Homeಕರ್ನಾಟಕಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

- Advertisement -
- Advertisement -

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂತಹ ಘಟನೆಗಳನ್ನ ದೆಹಲಿಯ ನಿರ್ಭಯಾ ಕೇಸ್‌ನಂತೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

“ಯುವತಿ ತನ್ನ ಸ್ನೇಹಿತನ ಜತೆ ವಾಯುವಿಹಾರಕ್ಕೆ ಅಲ್ಲಿಗೆ ಹೋಗಿದ್ದರು. ಆ ವೇಳೆ ಅತ್ಯಾಚಾರ ನಡೆದಿದೆ. ಮೈಸೂರು ಒಂದು ಸಾಂಸ್ಕೃತಿಕ ನಗರಿ ಜೊತೆಗೆ ಎಜುಕೇಷನ್ ಹಬ್ ಕೂಡ ಹೌದು. ಇಲ್ಲಿಗೆ ಸಾವಿರಾರು ಜನ ಪ್ರವಾಸಿಗರು ಬರುತ್ತಾರೆ. ಇಂತಹ ನಗರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಇದು ಪ್ರವಾಸಿಗರ ಮೇಲೆ ಪರಿಣಾಮ ಬೀರುತ್ತೆ. ಈ ಘಟನೆಯಿಂದ ಜನ ಭಯಭೀತರಾಗಿದ್ದಾರೆ” ಎಂದಿದ್ದಾರೆ.

’ನಾನು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೆ. ನಮ್ಮ ಕಾಂಗ್ರೆಸ್ ನಿಂದ ಸತ್ಯಶೋಧನಾ ಸಮಿತಿ ರಚಿಸಿದ್ದವು. ಅವರು ಅಲ್ಲಿಗೆ ಹೋಗಿ ಪರಿಶೀಲಿಸಿ ಕೆಲ ಪ್ರಶ್ನೆಗಳನ್ನ ಎತ್ತಿದ್ದಾರೆ. ಇಂತಹ ಘಟನೆಗಳನ್ನ ದೆಹಲಿಯ ನಿರ್ಭಯಾ ಕೇಸ್ ನಂತೆ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಗಂಭೀರ ಪ್ರಕರಣದಲ್ಲೂ. ಕೇಸ್ ದಾಖಲಿಸಲು ಪೊಲೀಸರು ಏಕೆ ತಡ ಮಾಡಿದರು..? ಘಟನೆ ನಡೆದ 14 ರಿಂದ 15 ಗಂಟಗಳ ಬಳಿಕ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಅನಗತ್ಯವಾಗಿ ತಡ ಮಾಡಿದ್ದು ಏಕೆ..? ಯುವತಿಯ ಹೇಳಿಕೆಯನ್ನ ಕೂಡ ದಾಖಲಿಸಲಿಲ್ಲ’ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಸಂತ್ರಸ್ತ ಯುವತಿ, ಮತ್ತು ಯುವಕನ ಮುಂದೆ ಆರೋಪಿಗಳ ಪರೇಡ್ ನಡೆಸಿಲ್ಲ. ಆರೋಪಿಗಳನ್ನ ಗುರುತಿಸುವ ಕೆಲಸ ಆಗಿಲ್ಲ. ‘ಸಂಜೆ ಬಳಿಕ ಯುವತಿ ಅಲ್ಲಿಗೆ ಹೋಗಿದ್ದು ಏಕೆ ಎಂದೂ ಗೃಹ ಸಚಿವರು ಪ್ರಶ್ನಿಸಿದ್ದಾರೆ. ಹೆಣ್ಣು ಮಕ್ಕಳು ಸಂಜೆ ಮೇಲೆ ಏಕೆ ಓಡಾಡಬಾರದು’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದಾದ ಬಳಿಕ  ರಾಜ್ಯದ ಇತರೆ ಕಡೆ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಗಸ್ಟ್ 24 ರಂದೇ ತುಮಕೂರಿನಲ್ಲಿ ದನ ಕಾಯುವ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ನಾಯ್ಡು ನಗರದಲ್ಲಿ ಹಾಸ್ಟೆಲ್‌ಗೆ ನುಗ್ಗುತ್ತಾರೆ, ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ನಡೆಸ್ತಾರೆ. ಯಾದಗಿರಿಯಲ್ಲಿ ಬೆತ್ತಲೆ ಮಾಡಿ ಸಿಗರೇಟ್‌ನಲ್ಲಿ ಸುಡ್ತಾರೆ, ಹೆಣ್ಣುಮಗಳ ಮೈ ಸುಡ್ತಾರೆ. ಇದು ಎಂಥಹ ಅಮಾನವೀಯ ಕೃತ್ಯ. ಸುದ್ದಿ ಪತ್ರಿಕೆಗಳಲ್ಲಿ ಬಂದ ಮೇಲೆ ಎಫ್‌ಐಆರ್ ಹಾಕುತ್ತಾರೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟ: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆ ಯತ್ನ, ಮಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...