Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...