 ಗಂಟಗಳ ಬಳಿಕ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಅನಗತ್ಯವಾಗಿ ತಡ ಮಾಡಿದ್ದು ಏಕೆ..? ಯುವತಿಯ ಹೇಳಿಕೆಯನ್ನ ಕೂಡ ದಾಖಲಿಸಲಿಲ್ಲ’ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಸಂತ್ರಸ್ತ ಯುವತಿ, ಮತ್ತು ಯುವಕನ ಮುಂದೆ ಆರೋಪಿಗಳ ಪರೇಡ್ ನಡೆಸಿಲ್ಲ. ಆರೋಪಿಗಳನ್ನ ಗುರುತಿಸುವ ಕೆಲಸ ಆಗಿಲ್ಲ. ‘ಸಂಜೆ ಬಳಿಕ ಯುವತಿ ಅಲ್ಲಿಗೆ ಹೋಗಿದ್ದು ಏಕೆ ಎಂದೂ ಗೃಹ ಸಚಿವರು ಪ್ರಶ್ನಿಸಿದ್ದಾರೆ. ಹೆಣ್ಣು ಮಕ್ಕಳು ಸಂಜೆ ಮೇಲೆ ಏಕೆ ಓಡಾಡಬಾರದು’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದಾದ ಬಳಿಕ  ರಾಜ್ಯದ ಇತರೆ ಕಡೆ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಗಸ್ಟ್ 24 ರಂದೇ ತುಮಕೂರಿನಲ್ಲಿ ದನ ಕಾಯುವ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ನಾಯ್ಡು ನಗರದಲ್ಲಿ ಹಾಸ್ಟೆಲ್‌ಗೆ ನುಗ್ಗುತ್ತಾರೆ, ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ನಡೆಸ್ತಾರೆ. ಯಾದಗಿರಿಯಲ್ಲಿ ಬೆತ್ತಲೆ ಮಾಡಿ ಸಿಗರೇಟ್‌ನಲ್ಲಿ ಸುಡ್ತಾರೆ, ಹೆಣ್ಣುಮಗಳ ಮೈ ಸುಡ್ತಾರೆ. ಇದು ಎಂಥಹ ಅಮಾನವೀಯ ಕೃತ್ಯ. ಸುದ್ದಿ ಪತ್ರಿಕೆಗಳಲ್ಲಿ ಬಂದ ಮೇಲೆ ಎಫ್‌ಐಆರ್ ಹಾಕುತ್ತಾರೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...