Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...