Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...