Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...