Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...