Homeಸಾಮಾಜಿಕಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

- Advertisement -
- Advertisement -

ಕಳೆದ ನಾಲ್ಕು ವರ್ಷಗಳಿಂದ ದೇಶದ ಹಲವಾರು ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಧ್ವನಿಯನ್ನು ಮೊಟಕುಗೊಳಿಸುವ ಸಂಚಿನಿಂದ ಸುದ್ದಿಯಾಗುತ್ತಲೇ ಇವೆ. ಬಲಪಂಥೀಯ ಮತೀಯವಾದ ಮತ್ತು ಜಾತಿವಾದಕ್ಕೆ ವಿವಿಗಳು ಬಲಿಯಾಗುತ್ತಿವೆ. ಜಾತಿ-ಧರ್ಮವನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಮೈಸೂರು ವಿಶ್ವವಿದ್ಯಾಲಯವು ರೋಹಿತ್ ವೇಮುಲ ಪ್ರಕರಣವನ್ನು ನೆನಪಿಸುವಂತಹ ಪ್ರಕರಣವೊಂದಕ್ಕೆ ಸಾಕ್ಷಿಯಾಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲ.
ಹಾಗೆಂದು ಮೈಸೂರು ಅಥವಾ ಬೆಂಗಳೂರಿನಂತಹ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅಥವಾ ಅಧ್ಯಾಪಕರು ದನಿಯಿಲ್ಲದವರೇನೂ ಅಲ್ಲ. ಮಾನಸ ಗಂಗೋತ್ರಿಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟವು ಕಳೆದ 25 ವರ್ಷಗಳಿಂದ ವಿವಿಯೊಳಗೆ ವಿದ್ಯಾರ್ಥಿಗಳ ಪರವಾದ ಹೋರಾಟಗಳನ್ನು ಮಾಡುತ್ತಾ ಬಂದಿದೆ. 2013ರಲ್ಲಿ ಇತಿಹಾಸ ವಿಭಾಗಕ್ಕೆ ಎಂ.ಎ. ಪದವಿಗಾಗಿ ಪ್ರವೇಶ ಪಡೆದ ಮಹೇಶ್ ಸೋಸಲೆ ಎಂಬ ವಿದ್ಯಾರ್ಥಿ ವಿವಿ ಆಡಳಿತದ ಅಕ್ರಮ ಆಡಳಿತ, ಭ್ರಷ್ಟಾಚಾರ, ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹೇಶ್ ಕಳೆದ ವರ್ಷ ದಲಿತ ವಿದ್ಯಾರ್ಥಿ ಒಕ್ಕೂಟದ ಗೌರವಾಧ್ಯಕ್ಷನಾಗಿ ಆಯ್ಕೆಯಾಗಿದ್ದರು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಅನಾನುಕೂಲಗಳು ಮತ್ತು ವಿವಿಯ ಲೋಪಗಳನ್ನು ಪ್ರಶ್ನಿಸಿದ್ದರು. ಈತ ಎಂ.ಎ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕವನ್ನೂ ಪಡೆದು ತನ್ನ ಮುಡಿಗೇರಿಸಿಕೊಂಡಿದ್ದರು.
ವಿದ್ಯಾಭ್ಯಾಸದಲ್ಲೂ ಮುಂದಿರುವ ಮಹೇಶ್ ಈ ವರ್ಷ ಇತಿಹಾಸ ವಿಭಾಗದಲ್ಲಿಯೇ ಪಿಹೆಚ್‍ಡಿ ಸ್ಕಾಲರ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪಿಹೆಚ್‍ಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಸೀಟುಕೊಡಬೇಕೆಂಬುದು ವಿವಿಯ ನಿಯಮವೂ ಹೌದು. ಆದರೆ ಮಹೇಶ್‍ನನ್ನು ವಿವಿ ಆಡಳಿತ ಹಾಸ್ಟೆಲ್‍ನಿಂದ ಹೊರಗಿಟ್ಟಿತು. ಮಹೇಶ್ ಸೋಸಲೆ ಹಾಸ್ಟೆಲ್‍ನಲ್ಲಿ ಅಕ್ರಮವಾಗಿ ನೆಲೆಸಿದ್ದು ಶೈಕ್ಷಣಿಕ ವಾತವರಣಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆಂದೂ ಹಾಗೂ ಆಡಳಿತ ವೈಖರಿಯನ್ನು ಪ್ರಶ್ನಿಸುತ್ತಾ ಕಛೇರಿ ಕೆಲಸಕ್ಕೆ ಅಡಚಣೆಯುಂಟುಮಾಡುತ್ತಿದ್ದಾರೆಂದೂ ಆರೋಪಿಸಿ ಮಹೇಶ್‍ನನ್ನು ಕಪ್ಪುಪಟ್ಟಿಗೆ ಸೇರಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಕೋರಿದಲ್ಲಿ ಅವಕಾಶ ಕಲ್ಪಿಸಬಾರದೆಂದು ಆದೇಶವನ್ನೂ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಇರುವಾಗ ಈ ವಿದ್ಯಾರ್ಥಿಗೆ ಮಾತ್ರ ಯಾಕೆ ಹೀಗೆ ಎಂದು ನೋಡಿದರೆ ಅಸಲೀ ಸಂಗತಿಗಳು ಬಿಚ್ಚಿಕೊಳ್ಳುತ್ತವೆ. ಮಹೇಶ್ ವಿದ್ಯಾರ್ಥಿ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಂತರ ವಿವಿಯ ಭ್ರಷ್ಟಾಚಾರಗಳನ್ನು ಪ್ರಶ್ನಿಸುವುದರಲ್ಲಿ ಮೊದಲಿಗನಾಗಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವಂತೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಜುಲೈ 10ರಂದು ವಿವಿ ಕಾರ್ಯಸೌಧದ ಎದುರು ಪ್ರತಿಭಟನೆ ಮಾಡಿದ್ದರು. ನಂತರ ಜುಲೈ 17ರಂದು ಡೀನ್ ಆಫೀಸ್ ಮಂಭಾಗ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿ ಬೃಹತ್ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.
ಅದಷ್ಟೇ ಅಲ್ಲದೆ ಕಳೆದ ವರ್ಷ ವಿವಿಯ ಆಡಳಿತವು 124 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದರಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿವೆ. ನೇಮಕಾತಿಯ ವೇಳೆಯಲ್ಲಿ ಯಾವುದೇ ನೋಟಿಫಿಕೇಷನ್ ನೀಡಿರಲಿಲ್ಲ ಹಾಗೂ ರೋಸ್ಟರ್ ಕೂಡ ಫಾಲೋ ಮಾಡಿರಲಿಲ್ಲವೆಂಬುದು ಆರೋಪ. ಹಾಗಾಗಿ ಈ ನೇಮಕಾತಿ ಅಕ್ರಮವಾದುದ್ದೆಂದು ರಾಜ್ಯಪಾಲರ ಕಛೇರಿಯಿಂದ ಪರಿಶೀಲನೆ ನಡೆದು ಈ ನೇಮಕಾತಿಯನ್ನು ಕೈ ಬಿಡಬೇಕೆಂದು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶವನ್ನೂ ಸಹ ನೀಡಲಾಗಿತ್ತು. ಒಂದು ತಿಂಗಳಾದರೂ ಆದೇಶವನ್ನು ಜಾರಿಮಾಡದ ವಿವಿಯ ವಿರುದ್ಧ ವಿದ್ಯಾರ್ಥಿ ಒಕ್ಕೂಟವು ಆಗಸ್ಟ್ 10ರಂದು ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ನಾಯಕತ್ವವನ್ನು ಮಹೇಶ್ ವಹಿಸಿಕೊಂಡಿದ್ದರು. ಜುಲೈ 17ರಂದು ನಡೆದ ಪ್ರತಿಭಟನೆಯನ್ನು ಆಧಾರವಾಗಿ ಇಟ್ಟುಕೊಂಡು ಡೀನ್ ಪ್ರವೀಣ್ ಅವರು ಆಗಸ್ಟ್ 18ರಂದು ಪೋಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ದೂರು ನೀಡಿ ಎಫ್‍ಐಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ಆಡಳಿತವು ಈತನ ಹಾಸ್ಟೆಲ್ ಪ್ರವೇಶಾತಿಗೆ ಅನುಮತಿ ನಿರಾಕರಿಸಲು ಕೋರಿ ಕುಲಪತಿಗೆ ಪತ್ರ ಬರೆದಿತ್ತು. ಕೋರಿಕೆಗೆ ಸಮ್ಮತಿಸಿರುವ ಕುಲಪತಿ ಕಛೇರಿ ಕೆಲಸಕ್ಕೆ ಅಡಚಣೆ ಮಾಡಿರುವುದರಿಂದ, ಕಪ್ಪುಪಟ್ಟಿಗೆ ಸೇರಿಸಿದ್ದೇವೆ ಮತ್ತು ಆತನಿಗೆ ಪ್ರವೇಶಾತಿಯನ್ನು ನೀಡಬಾರದೆಂದು ಆಗಸ್ಟ್ 14ರಂದು ಲಿಖಿತವಾಗಿ ಅನುಮತಿ ನೀಡಿದೆ ಹಾಗೂ ಈ ವಿಚಾರವಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದೂ ಸಹ ವಿವಿ ಆಡಳಿತ ಬೆದರಿಕೆ ಹಾಕಿದೆ.
ಆದರೆ, ಮಹೇಶ್‍ನನ್ನು ಕಪ್ಪುಪಟ್ಟಿ ಸೇರಿಸುವುದಾಗಿ ಅಥವಾ ಸೇರಿಸಿರುವುದಾಗಿ ಆತನಿಗೆ ಈವರೆಗೂ ಯಾವುದೇ ನೋಟೀಸ್ ನೀಡಿಲ್ಲ. ಅಲ್ಲದೆ ವಿವಿಯ ಶಿಸ್ತುಪಾಲನಾ ಕಮಿಟಿಯು ಈತನನ್ನು ಇದುವರೆಗೆ ಒಮ್ಮೆಯೂ ವಿಚಾರಣೆಯನ್ನು ಮಾಡಿಲ್ಲ. ತಮ್ಮ ಅಕ್ರಮಗಳ ಬಗೆಗೆ ಪ್ರಶ್ನಿಸುತ್ತಾರೆಂಬ ಒಂದೇ ಒಂದು ಕಾರಣಕ್ಕೆ ಏಕಾಏಕಿ ಹಾಸ್ಟೆಲ್‍ನಿಂದ ಹೊರದಬ್ಬಿದ್ದಾರೆ. ಹಾಸ್ಟೆಲ್ ನಿರಾಕರಣೆಯನ್ನು ಪ್ರಶ್ನಿಸಿ ನನ್ನನ್ನು ಮಾನಸಿಕವಾಗಿ ಹಿಂಸೆಗೆ ಸಿಲುಕಿಸಲು ಕಾರಣವೇನು? ಹಾಗೂ ಪ್ರತಿದಿನ ಊರಿನಿಂದ ಪ್ರಯಾಣ ಮಾಡಿದರೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಮಹೇಶ್ ಇದುವರೆಗೂ 2 ಬಾರಿ ಪತ್ರ ಬರೆದಿದ್ದಾರೆ. ಆದರೆ ಯಾವುದೇ ಪತ್ರಕ್ಕೂ ಕುಲಪತಿಗಳಿಂದ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಕಳೆದ ಎಂಟು ದಿನಗಳಿಂದ ಹಾಸ್ಟೆಲ್‍ನ ಕಾರಿಡಾರ್‍ನಲ್ಲಿ ವಾಸಿಸುತ್ತಿರುವ ಮಹೇಶ್ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

university order letter

ಒಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ವಿಷಯದಲ್ಲಿ ನಡೆಯುವ ಅಕ್ರಮಗಳು, ಭ್ರಷ್ಟಾಚಾರಗಳು, ಆಡಳಿತ ದೋಷಗಳನ್ನು ಪ್ರಶ್ನಿಸಿದರೆ ಅವರನ್ನು ಎಲ್ಲಾ ಸೌಕರ್ಯಗಳಿಂದ ಹೊರದಬ್ಬುವುದು ಇತ್ತೀಚಿನ ವರ್ಷಗಳಲ್ಲಿ ಸಹಜ ಎನ್ನುವಂತೆ ಆಗಿಹೋಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವೆಂದೇ ಹೆಸರು ಪಡೆದಿರುವ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮೊಳಗಿಸುತ್ತಿದ್ದ ಪ್ರಜಾತಂತ್ರದ ಧ್ವನಿಯನ್ನು ಹತ್ತಿಕ್ಕಲು ಪಿಎಚ್‍ಡಿ ಸ್ಕಾಲರ್ ಕನ್ಹಯ್ಯ ಕುಮಾರ್‍ನ ಮೇಲೆ ರಾಷ್ಟ್ರದ್ರೋಹಿಯೆಂದು ಬಂಧನದಲ್ಲಿಡಲಾಗಿತ್ತು.
ಆ ಸುದ್ದಿ ಮಾಸುವ ಮೊದಲೇ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆ ಕಟ್ಟಿಕೊಂಡು ದಲಿತ ವಿದ್ಯಾರ್ಥಿಗಳ ಪರವಾಗಿ ಹಾಗೂ ವಿವಿಯ ದುರಾಡಳಿತ ವಿರುದ್ಧ ಹೋರಾಟ ಮಾಡುತ್ತಿದ್ದ ರೋಹಿತ್ ವೇಮುಲನ ಮೇಲೆ ಆಡಳಿತವು ಬಿದ್ದಿತು. ಎಬಿವಿಪಿ ಗೂಂಡಾಗಳು ರೂಪಿಸಿದ್ದ ಸಂಚಿಗೆ ಕೈ ಜೋಡಿಸಿದ್ದ ಹೆಚ್‍ಸಿಯುನ ಕುಲಪತಿ ಅಪ್ಪಾರಾವ್ ಮತ್ತು ಕೇಂದ್ರ ಸಚಿವೆ ಸ್ಮøತಿ ಇರಾನಿ ವೇಮುಲನ ಫೆಲೋಶಿಪ್ ಕಡಿತಗೊಳಿಸಿ ವಿದ್ಯಾರ್ಥಿ ನಿಲಯದಿಂದ ಹೊರಹಾಕಿದ್ದರು. ತನ್ನ ಫೆಲೋಶಿಪ್ ಕೇಳಿ ಒತ್ತಾಯಿಸಿ ಹೋರಾಡಿದ ವೇಮುಲ 2016ರ ಜನವರಿ 17ರಂದು ತನಗಾದ ಅನ್ಯಾಯದ ಬಗೆಗೆ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇಂತಹ ದೌರ್ಜನ್ಯ ದಬ್ಬಾಳಿಕೆಯ ಪಟ್ಟಿಗೆ ಈಗ ಮೈಸೂರು ವಿವಿಯೂ ಸೇರಿದಂತಾಗಿದೆ. ಇದು ಆಧಿಕಾರದಲ್ಲಿರುವವರ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು ದನಿಯೆತ್ತದಂತೆ ಅವರನ್ನು ನಿಯಂತ್ರಿಸಲು ಸರ್ಕಾರಗಳು ಮತ್ತು ಅಧಿಕಾರಿ ವರ್ಗ ಮಾಡಿರುವ ಹುನ್ನಾರವಾಗಿದೆ. ಮೈಸೂರಿನವರೇ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಇದೆಲ್ಲಾ ಕೇಳಿಸುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...